Homeಕರ್ನಾಟಕದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

- Advertisement -
- Advertisement -

ಫೇಸ್‌‌ಬುಕ್‌ ಪೋಸ್ಟ್‌ ವಿಚಾರವಾಗಿ ತ೦ಡವೊ೦ದು ವ್ಯಕ್ತಿಯೋರ್ವರ ಮನೆಗೆ ಅಕ್ರಮ ಪ್ರವೇಶಗೈದು ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗ ಬೆಳ್ಳೂರುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಬಿಜೆಪಿಯ ಸ್ಥಳೀಯ ನಾಯಕ ಪ್ರಕಾಶ್ ಬೆಳ್ಳೂರು ಎಂದು ಗುರುತಿಸಲಾಗಿದ್ದು, ಹಲ್ಲೆ ಮಾಡಿದವರನ್ನು ಬಿಜೆಪಿ ಬೆಂಬಲಿತ ಸಂಘಟನೆಯಾಗಿರುವ ಬಜರಂಗ ದಳದ ಕಾರ್ಯಕರ್ತರು ಎಂದು ವಾರ್ತಾಭಾರತಿ ಪತ್ರಿಕೆ ಉಲ್ಲೇಖ ಮಾಡಿದೆ.

“ತಮ್ಮಿಂದ 25 ಸಾವಿರ ಹಣ ಪಡೆದುಕೊಂಡಿದ್ದಾರೆ ಎಂದು ರತ್ನಾಕರ್‌ ಕೋಟ್ಯಾನ್ ಎಂಬವರು ಅಪಪ್ರಚಾರ ಮಾಡುತ್ತಿದ್ದಾರೆ, ಈ ಬಗ್ಗೆ ಪಣೋಲಿಬೈಲಿನ ದೈವಸ್ಥಾನದಲ್ಲಿ ನಾನು ಆಣೆ ಪ್ರಮಾಣ ಮಾಡುತ್ತೇನೆ. ನೀವು ಕೂಡಾ ಬನ್ನಿ” ಎಂದು ಪ್ರವಾಸಿ ಪ್ರಬಂಧಕನಾಗಿ ಕೆಲಸ ಮಾಡಿಕೊಂಡಿದ್ದ ಬಿಜೆಪಿ ನಾಯಕ ಪ್ರಕಾಶ್ ಬೆಳ್ಳೂರು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ನಿತಿನ್ ನಿಶಾಂತ್ ಮತ್ತು ರತ್ನಾಕರ ಕೋಟ್ನಾನ್ ಎಂಬವರು ಪ್ರಕಾಶ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ನೀಡಿದ್ದರು.

ಇದನ್ನೂ ಓದಿ: ಬಜರಂಗ ದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಆದರೆ ಮಂಗಳವಾರ ಸಂಜೆ 7.30 ಗಂಟೆಗೆ ಪ್ರಕಾಶ್ ಮನೆಯಲ್ಲಿದ್ದಾಗ ಆರೋಪಿಗಳಾದ ನಿತಿನ್, ನಿಶಾಂತ್ ಮತ್ತು ಇತರರು ಮನೆಗೆ ಅಕ್ರಮ ಪ್ರವೇಶ ಮಾಡಿದ್ದಾರೆ. ಆರೋಪಿ ನಿತಿನ್ ತನ್ನ ಕೈಯಲ್ಲಿ ತಲವಾರು ಹಿಡಿದುಕೊಂಡು, ಪ್ರಕಾಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ತಲವಾರಿನಿಂದ ಬೀಸಿದ್ದು, ಇದರ ಪರಿಣಾಮವಾಗಿ ಎಡ ಕಿವಿಗೆ ಗಾಯವಾಗಿದೆ ಎಂದು ದೂರಲಾಗಿದೆ.

ಇಷ್ಟೇ ಅಲ್ಲದೆ, ಉಳಿದ ಆರೋಪಿಗಳು ಕೂಡಾ ಪ್ರಕಾಶ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಲಾಟೆಯ ಶಬ್ದ ಕೇಳಿ ಬಿಡಿಸಲು ಬಂದ ಪ್ರಕಾಶ್ ಅವರ ಅಣ್ಣ, ಅತ್ತಿಗೆ ಅವರಿಗೂ ಆರೋಪಿಗಳು ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ಪ್ರಕಾಶ್‌ ದೂರಿದ್ದಾರೆ.

ಪ್ರಕಾಶ್ ಬೆಳ್ಳೂರು ಅವರು ಸ್ಥಳೀಯ ಬಿಜೆಪಿ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ ಎಂದು ವಾರ್ತಾಭಾರತಿ ಉಲ್ಲೇಖಿಸಿದೆ. ಅಲ್ಲದೆ, ಅವರ ಮೇಲೆ ಹಲ್ಲೆ ನಡೆಸಿರುವ ಅರೋಪಿಗಳಾದ ನಿತಿನ್‌ ಬಡಗಬೆಳ್ಳೂರು, ನಿಶಾ೦ತ್‌‌ ಬಡಗ ಬೆಳ್ಳೂರು ಸೇರಿದಂತೆ ಇತರತು ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗ ದಳದ ಕಾರ್ಯಕರ್ತರು ಎಂದು ಪತ್ರಿಕೆ ಉಲ್ಲೇಖಿಸಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾ೦ತರ ಠಾಣೆಯಲ್ಲಿ ಅಪರಾಧ ಕ್ರಮಾ೦ಕ 124/2021 ಕಲ೦ 448, 504, 323, 324, 307, 506 ಜೊತೆಗೆ 34 ಐಪಿಸಿಯ೦ತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗ ದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...