Homeಕರ್ನಾಟಕಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ

- Advertisement -
- Advertisement -

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಎಸ್ ಸಸಿಕಾಂತ್ ಸೆಂಥಿಲ್ ರವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ತಾವು ರಾಜಿನಾಮೆ ನೀಡುವುದಕ್ಕೆ ಕಾರಣಗಳನ್ನು ನೀಡಿ ಪತ್ರ ಬರೆದಿದ್ದಾರೆ. ಅದರ ಕನ್ನಡ ಅನುವಾದ ಇಲ್ಲಿದೆ ನೋಡಿ.

ಆತ್ಮೀಯ ಗೆಳೆಯರೆ,

“ಇಂದು ಭಾರತೀಯ ಆಡಳಿತ ಸೇವೆಗೆ ನಾನು ರಾಜೀನಾಮೆಯನ್ನು ನೀಡುತ್ತಿದ್ದೇನೆ. ಈ ಸಮಯದಲ್ಲಿ, ಈ ನಿರ್ಧಾರವು ಕೇವಲ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸುವುದು ನನಗೆ ಮುಖ್ಯವಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನನ್ನ ಪ್ರಸ್ತುತ ಪ್ರೊಫೈಲ್‌ನಲ್ಲಿ ಯಾರೊಂದಿಗೂ ಅಥವಾ ಯಾವುದೇ ಘಟನೆಯೊಂದಿಗೆ ಸಂಪರ್ಕ ಹೊಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳ ನನಗೆ ಅತ್ಯುತ್ತಮ ಸಹಕಾರ ನೀಡಿದ್ದಾರೆ ಅವರಿಗೆ ಧನ್ಯವಾದಗಳು ಮತ್ತು ಮಧ್ಯೆಯೇ ನಾನು ಕೆಲಸವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಕ್ಷಮೆಯಾಚಿಸುತ್ತೇನೆ.”

“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ. ಬಹುತ್ವದ ಬೇರುಗಳಿಗೆ ಭವಿಷ್ಯದಲ್ಲಿ ಭಾರೀ ಅಪಾಯ ಕಾದಿದೆ. ಮುಂಬರುವ ದಿನಗಳು ನಮ್ಮ ರಾಷ್ಟ್ರಕ್ಕೆ ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಇರುವುದರಿಂದ ನಾನ ಹೊರಗಿನಿಂದ ನಿಂತು ಜನರಿಗಾಗಿ ದುಡಿಯುವುದೇ ಲೇಸು ಎಂದು ನನಗನ್ನಿಸುತ್ತಿದೆ. ಕೇವಲ ವ್ಯಾವಹಾರಿಕ ಮಾತ್ರವಲ್ಲದೇ ನನ್ನೊಂದಿಗೆ ಕೆಲಸ ಮಾಡಿದ, ನನ್ನ ಹಾದಿಯಲ್ಲಿ ಜೊತೆಗೂಡಿದ ಎಲ್ಲಾ ಸ್ನೇಹಿತರಿಗೂ, ಅವರ ಕುಟುಂಬ ವರ್ಗಕ್ಕೂ ಪ್ರೀತಿ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ.”

2009ರ ಐ.ಎ.ಎಸ್ ಕೇಡರ್ ಆದ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ರಾಜಿನಾಮೆ ನೀಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನ ನಿರಾಸೆ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದಿನ ಅವರು ಸೇವೆಯಲ್ಲಿರಬೇಕಿತ್ತು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಲು ಸಾಲಾಗಿ ಐ.ಎ.ಎಸ್ ಅಧಿಕಾರಿಗಳು ರಾಜಿನಾಮೆ ನೀಡುತ್ತಿರುವುದಕ್ಕೆ ಇಂದಿನ ಭಾರತದ ಸ್ಥಿತಿಯೇ ಕಾರಣವೇ ಎಂಬ ಅಸಮಾಧಾನ ಕೂಡ ಬರುತ್ತಿದೆ. ಕಳೆದ 10 ದಿನಗಳ ಹಿಂದಷ್ಟೇ ಕಣ್ಣನ್ ಗೋಪಿನಾಥ್ ಎಂಬ ಐ.ಎ.ಎಸ್ ಅಧಿಕಾರಿ ಕೂಡ ರಾಜಿನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾರತದ ಮೂಲಭೂತ ಗುಣಗಳಾದ ಬಹುತ್ವ ಮತ್ತು ಪ್ರಜಾಪ್ರಭುತ್ವಕ್ಕೆ ಹಿಂದೆಂದೂ ಕಾಣದ ರೀತಿಯಲ್ಲಿ ಧಕ್ಕೆಯಾಗುತ್ತಿರುವಾಗ ನಾಗರಿಕ ಸೇವೆಯಲ್ಲಿ ( IAS) ಮುಂದುವರಿಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ ದಕ ಜಿಲ್ಲೆಯ ಅತ್ಯಂತ ದಕ್ಷ ಜಿಲ್ಲಾಧಿಕಾರಿ ಶ್ರೀ ಸೆಂಥಿಲ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

    ದೇಶದ ಅರ್ಥ ವ್ಯವಸ್ಥೆ ವೇಗವಾಗಿ ಕುಸಿಯುತ್ತಿದೆ. ಲಕ್ಷಾಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಕಾಶ್ಮೀರವನ್ನು ಸೈನಿಕರು ಆಳುತ್ತಿದ್ದಾರೆ. ಉತ್ತರಪೂರ್ವದ ಸುಮಾರು ೭೦ ಲಕ್ಷ ಜನ ಭಯಭೀತರಾಗಿದ್ದಾರೆ. ವಿಜ್ಞಾನಿಗಳು ಒಳ್ಳೆ ಮಕ್ಕಳು ಹುಟ್ಟಲು ಗರ್ಭಿಣಿಯರಿಗೆ ಸೆಗಣಿ ತಿನ್ನಲು ಹೇಳುತ್ತಿದ್ದಾರೆ. ರಾಜಕಾರಣಿಗಳು ಬೆಂಕಿಹಚ್ಚುವ ಮಾತಾಡುತ್ತಿದ್ದಾರೆ.

    ಯಾರಿಗಾಗಿ? ಯಾರು? ಯಾವ ಬಗೆಯ ನಾಡನ್ನು ಕಟ್ಟುತ್ತಿದ್ದಾರೋ ತಿಳಿದವರು ಹೇಳಬೇಕು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....