Homeಕರ್ನಾಟಕಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ

- Advertisement -
- Advertisement -

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಎಸ್ ಸಸಿಕಾಂತ್ ಸೆಂಥಿಲ್ ರವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ತಾವು ರಾಜಿನಾಮೆ ನೀಡುವುದಕ್ಕೆ ಕಾರಣಗಳನ್ನು ನೀಡಿ ಪತ್ರ ಬರೆದಿದ್ದಾರೆ. ಅದರ ಕನ್ನಡ ಅನುವಾದ ಇಲ್ಲಿದೆ ನೋಡಿ.

ಆತ್ಮೀಯ ಗೆಳೆಯರೆ,

“ಇಂದು ಭಾರತೀಯ ಆಡಳಿತ ಸೇವೆಗೆ ನಾನು ರಾಜೀನಾಮೆಯನ್ನು ನೀಡುತ್ತಿದ್ದೇನೆ. ಈ ಸಮಯದಲ್ಲಿ, ಈ ನಿರ್ಧಾರವು ಕೇವಲ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸುವುದು ನನಗೆ ಮುಖ್ಯವಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನನ್ನ ಪ್ರಸ್ತುತ ಪ್ರೊಫೈಲ್‌ನಲ್ಲಿ ಯಾರೊಂದಿಗೂ ಅಥವಾ ಯಾವುದೇ ಘಟನೆಯೊಂದಿಗೆ ಸಂಪರ್ಕ ಹೊಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳ ನನಗೆ ಅತ್ಯುತ್ತಮ ಸಹಕಾರ ನೀಡಿದ್ದಾರೆ ಅವರಿಗೆ ಧನ್ಯವಾದಗಳು ಮತ್ತು ಮಧ್ಯೆಯೇ ನಾನು ಕೆಲಸವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಕ್ಷಮೆಯಾಚಿಸುತ್ತೇನೆ.”

“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ. ಬಹುತ್ವದ ಬೇರುಗಳಿಗೆ ಭವಿಷ್ಯದಲ್ಲಿ ಭಾರೀ ಅಪಾಯ ಕಾದಿದೆ. ಮುಂಬರುವ ದಿನಗಳು ನಮ್ಮ ರಾಷ್ಟ್ರಕ್ಕೆ ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಇರುವುದರಿಂದ ನಾನ ಹೊರಗಿನಿಂದ ನಿಂತು ಜನರಿಗಾಗಿ ದುಡಿಯುವುದೇ ಲೇಸು ಎಂದು ನನಗನ್ನಿಸುತ್ತಿದೆ. ಕೇವಲ ವ್ಯಾವಹಾರಿಕ ಮಾತ್ರವಲ್ಲದೇ ನನ್ನೊಂದಿಗೆ ಕೆಲಸ ಮಾಡಿದ, ನನ್ನ ಹಾದಿಯಲ್ಲಿ ಜೊತೆಗೂಡಿದ ಎಲ್ಲಾ ಸ್ನೇಹಿತರಿಗೂ, ಅವರ ಕುಟುಂಬ ವರ್ಗಕ್ಕೂ ಪ್ರೀತಿ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ.”

2009ರ ಐ.ಎ.ಎಸ್ ಕೇಡರ್ ಆದ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ರಾಜಿನಾಮೆ ನೀಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನ ನಿರಾಸೆ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದಿನ ಅವರು ಸೇವೆಯಲ್ಲಿರಬೇಕಿತ್ತು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಲು ಸಾಲಾಗಿ ಐ.ಎ.ಎಸ್ ಅಧಿಕಾರಿಗಳು ರಾಜಿನಾಮೆ ನೀಡುತ್ತಿರುವುದಕ್ಕೆ ಇಂದಿನ ಭಾರತದ ಸ್ಥಿತಿಯೇ ಕಾರಣವೇ ಎಂಬ ಅಸಮಾಧಾನ ಕೂಡ ಬರುತ್ತಿದೆ. ಕಳೆದ 10 ದಿನಗಳ ಹಿಂದಷ್ಟೇ ಕಣ್ಣನ್ ಗೋಪಿನಾಥ್ ಎಂಬ ಐ.ಎ.ಎಸ್ ಅಧಿಕಾರಿ ಕೂಡ ರಾಜಿನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾರತದ ಮೂಲಭೂತ ಗುಣಗಳಾದ ಬಹುತ್ವ ಮತ್ತು ಪ್ರಜಾಪ್ರಭುತ್ವಕ್ಕೆ ಹಿಂದೆಂದೂ ಕಾಣದ ರೀತಿಯಲ್ಲಿ ಧಕ್ಕೆಯಾಗುತ್ತಿರುವಾಗ ನಾಗರಿಕ ಸೇವೆಯಲ್ಲಿ ( IAS) ಮುಂದುವರಿಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ ದಕ ಜಿಲ್ಲೆಯ ಅತ್ಯಂತ ದಕ್ಷ ಜಿಲ್ಲಾಧಿಕಾರಿ ಶ್ರೀ ಸೆಂಥಿಲ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

    ದೇಶದ ಅರ್ಥ ವ್ಯವಸ್ಥೆ ವೇಗವಾಗಿ ಕುಸಿಯುತ್ತಿದೆ. ಲಕ್ಷಾಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಕಾಶ್ಮೀರವನ್ನು ಸೈನಿಕರು ಆಳುತ್ತಿದ್ದಾರೆ. ಉತ್ತರಪೂರ್ವದ ಸುಮಾರು ೭೦ ಲಕ್ಷ ಜನ ಭಯಭೀತರಾಗಿದ್ದಾರೆ. ವಿಜ್ಞಾನಿಗಳು ಒಳ್ಳೆ ಮಕ್ಕಳು ಹುಟ್ಟಲು ಗರ್ಭಿಣಿಯರಿಗೆ ಸೆಗಣಿ ತಿನ್ನಲು ಹೇಳುತ್ತಿದ್ದಾರೆ. ರಾಜಕಾರಣಿಗಳು ಬೆಂಕಿಹಚ್ಚುವ ಮಾತಾಡುತ್ತಿದ್ದಾರೆ.

    ಯಾರಿಗಾಗಿ? ಯಾರು? ಯಾವ ಬಗೆಯ ನಾಡನ್ನು ಕಟ್ಟುತ್ತಿದ್ದಾರೋ ತಿಳಿದವರು ಹೇಳಬೇಕು.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...