Homeಕರ್ನಾಟಕಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ

- Advertisement -
- Advertisement -

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಎಸ್ ಸಸಿಕಾಂತ್ ಸೆಂಥಿಲ್ ರವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ತಾವು ರಾಜಿನಾಮೆ ನೀಡುವುದಕ್ಕೆ ಕಾರಣಗಳನ್ನು ನೀಡಿ ಪತ್ರ ಬರೆದಿದ್ದಾರೆ. ಅದರ ಕನ್ನಡ ಅನುವಾದ ಇಲ್ಲಿದೆ ನೋಡಿ.

ಆತ್ಮೀಯ ಗೆಳೆಯರೆ,

“ಇಂದು ಭಾರತೀಯ ಆಡಳಿತ ಸೇವೆಗೆ ನಾನು ರಾಜೀನಾಮೆಯನ್ನು ನೀಡುತ್ತಿದ್ದೇನೆ. ಈ ಸಮಯದಲ್ಲಿ, ಈ ನಿರ್ಧಾರವು ಕೇವಲ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸುವುದು ನನಗೆ ಮುಖ್ಯವಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನನ್ನ ಪ್ರಸ್ತುತ ಪ್ರೊಫೈಲ್‌ನಲ್ಲಿ ಯಾರೊಂದಿಗೂ ಅಥವಾ ಯಾವುದೇ ಘಟನೆಯೊಂದಿಗೆ ಸಂಪರ್ಕ ಹೊಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳ ನನಗೆ ಅತ್ಯುತ್ತಮ ಸಹಕಾರ ನೀಡಿದ್ದಾರೆ ಅವರಿಗೆ ಧನ್ಯವಾದಗಳು ಮತ್ತು ಮಧ್ಯೆಯೇ ನಾನು ಕೆಲಸವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಕ್ಷಮೆಯಾಚಿಸುತ್ತೇನೆ.”

“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ. ಬಹುತ್ವದ ಬೇರುಗಳಿಗೆ ಭವಿಷ್ಯದಲ್ಲಿ ಭಾರೀ ಅಪಾಯ ಕಾದಿದೆ. ಮುಂಬರುವ ದಿನಗಳು ನಮ್ಮ ರಾಷ್ಟ್ರಕ್ಕೆ ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಇರುವುದರಿಂದ ನಾನ ಹೊರಗಿನಿಂದ ನಿಂತು ಜನರಿಗಾಗಿ ದುಡಿಯುವುದೇ ಲೇಸು ಎಂದು ನನಗನ್ನಿಸುತ್ತಿದೆ. ಕೇವಲ ವ್ಯಾವಹಾರಿಕ ಮಾತ್ರವಲ್ಲದೇ ನನ್ನೊಂದಿಗೆ ಕೆಲಸ ಮಾಡಿದ, ನನ್ನ ಹಾದಿಯಲ್ಲಿ ಜೊತೆಗೂಡಿದ ಎಲ್ಲಾ ಸ್ನೇಹಿತರಿಗೂ, ಅವರ ಕುಟುಂಬ ವರ್ಗಕ್ಕೂ ಪ್ರೀತಿ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ.”

2009ರ ಐ.ಎ.ಎಸ್ ಕೇಡರ್ ಆದ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ರಾಜಿನಾಮೆ ನೀಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನ ನಿರಾಸೆ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದಿನ ಅವರು ಸೇವೆಯಲ್ಲಿರಬೇಕಿತ್ತು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಲು ಸಾಲಾಗಿ ಐ.ಎ.ಎಸ್ ಅಧಿಕಾರಿಗಳು ರಾಜಿನಾಮೆ ನೀಡುತ್ತಿರುವುದಕ್ಕೆ ಇಂದಿನ ಭಾರತದ ಸ್ಥಿತಿಯೇ ಕಾರಣವೇ ಎಂಬ ಅಸಮಾಧಾನ ಕೂಡ ಬರುತ್ತಿದೆ. ಕಳೆದ 10 ದಿನಗಳ ಹಿಂದಷ್ಟೇ ಕಣ್ಣನ್ ಗೋಪಿನಾಥ್ ಎಂಬ ಐ.ಎ.ಎಸ್ ಅಧಿಕಾರಿ ಕೂಡ ರಾಜಿನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾರತದ ಮೂಲಭೂತ ಗುಣಗಳಾದ ಬಹುತ್ವ ಮತ್ತು ಪ್ರಜಾಪ್ರಭುತ್ವಕ್ಕೆ ಹಿಂದೆಂದೂ ಕಾಣದ ರೀತಿಯಲ್ಲಿ ಧಕ್ಕೆಯಾಗುತ್ತಿರುವಾಗ ನಾಗರಿಕ ಸೇವೆಯಲ್ಲಿ ( IAS) ಮುಂದುವರಿಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ ದಕ ಜಿಲ್ಲೆಯ ಅತ್ಯಂತ ದಕ್ಷ ಜಿಲ್ಲಾಧಿಕಾರಿ ಶ್ರೀ ಸೆಂಥಿಲ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

    ದೇಶದ ಅರ್ಥ ವ್ಯವಸ್ಥೆ ವೇಗವಾಗಿ ಕುಸಿಯುತ್ತಿದೆ. ಲಕ್ಷಾಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಕಾಶ್ಮೀರವನ್ನು ಸೈನಿಕರು ಆಳುತ್ತಿದ್ದಾರೆ. ಉತ್ತರಪೂರ್ವದ ಸುಮಾರು ೭೦ ಲಕ್ಷ ಜನ ಭಯಭೀತರಾಗಿದ್ದಾರೆ. ವಿಜ್ಞಾನಿಗಳು ಒಳ್ಳೆ ಮಕ್ಕಳು ಹುಟ್ಟಲು ಗರ್ಭಿಣಿಯರಿಗೆ ಸೆಗಣಿ ತಿನ್ನಲು ಹೇಳುತ್ತಿದ್ದಾರೆ. ರಾಜಕಾರಣಿಗಳು ಬೆಂಕಿಹಚ್ಚುವ ಮಾತಾಡುತ್ತಿದ್ದಾರೆ.

    ಯಾರಿಗಾಗಿ? ಯಾರು? ಯಾವ ಬಗೆಯ ನಾಡನ್ನು ಕಟ್ಟುತ್ತಿದ್ದಾರೋ ತಿಳಿದವರು ಹೇಳಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...