Homeಕರ್ನಾಟಕದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

- Advertisement -
- Advertisement -

ಫೇಸ್‌‌ಬುಕ್‌ ಪೋಸ್ಟ್‌ ವಿಚಾರವಾಗಿ ತ೦ಡವೊ೦ದು ವ್ಯಕ್ತಿಯೋರ್ವರ ಮನೆಗೆ ಅಕ್ರಮ ಪ್ರವೇಶಗೈದು ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗ ಬೆಳ್ಳೂರುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಬಿಜೆಪಿಯ ಸ್ಥಳೀಯ ನಾಯಕ ಪ್ರಕಾಶ್ ಬೆಳ್ಳೂರು ಎಂದು ಗುರುತಿಸಲಾಗಿದ್ದು, ಹಲ್ಲೆ ಮಾಡಿದವರನ್ನು ಬಿಜೆಪಿ ಬೆಂಬಲಿತ ಸಂಘಟನೆಯಾಗಿರುವ ಬಜರಂಗ ದಳದ ಕಾರ್ಯಕರ್ತರು ಎಂದು ವಾರ್ತಾಭಾರತಿ ಪತ್ರಿಕೆ ಉಲ್ಲೇಖ ಮಾಡಿದೆ.

“ತಮ್ಮಿಂದ 25 ಸಾವಿರ ಹಣ ಪಡೆದುಕೊಂಡಿದ್ದಾರೆ ಎಂದು ರತ್ನಾಕರ್‌ ಕೋಟ್ಯಾನ್ ಎಂಬವರು ಅಪಪ್ರಚಾರ ಮಾಡುತ್ತಿದ್ದಾರೆ, ಈ ಬಗ್ಗೆ ಪಣೋಲಿಬೈಲಿನ ದೈವಸ್ಥಾನದಲ್ಲಿ ನಾನು ಆಣೆ ಪ್ರಮಾಣ ಮಾಡುತ್ತೇನೆ. ನೀವು ಕೂಡಾ ಬನ್ನಿ” ಎಂದು ಪ್ರವಾಸಿ ಪ್ರಬಂಧಕನಾಗಿ ಕೆಲಸ ಮಾಡಿಕೊಂಡಿದ್ದ ಬಿಜೆಪಿ ನಾಯಕ ಪ್ರಕಾಶ್ ಬೆಳ್ಳೂರು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ನಿತಿನ್ ನಿಶಾಂತ್ ಮತ್ತು ರತ್ನಾಕರ ಕೋಟ್ನಾನ್ ಎಂಬವರು ಪ್ರಕಾಶ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ನೀಡಿದ್ದರು.

ಇದನ್ನೂ ಓದಿ: ಬಜರಂಗ ದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಆದರೆ ಮಂಗಳವಾರ ಸಂಜೆ 7.30 ಗಂಟೆಗೆ ಪ್ರಕಾಶ್ ಮನೆಯಲ್ಲಿದ್ದಾಗ ಆರೋಪಿಗಳಾದ ನಿತಿನ್, ನಿಶಾಂತ್ ಮತ್ತು ಇತರರು ಮನೆಗೆ ಅಕ್ರಮ ಪ್ರವೇಶ ಮಾಡಿದ್ದಾರೆ. ಆರೋಪಿ ನಿತಿನ್ ತನ್ನ ಕೈಯಲ್ಲಿ ತಲವಾರು ಹಿಡಿದುಕೊಂಡು, ಪ್ರಕಾಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ತಲವಾರಿನಿಂದ ಬೀಸಿದ್ದು, ಇದರ ಪರಿಣಾಮವಾಗಿ ಎಡ ಕಿವಿಗೆ ಗಾಯವಾಗಿದೆ ಎಂದು ದೂರಲಾಗಿದೆ.

ಇಷ್ಟೇ ಅಲ್ಲದೆ, ಉಳಿದ ಆರೋಪಿಗಳು ಕೂಡಾ ಪ್ರಕಾಶ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಲಾಟೆಯ ಶಬ್ದ ಕೇಳಿ ಬಿಡಿಸಲು ಬಂದ ಪ್ರಕಾಶ್ ಅವರ ಅಣ್ಣ, ಅತ್ತಿಗೆ ಅವರಿಗೂ ಆರೋಪಿಗಳು ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ಪ್ರಕಾಶ್‌ ದೂರಿದ್ದಾರೆ.

ಪ್ರಕಾಶ್ ಬೆಳ್ಳೂರು ಅವರು ಸ್ಥಳೀಯ ಬಿಜೆಪಿ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ ಎಂದು ವಾರ್ತಾಭಾರತಿ ಉಲ್ಲೇಖಿಸಿದೆ. ಅಲ್ಲದೆ, ಅವರ ಮೇಲೆ ಹಲ್ಲೆ ನಡೆಸಿರುವ ಅರೋಪಿಗಳಾದ ನಿತಿನ್‌ ಬಡಗಬೆಳ್ಳೂರು, ನಿಶಾ೦ತ್‌‌ ಬಡಗ ಬೆಳ್ಳೂರು ಸೇರಿದಂತೆ ಇತರತು ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗ ದಳದ ಕಾರ್ಯಕರ್ತರು ಎಂದು ಪತ್ರಿಕೆ ಉಲ್ಲೇಖಿಸಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾ೦ತರ ಠಾಣೆಯಲ್ಲಿ ಅಪರಾಧ ಕ್ರಮಾ೦ಕ 124/2021 ಕಲ೦ 448, 504, 323, 324, 307, 506 ಜೊತೆಗೆ 34 ಐಪಿಸಿಯ೦ತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗ ದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....