Homeಕರ್ನಾಟಕಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ

- Advertisement -
- Advertisement -

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಎಸ್ ಸಸಿಕಾಂತ್ ಸೆಂಥಿಲ್ ರವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ತಾವು ರಾಜಿನಾಮೆ ನೀಡುವುದಕ್ಕೆ ಕಾರಣಗಳನ್ನು ನೀಡಿ ಪತ್ರ ಬರೆದಿದ್ದಾರೆ. ಅದರ ಕನ್ನಡ ಅನುವಾದ ಇಲ್ಲಿದೆ ನೋಡಿ.

ಆತ್ಮೀಯ ಗೆಳೆಯರೆ,

“ಇಂದು ಭಾರತೀಯ ಆಡಳಿತ ಸೇವೆಗೆ ನಾನು ರಾಜೀನಾಮೆಯನ್ನು ನೀಡುತ್ತಿದ್ದೇನೆ. ಈ ಸಮಯದಲ್ಲಿ, ಈ ನಿರ್ಧಾರವು ಕೇವಲ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸುವುದು ನನಗೆ ಮುಖ್ಯವಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನನ್ನ ಪ್ರಸ್ತುತ ಪ್ರೊಫೈಲ್‌ನಲ್ಲಿ ಯಾರೊಂದಿಗೂ ಅಥವಾ ಯಾವುದೇ ಘಟನೆಯೊಂದಿಗೆ ಸಂಪರ್ಕ ಹೊಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳ ನನಗೆ ಅತ್ಯುತ್ತಮ ಸಹಕಾರ ನೀಡಿದ್ದಾರೆ ಅವರಿಗೆ ಧನ್ಯವಾದಗಳು ಮತ್ತು ಮಧ್ಯೆಯೇ ನಾನು ಕೆಲಸವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಕ್ಷಮೆಯಾಚಿಸುತ್ತೇನೆ.”

“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ. ಬಹುತ್ವದ ಬೇರುಗಳಿಗೆ ಭವಿಷ್ಯದಲ್ಲಿ ಭಾರೀ ಅಪಾಯ ಕಾದಿದೆ. ಮುಂಬರುವ ದಿನಗಳು ನಮ್ಮ ರಾಷ್ಟ್ರಕ್ಕೆ ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಇರುವುದರಿಂದ ನಾನ ಹೊರಗಿನಿಂದ ನಿಂತು ಜನರಿಗಾಗಿ ದುಡಿಯುವುದೇ ಲೇಸು ಎಂದು ನನಗನ್ನಿಸುತ್ತಿದೆ. ಕೇವಲ ವ್ಯಾವಹಾರಿಕ ಮಾತ್ರವಲ್ಲದೇ ನನ್ನೊಂದಿಗೆ ಕೆಲಸ ಮಾಡಿದ, ನನ್ನ ಹಾದಿಯಲ್ಲಿ ಜೊತೆಗೂಡಿದ ಎಲ್ಲಾ ಸ್ನೇಹಿತರಿಗೂ, ಅವರ ಕುಟುಂಬ ವರ್ಗಕ್ಕೂ ಪ್ರೀತಿ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ.”

2009ರ ಐ.ಎ.ಎಸ್ ಕೇಡರ್ ಆದ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ರಾಜಿನಾಮೆ ನೀಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನ ನಿರಾಸೆ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದಿನ ಅವರು ಸೇವೆಯಲ್ಲಿರಬೇಕಿತ್ತು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಲು ಸಾಲಾಗಿ ಐ.ಎ.ಎಸ್ ಅಧಿಕಾರಿಗಳು ರಾಜಿನಾಮೆ ನೀಡುತ್ತಿರುವುದಕ್ಕೆ ಇಂದಿನ ಭಾರತದ ಸ್ಥಿತಿಯೇ ಕಾರಣವೇ ಎಂಬ ಅಸಮಾಧಾನ ಕೂಡ ಬರುತ್ತಿದೆ. ಕಳೆದ 10 ದಿನಗಳ ಹಿಂದಷ್ಟೇ ಕಣ್ಣನ್ ಗೋಪಿನಾಥ್ ಎಂಬ ಐ.ಎ.ಎಸ್ ಅಧಿಕಾರಿ ಕೂಡ ರಾಜಿನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾರತದ ಮೂಲಭೂತ ಗುಣಗಳಾದ ಬಹುತ್ವ ಮತ್ತು ಪ್ರಜಾಪ್ರಭುತ್ವಕ್ಕೆ ಹಿಂದೆಂದೂ ಕಾಣದ ರೀತಿಯಲ್ಲಿ ಧಕ್ಕೆಯಾಗುತ್ತಿರುವಾಗ ನಾಗರಿಕ ಸೇವೆಯಲ್ಲಿ ( IAS) ಮುಂದುವರಿಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ ದಕ ಜಿಲ್ಲೆಯ ಅತ್ಯಂತ ದಕ್ಷ ಜಿಲ್ಲಾಧಿಕಾರಿ ಶ್ರೀ ಸೆಂಥಿಲ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

    ದೇಶದ ಅರ್ಥ ವ್ಯವಸ್ಥೆ ವೇಗವಾಗಿ ಕುಸಿಯುತ್ತಿದೆ. ಲಕ್ಷಾಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಕಾಶ್ಮೀರವನ್ನು ಸೈನಿಕರು ಆಳುತ್ತಿದ್ದಾರೆ. ಉತ್ತರಪೂರ್ವದ ಸುಮಾರು ೭೦ ಲಕ್ಷ ಜನ ಭಯಭೀತರಾಗಿದ್ದಾರೆ. ವಿಜ್ಞಾನಿಗಳು ಒಳ್ಳೆ ಮಕ್ಕಳು ಹುಟ್ಟಲು ಗರ್ಭಿಣಿಯರಿಗೆ ಸೆಗಣಿ ತಿನ್ನಲು ಹೇಳುತ್ತಿದ್ದಾರೆ. ರಾಜಕಾರಣಿಗಳು ಬೆಂಕಿಹಚ್ಚುವ ಮಾತಾಡುತ್ತಿದ್ದಾರೆ.

    ಯಾರಿಗಾಗಿ? ಯಾರು? ಯಾವ ಬಗೆಯ ನಾಡನ್ನು ಕಟ್ಟುತ್ತಿದ್ದಾರೋ ತಿಳಿದವರು ಹೇಳಬೇಕು.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...