Homeಕರ್ನಾಟಕಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ

- Advertisement -
- Advertisement -

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಎಸ್ ಸಸಿಕಾಂತ್ ಸೆಂಥಿಲ್ ರವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ತಾವು ರಾಜಿನಾಮೆ ನೀಡುವುದಕ್ಕೆ ಕಾರಣಗಳನ್ನು ನೀಡಿ ಪತ್ರ ಬರೆದಿದ್ದಾರೆ. ಅದರ ಕನ್ನಡ ಅನುವಾದ ಇಲ್ಲಿದೆ ನೋಡಿ.

ಆತ್ಮೀಯ ಗೆಳೆಯರೆ,

“ಇಂದು ಭಾರತೀಯ ಆಡಳಿತ ಸೇವೆಗೆ ನಾನು ರಾಜೀನಾಮೆಯನ್ನು ನೀಡುತ್ತಿದ್ದೇನೆ. ಈ ಸಮಯದಲ್ಲಿ, ಈ ನಿರ್ಧಾರವು ಕೇವಲ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸುವುದು ನನಗೆ ಮುಖ್ಯವಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನನ್ನ ಪ್ರಸ್ತುತ ಪ್ರೊಫೈಲ್‌ನಲ್ಲಿ ಯಾರೊಂದಿಗೂ ಅಥವಾ ಯಾವುದೇ ಘಟನೆಯೊಂದಿಗೆ ಸಂಪರ್ಕ ಹೊಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳ ನನಗೆ ಅತ್ಯುತ್ತಮ ಸಹಕಾರ ನೀಡಿದ್ದಾರೆ ಅವರಿಗೆ ಧನ್ಯವಾದಗಳು ಮತ್ತು ಮಧ್ಯೆಯೇ ನಾನು ಕೆಲಸವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಕ್ಷಮೆಯಾಚಿಸುತ್ತೇನೆ.”

“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ. ಬಹುತ್ವದ ಬೇರುಗಳಿಗೆ ಭವಿಷ್ಯದಲ್ಲಿ ಭಾರೀ ಅಪಾಯ ಕಾದಿದೆ. ಮುಂಬರುವ ದಿನಗಳು ನಮ್ಮ ರಾಷ್ಟ್ರಕ್ಕೆ ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಇರುವುದರಿಂದ ನಾನ ಹೊರಗಿನಿಂದ ನಿಂತು ಜನರಿಗಾಗಿ ದುಡಿಯುವುದೇ ಲೇಸು ಎಂದು ನನಗನ್ನಿಸುತ್ತಿದೆ. ಕೇವಲ ವ್ಯಾವಹಾರಿಕ ಮಾತ್ರವಲ್ಲದೇ ನನ್ನೊಂದಿಗೆ ಕೆಲಸ ಮಾಡಿದ, ನನ್ನ ಹಾದಿಯಲ್ಲಿ ಜೊತೆಗೂಡಿದ ಎಲ್ಲಾ ಸ್ನೇಹಿತರಿಗೂ, ಅವರ ಕುಟುಂಬ ವರ್ಗಕ್ಕೂ ಪ್ರೀತಿ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ.”

2009ರ ಐ.ಎ.ಎಸ್ ಕೇಡರ್ ಆದ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ರಾಜಿನಾಮೆ ನೀಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನ ನಿರಾಸೆ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದಿನ ಅವರು ಸೇವೆಯಲ್ಲಿರಬೇಕಿತ್ತು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಲು ಸಾಲಾಗಿ ಐ.ಎ.ಎಸ್ ಅಧಿಕಾರಿಗಳು ರಾಜಿನಾಮೆ ನೀಡುತ್ತಿರುವುದಕ್ಕೆ ಇಂದಿನ ಭಾರತದ ಸ್ಥಿತಿಯೇ ಕಾರಣವೇ ಎಂಬ ಅಸಮಾಧಾನ ಕೂಡ ಬರುತ್ತಿದೆ. ಕಳೆದ 10 ದಿನಗಳ ಹಿಂದಷ್ಟೇ ಕಣ್ಣನ್ ಗೋಪಿನಾಥ್ ಎಂಬ ಐ.ಎ.ಎಸ್ ಅಧಿಕಾರಿ ಕೂಡ ರಾಜಿನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾರತದ ಮೂಲಭೂತ ಗುಣಗಳಾದ ಬಹುತ್ವ ಮತ್ತು ಪ್ರಜಾಪ್ರಭುತ್ವಕ್ಕೆ ಹಿಂದೆಂದೂ ಕಾಣದ ರೀತಿಯಲ್ಲಿ ಧಕ್ಕೆಯಾಗುತ್ತಿರುವಾಗ ನಾಗರಿಕ ಸೇವೆಯಲ್ಲಿ ( IAS) ಮುಂದುವರಿಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ ದಕ ಜಿಲ್ಲೆಯ ಅತ್ಯಂತ ದಕ್ಷ ಜಿಲ್ಲಾಧಿಕಾರಿ ಶ್ರೀ ಸೆಂಥಿಲ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

    ದೇಶದ ಅರ್ಥ ವ್ಯವಸ್ಥೆ ವೇಗವಾಗಿ ಕುಸಿಯುತ್ತಿದೆ. ಲಕ್ಷಾಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಕಾಶ್ಮೀರವನ್ನು ಸೈನಿಕರು ಆಳುತ್ತಿದ್ದಾರೆ. ಉತ್ತರಪೂರ್ವದ ಸುಮಾರು ೭೦ ಲಕ್ಷ ಜನ ಭಯಭೀತರಾಗಿದ್ದಾರೆ. ವಿಜ್ಞಾನಿಗಳು ಒಳ್ಳೆ ಮಕ್ಕಳು ಹುಟ್ಟಲು ಗರ್ಭಿಣಿಯರಿಗೆ ಸೆಗಣಿ ತಿನ್ನಲು ಹೇಳುತ್ತಿದ್ದಾರೆ. ರಾಜಕಾರಣಿಗಳು ಬೆಂಕಿಹಚ್ಚುವ ಮಾತಾಡುತ್ತಿದ್ದಾರೆ.

    ಯಾರಿಗಾಗಿ? ಯಾರು? ಯಾವ ಬಗೆಯ ನಾಡನ್ನು ಕಟ್ಟುತ್ತಿದ್ದಾರೋ ತಿಳಿದವರು ಹೇಳಬೇಕು.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...