Homeಕರ್ನಾಟಕದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಟಾ ಪರ 15,000ಕ್ಕೂ ಅಧಿಕ ಮತ ಚಲಾವಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಟಾ ಪರ 15,000ಕ್ಕೂ ಅಧಿಕ ಮತ ಚಲಾವಣೆ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 295 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 230 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 19 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ವಿರುದ್ಧ 1,14,000ಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15, 239ಕ್ಕೂ ಅಧಿಕ ನೋಟಾ ಮತಗಳ ಚಲಾವಣೆಯಾಗಿದ್ದು, ನೋಟ ಮೂರನೇ ಸ್ಥಾನದಲ್ಲಿದೆ.

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ.  ಮಿಝರೋಂನ 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ.  ನಾಗಲ್ಯಾಂಡ್ನ 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಪುದುಚೇರಿಯ 1 ಕ್ಷೇತ್ರದಲ್ಲಿ ಕಾಂಗ್ರೆಸ್‌  ಮುನ್ನಡೆಯನ್ನು ಸಾಧಿಸಿದೆ. ಸಿಕ್ಕಿಂನ ಒಂದು ಕ್ಷೇತ್ರದಲ್ಲಿ ಎಸ್‌ಕೆಎಂ ಮುನ್ನಡೆಯನ್ನು ಸಾಧಿಸಿದೆ. ಅಂಡೋಮಾನ್‌ ನಿಕೋಬರ್‌ ದ್ವೀಪದ 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ.  ಮಣಿಪುರ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಮೇಘಾಲಯದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನೊಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ.  ಗೋವಾದ ಎರಡು ಕ್ಷೇತ್ರದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಇನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ದಾದ್ರಾ ಮತ್ತು ನಾಗರ್‌ ಅವೇಲಿಯಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಮತ್ತು ಪಕ್ಷೇತರ ಅಭ್ಯರ್ಥಿ ಇನ್ನೊಂದು ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಒಡಿಶಾ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು, ಒಡಿಶಾದಲ್ಲಿ ಬಿಜೆಡಿ 51 ಕ್ಷೇತ್ರಗಳಲ್ಲಿ ಮತ್ತು  ಬಿಜೆಪಿ 74 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್‌ 13 ಕ್ಷೇತ್ರಗಳಲ್ಲಿ ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿಗೆ ಹಿನ್ನಡೆ ಕಂಡು ಬರುತ್ತಿದೆ.

ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ದ.ಕನ್ನಡ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿಕಾಂತ್‌ ಸೆಂಥಿಲ್‌ ಡಿಎಂಡಿಕೆಯ ನಲ್ಲತಂಬಿ ವಿರುದ್ಧ  42,000ಕ್ಕೂ ಅಧಿಕ ಮತಗಳ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ.

ಬಿಜೆಪಿ ದೇಶದಲ್ಲಿ ಒಟ್ಟು 243 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್‌ ಏಕಾಂಗಿಯಾಗಿ 100 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಎನ್‌ಡಿಎ ಮೈತ್ರಿ ಪಕ್ಷಗಳಾದ ಟಿಡಿಪಿ 15 ಕ್ಷೇತ್ರಗಳಲ್ಲಿ ಮತ್ತು ಶಿವಸೇನೆ(ಏಕನಾಥ್‌ ಬಣ) ಜೆಡಿಯು 7 ಕ್ಷೇತ್ರಗಳಲ್ಲಿ ಎಲ್‌ಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಕಾಂಗ್ರೆಸ್‌ ಏಕಾಂಗಿಯಾಗಿ 101 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಎಸ್ಪಿ 33 ಕ್ಷೇತ್ರಗಳಲ್ಲಿ, ಟಿಎಂಸಿ 21 ಕ್ಷೇತ್ರಗಳಲ್ಲಿ ಡಿಎಂಕೆ 20 ಕ್ಷೇತ್ರಗಳಲ್ಲಿ  ಶಿವಸೇನೆ ಉದ್ಧವ್ ಬಣ 8 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಅಮೇಥಿಯಲ್ಲಿ ಬಿಜೆಪಿ ನಾಯಕಿ, ಕೇಂದ್ರ ಸಚಿವ ಸ್ಮೃತಿ ಇರಾನಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ  ಕಿಶೋರ್‌ ಲಾಲ್‌ ಮುನ್ನಡೆಯನ್ನು ಸಾಧಿಸಿದ್ದಾರೆ.  ಹೈದ್ರಾಬಾದ್‌ ಸೆಂಟ್ರಲ್‌ನಲ್ಲಿ ಮಾಧವಿ ಲತಾಗೆ ಭಾರೀ ಹಿನ್ನಡೆಯಾಗಿದ್ದು, ಅಸಾದುದ್ದೀನ್ ಒವೈಸಿ ಮುನ್ನಡೆಯನ್ನು ಸಾಧಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...