Homeಕರ್ನಾಟಕಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

- Advertisement -
- Advertisement -

ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೊನಾ ವಿರುದ್ಧದ ಹೋರಾಟ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ “ಶಹಬ್ಬಾಸ್ ಯಡಿಯೂರಪ್ಪನವರೆ, ಒಂದೆಡೆ ಕೊರೊನಾ ವಾರಿಯರ್ಸ್‌ಗೆ ಆಕಾಶದಿಂದ ಹೂಮಳೆ ಸುರಿಸುತ್ತೀರಿ, ಇನ್ನೊಂದೆಡೆ ಕೊಲೆ ಬೆದರಿಕೆ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ರಕ್ಷಣೆ ನೀಡದೆ ವರ್ಗಾವಣೆ ಮಾಡ್ತೀರಿ. ಇದೇನಾ ಕೊರೊನಾ ವಾರಿಯರ್ಸ್‌ಗೆ ಕೊಡುವ ಗೌರವ?” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ’ಕಡಿದು ಕೊಲೆ ಮಾಡಬೇಕು’: ದ. ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ


ಕೊರೊನಾ ಅಕ್ರಮ ಬಯಲಿಗೆಳೆದರೆ ಅಧಿಕಾರಿಗಳ ನೈತಿಕಸ್ಥೈರ್ಯ ಕುಸಿಯುವಂತೆ ಮಾಡ್ತೀರಿ ಎಂದು ದೂರುತ್ತೀರಿ,‌ ಮೊದಲು, ಭ್ರಷ್ಟರ ರಕ್ಷಣೆಗಾಗಿ ಬಿಬಿಎಂಪಿ‌ ಆಯುಕ್ತರ ವರ್ಗಾವಣೆ ಮಾಡಿದ್ದೀರಿ, ಈಗ ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದೀರಿ. ಇದೇನಾ ನಿಮ್ಮ ಕೊರೊನಾ ವಿರುದ್ಧದ ಹೋರಾಟ? ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.


ಇದನ್ನೂ ಓದಿ: ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ: ಓರ್ವ ಆರೋಪಿಯ ಬಂಧನ

ಇದನ್ನೂ ಓದಿ: ದ.ಕ. ಜಿಲ್ಲಾಧಿಕಾರಿಯ ದಿಡೀರ್ ವರ್ಗಾವಣೆ: ಕಾರಣಗಳೇನಿರಬಹುದು…?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

0
ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಹಾಸನದ ಪೆನ್‌ಡ್ರೈವ್‌ ವೈರಲ್‌, ಸಂಸದ ಪ್ರಜ್ವಲ್‌ ರೇವಣ್ಣನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಇದೀಗ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್...