Homeಕರ್ನಾಟಕಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ಪ್ರಜಾಪ್ರಭುತ್ವದ ಮೂಲಆಧಾರಗಳೇ ರಾಜಿ ಮಾಡಿಕೊಳ್ಳುತ್ತಿರುವಾಗ ನಾನು ಸೇವೆಯಲ್ಲಿರುವುದು ಅನೈತಿಕ: ಸಸಿಕಾಂತ್ ಸೆಂಥಿಲ್

ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ

- Advertisement -
- Advertisement -

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಡಾ.ಎಸ್ ಸಸಿಕಾಂತ್ ಸೆಂಥಿಲ್ ರವರು ಇಂದು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ತಾವು ರಾಜಿನಾಮೆ ನೀಡುವುದಕ್ಕೆ ಕಾರಣಗಳನ್ನು ನೀಡಿ ಪತ್ರ ಬರೆದಿದ್ದಾರೆ. ಅದರ ಕನ್ನಡ ಅನುವಾದ ಇಲ್ಲಿದೆ ನೋಡಿ.

ಆತ್ಮೀಯ ಗೆಳೆಯರೆ,

“ಇಂದು ಭಾರತೀಯ ಆಡಳಿತ ಸೇವೆಗೆ ನಾನು ರಾಜೀನಾಮೆಯನ್ನು ನೀಡುತ್ತಿದ್ದೇನೆ. ಈ ಸಮಯದಲ್ಲಿ, ಈ ನಿರ್ಧಾರವು ಕೇವಲ ವೈಯಕ್ತಿಕ ನಿರ್ಧಾರ ಎಂದು ಸ್ಪಷ್ಟಪಡಿಸುವುದು ನನಗೆ ಮುಖ್ಯವಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ನನ್ನ ಪ್ರಸ್ತುತ ಪ್ರೊಫೈಲ್‌ನಲ್ಲಿ ಯಾರೊಂದಿಗೂ ಅಥವಾ ಯಾವುದೇ ಘಟನೆಯೊಂದಿಗೆ ಸಂಪರ್ಕ ಹೊಂದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳ ನನಗೆ ಅತ್ಯುತ್ತಮ ಸಹಕಾರ ನೀಡಿದ್ದಾರೆ ಅವರಿಗೆ ಧನ್ಯವಾದಗಳು ಮತ್ತು ಮಧ್ಯೆಯೇ ನಾನು ಕೆಲಸವನ್ನು ಸ್ಥಗಿತಗೊಳಿಸಿದ್ದಕ್ಕಾಗಿ ನಾನು ಅವರಿಗೆ ಕ್ಷಮೆಯಾಚಿಸುತ್ತೇನೆ.”

“ನಮ್ಮ ವೈವಿಧ್ಯಮಯ ಪ್ರಜಾಪ್ರಭುತ್ವದ ಮೂಲಭೂತ ಆಧಾರ ಸ್ಥಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿರುವಾಗ ಸರ್ಕಾರದಲ್ಲಿ ನಾಗರಿಕ ಸೇವಕನಾಗಿ ನಾನು ಮುಂದುವರೆಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ. ಬಹುತ್ವದ ಬೇರುಗಳಿಗೆ ಭವಿಷ್ಯದಲ್ಲಿ ಭಾರೀ ಅಪಾಯ ಕಾದಿದೆ. ಮುಂಬರುವ ದಿನಗಳು ನಮ್ಮ ರಾಷ್ಟ್ರಕ್ಕೆ ಅತ್ಯಂತ ಕಷ್ಟಕರವಾದ ಸವಾಲುಗಳನ್ನು ಇರುವುದರಿಂದ ನಾನ ಹೊರಗಿನಿಂದ ನಿಂತು ಜನರಿಗಾಗಿ ದುಡಿಯುವುದೇ ಲೇಸು ಎಂದು ನನಗನ್ನಿಸುತ್ತಿದೆ. ಕೇವಲ ವ್ಯಾವಹಾರಿಕ ಮಾತ್ರವಲ್ಲದೇ ನನ್ನೊಂದಿಗೆ ಕೆಲಸ ಮಾಡಿದ, ನನ್ನ ಹಾದಿಯಲ್ಲಿ ಜೊತೆಗೂಡಿದ ಎಲ್ಲಾ ಸ್ನೇಹಿತರಿಗೂ, ಅವರ ಕುಟುಂಬ ವರ್ಗಕ್ಕೂ ಪ್ರೀತಿ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ.”

