Homeಕರ್ನಾಟಕದಕ್ಷಿಣ ಕನ್ನಡ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ; 2 ಪ್ರಕರಣ ದಾಖಲು

ದಕ್ಷಿಣ ಕನ್ನಡ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ; 2 ಪ್ರಕರಣ ದಾಖಲು

- Advertisement -
- Advertisement -

ಬೆಡ್‌ಶೀಟ್‌ ಮಾರಾಟ ಮಾಡಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಬಳಿ ದೋಲ್ಪಾಡಿಗೆ ತೆರಳಿದ್ದ ಮುಸ್ಲಿಂ ಯುವಕರಿಬ್ಬರಿಗೆ ಮಾರಣಾಂತಿಕವಾಗಿ ‘ಗುಂಪು ಹಲ್ಲೆ’ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ. ಹಲ್ಲೆ ನಡೆಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ತೀವ್ರ ಆಕ್ರೊಶ ವ್ಯಕ್ತವಾಗಿದೆ.

ವ್ಯಾಪಾರಿಗಳು ಬೆಡ್‌ಶೀಟ್‌ಗಳನ್ನು ಮಾರಾಟ ಮಾಡುವ ವೇಳೆ ಬೆಲೆಯ ವಿಚಾರದಲ್ಲಿ ಕೆಲವು ಮಹಿಳೆಯರೊಂದಿಗೆ ಚೌಕಾಶಿ ನಡೆಸಿ, ಅಲ್ಲಿಂದ ಹೊರಟ ನಂತರ ಗುಂಪೊಂದು ಅವರನ್ನು ಅಡ್ಡಗಟ್ಟಿ ಥಳಿಸಿದೆ. ಘಟನೆಯಲ್ಲಿ ಸುಮಾರು 2 ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಾಯಗೊಂಡವರನ್ನು ರಮೀಜುದ್ದೀನ್ (25) ಮತ್ತು ರಫೀಕ್ (30) ಎಂದು ಗುರುತಿಸಲಾಗಿದ್ದು, ಪೊಳಲಿ ಬಳಿಯ ಅಡ್ಡೂರು ನಿವಾಸಿಗಳು ಎಂದು ವರದಿಯಗಿದೆ. ಸಂತ್ರಸ್ತ ಯುವಕರಿಬ್ಬರು ಸಾಮಾನ್ಯವಾಗಿ ವ್ಯಾಪಾರಕ್ಕೆಂದು ಹಳ್ಳಿ ಹಳ್ಳಿಗೆ ಹೋಗುತ್ತಿದ್ದರು ಎಂದು ಸಂತ್ರಸ್ತರ ಕುಟುಂಬದವರು ತಿಳಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯಾ: ಪತಿ ತನ್ನ ಪತ್ನಿಗೆ ‘ಮುತ್ತು’ ಕೊಟ್ಟಿದ್ದಕ್ಕೆ ಗುಂಪು ಹಲ್ಲೆ!

ಯುವಕರಿಬ್ಬರು ಗುಂಪು ಹಲ್ಲೆಗೆ ಒಳಗಾದರೂ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಕಟುಂಬಸ್ಥರು ಹೇಳಿದ್ದು, ಅದರ ಬದಲಾಗಿ ಮಹಿಳೆಯರು ನೀಡಿದ ಸುಳ್ಳು ದೂರಿನ ಮೇರೆಗೆ ಸಂತ್ರಸ್ತರ ವಿರುದ್ಧವೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾಗಿ ವರದಿಯಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,“ಇದು ಒಂದಕ್ಕೊಂದು ಸಂಬಂಧ ಹೊಂದಿದೆ ಘಟನೆಯಾಗಿದೆ. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಇಬ್ಬರು ಕಾರ್ಪೆಟ್‌ ವ್ಯಾಪಾರಿಗಳು ಎಸ್‌ಸಿ ಸಮುದಾಯಕ್ಕೆ ಸೇರಿದ ಮಹಿಳೆಯೊಬ್ಬರ ಮನೆ ಪ್ರವೇಶಿಸಿ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಇದರಂದಾಗಿ ಆರೋಪಿಗಳಿಬ್ಬರು ತಮ್ಮ ಆಲ್ಟೋ ಕಾರಿನಿಂದ ಅಲ್ಲಿಂದ ಓಡಿ ಹೋಗಿದ್ದಾರೆ” ಎಂದು ಹೇಳಿದರು.

“ಈ ವೇಳೆ ಅವರನ್ನು ಗುಂಪೊಂದು ಅಟ್ಟಿಸಿಕೊಂಡು ಹೋಗಿ, ಅವರ ಮೇಲೆ ಹಲ್ಲೆ ನಡೆಸಿದೆ” ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಮಧ್ಯಪ್ರದೇಶ | ಧಾರ್ಮಿಕ ಗುರುತಿನ ಆಧಾರದಲ್ಲಿ ಮುಸ್ಲಿಂ ಕುಟುಂಬದ ಮೇಲೆ ಗುಂಪು ಹಲ್ಲೆ: ಆರೋಪ

“ಈ ಬಗ್ಗೆ ಎರಡು ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರಣವನ್ನು ಮಹಿಳೆಯೊಬ್ಬರು ದಾಖಲಿಸಿದ್ದು, ದಲಿತ ದೌರ್ಜನ್ಯ ತಡೆ ಮತ್ತು ಲೈಂಗಿಕ ಕಿರುಕುಳದ ಅಡಿಯಲ್ಲಿ ದಾಖಲಾಗಿದ್ದು, ಮತ್ತೊಂದು ಪ್ರಕರಣ ಯುವಕರ ದೂರಿನಂತೆ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿಗಳನ್ನು ಗುರುತಿಸಲಾಗುತ್ತಿದೆ. ದಾಳಿಗೊಳಗಾದ ಯುವಕರಿಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ” ಎಂದು ಎಸ್‌ಪಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...