2009ರ ಐ.ಎ.ಎಸ್ ಕೇಡರ್ ಆದ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ರಾಜಿನಾಮೆ ನೀಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಜನ ನಿರಾಸೆ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದಿನ ಅವರು ಸೇವೆಯಲ್ಲಿರಬೇಕಿತ್ತು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸಾಲು ಸಾಲಾಗಿ ಐ.ಎ.ಎಸ್ ಅಧಿಕಾರಿಗಳು ರಾಜಿನಾಮೆ ನೀಡುತ್ತಿರುವುದಕ್ಕೆ ಇಂದಿನ ಭಾರತದ ಸ್ಥಿತಿಯೇ ಕಾರಣವೇ ಎಂಬ ಅಸಮಾಧಾನ ಕೂಡ ಬರುತ್ತಿದೆ. ಕಳೆದ 10 ದಿನಗಳ ಹಿಂದಷ್ಟೇ ಕಣ್ಣನ್ ಗೋಪಿನಾಥ್ ಎಂಬ ಐ.ಎ.ಎಸ್ ಅಧಿಕಾರಿ ಕೂಡ ರಾಜಿನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಾರತದ ಮೂಲಭೂತ ಗುಣಗಳಾದ ಬಹುತ್ವ ಮತ್ತು ಪ್ರಜಾಪ್ರಭುತ್ವಕ್ಕೆ ಹಿಂದೆಂದೂ ಕಾಣದ ರೀತಿಯಲ್ಲಿ ಧಕ್ಕೆಯಾಗುತ್ತಿರುವಾಗ ನಾಗರಿಕ ಸೇವೆಯಲ್ಲಿ ( IAS) ಮುಂದುವರಿಯುವುದು ಅನೈತಿಕ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ ದಕ ಜಿಲ್ಲೆಯ ಅತ್ಯಂತ ದಕ್ಷ ಜಿಲ್ಲಾಧಿಕಾರಿ ಶ್ರೀ ಸೆಂಥಿಲ್ ಕುಮಾರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

    ದೇಶದ ಅರ್ಥ ವ್ಯವಸ್ಥೆ ವೇಗವಾಗಿ ಕುಸಿಯುತ್ತಿದೆ. ಲಕ್ಷಾಂತರ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ. ಕಾಶ್ಮೀರವನ್ನು ಸೈನಿಕರು ಆಳುತ್ತಿದ್ದಾರೆ. ಉತ್ತರಪೂರ್ವದ ಸುಮಾರು ೭೦ ಲಕ್ಷ ಜನ ಭಯಭೀತರಾಗಿದ್ದಾರೆ. ವಿಜ್ಞಾನಿಗಳು ಒಳ್ಳೆ ಮಕ್ಕಳು ಹುಟ್ಟಲು ಗರ್ಭಿಣಿಯರಿಗೆ ಸೆಗಣಿ ತಿನ್ನಲು ಹೇಳುತ್ತಿದ್ದಾರೆ. ರಾಜಕಾರಣಿಗಳು ಬೆಂಕಿಹಚ್ಚುವ ಮಾತಾಡುತ್ತಿದ್ದಾರೆ.

    ಯಾರಿಗಾಗಿ? ಯಾರು? ಯಾವ ಬಗೆಯ ನಾಡನ್ನು ಕಟ್ಟುತ್ತಿದ್ದಾರೋ ತಿಳಿದವರು ಹೇಳಬೇಕು.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...