Homeಕರ್ನಾಟಕದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

”ವಿಪಕ್ಷ ನಾಯಕ ಸಿದ್ದರಾಮಯ್ಯನವರು ದಲಿತ ವಿರೋಧಿಯಲ್ಲ ಎಂದು ಹೇಳಿಕೆ ನೀಡಿದ ಕಾರಣಕ್ಕೆ ಸಂಸದ ಮುನಿಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರ ಕೆ.ಎಂ.ಸಂದೇಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಧ್ಯ ಸಂದೇಶ್ ಅವರು, ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಿರುಕುಳ ನೀಡಿದವರ ವಿರುದ್ಧ ಕ್ರಮ ಆಗಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೆಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ”ಕೋಲಾರದ ದಲಿತ ಮುಖಂಡ ಸಂದೇಶ್ ಅವರ ಮೇಲೆ ದುರುದ್ದೇಶಪೂರಿತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಹಿಂಸೆ ನೀಡಿ ಆತನನ್ನು ಆತ್ಮಹತ್ಯೆಗೆ ಪ್ರಯತ್ನಿಸುವಂತೆ ಮಾಡಿರುವವರು ಯಾರೇ ಆಗಲಿ ಅಂಥವರನ್ನು ತಕ್ಷಣ ಬಂಧಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸಿ ಸಂತ್ರಸ್ತನಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

”ಧ್ವನಿಯಿಲ್ಲದ ಜನರ ಪರವಾದ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಂಡ ಮೇಲೆ ಆ ಹಾದಿಯಿಂದ ವಿಮುಖಗೊಳಿಸುವ ನಿರಂತರ ಪ್ರಯತ್ನಗಳು ಖಂಡಿತಾ ನಡೆಯುತ್ತವೆ, ಇಂಥಾ ದುಷ್ಟರ ಪ್ರಯತ್ನಗಳಿಂದ ನೊಂದು ದುಡುಕಿ ಆತ್ಮಹತ್ಯೆಯ ನಿರ್ಧಾರ ಕೈಗೊಂಡರೆ ನಿಮ್ಮ ಬೆನ್ನ ಹಿಂದಿರುವ ಜನ, ನಿಮ್ಮ ಕುಟುಂಬ ಎರಡೂ ಅನಾಥವಾಗುತ್ತದೆ. ವ್ಯವಸ್ಥೆಯಿಂದ ಅನ್ಯಾಯ, ಅಪಮಾನಕ್ಕೀಡಾಗಿ ನೊಂದಿರುವ ದಲಿತ ಮುಖಂಡ ಸಂದೇಶ್ ಅವರ ಜೊತೆ ನಾನಿದ್ದೇನೆ. ಅಪಮಾನಗಳನ್ನೇ ಸವಾಲಿನಂತೆ ಸ್ವೀಕರಿಸಿ ಗೆದ್ದ ಬಾಬಾ ಸಾಹೇಬರು ನೀಡಿರುವ ಸಂವಿಧಾನ ನಮ್ಮ ಜೊತೆಗಿದೆ. ಹೀಗಾಗಿ ನ್ಯಾಯ ಸಿಗುವ ಪೂರ್ಣ ವಿಶ್ವಾಸ ನನಗಿದೆ. ಸಂದೇಶ್ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ” ಎಂದು ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ಇದನ್ನೂ ಓದಿ: ‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

ಸಂದೇಶ್ ಬರೆದಿರುವ ಪತ್ರದಲ್ಲಿ ಏನಿದೆ?

“ಬಾಗಲ ಕೋಟೆ ಮೂಲದ ದಲಿತ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಮುಂದಾಗಿದ್ದರಿಂದ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ಕು ಜನ ಅಮಾಯಕರಿದ್ದಾರೆ. ಅವರಿಗೆ ತೊಂದರೆಯಾಗುವುದರಿಂದ ಆ ಪ್ರಕರಣದ ಕುರಿತು ಬರೆಯುವುದಿಲ್ಲ. ನ್ಯಾಯಾಲಯದಲ್ಲಿ ಗೆಲುವು ಸಿಗುತ್ತದೆ”.

“ನನ್ನ ವಿಚಾರವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು, ಅದನ್ನು ಪತ್ರಿಕೆಗಳಲ್ಲಿ ಕೆಟ್ಟದ್ದಾಗಿ ಬರೆದಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಯಾವುದೇ ತಪ್ಪು ಮಾಡದೆ ಇದ್ದರೂ ಸಮಾಜದಲ್ಲಿ ತಲೆ ಎತ್ತಿ ನಡೆಯಲು ಆಗುತ್ತಿಲ್ಲ.”

“ಕಣ್ಣೂರು ಸ್ಮಶಾನ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಬಂಡಹಳ್ಳಿ ಗ್ರಾಮದಲ್ಲಿ ಬಡವರ ಮನೆಗಳನ್ನು ಉಳಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟದಲ್ಲಿ ಒಂದು ಪ್ರಕರಣ, ಈಗ ಈ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳು ನನ್ನ ಸ್ವಾರ್ಥಕ್ಕಾಗಿ ಆದದ್ದಲ್ಲ.”

“ನಾನು ಇಲ್ಲಿಯ ತನಕ 129 ಅಂತರ್ಜಾತಿ ವಿವಾಹಗಳನ್ನು ನಡೆಸಿದ್ದು, ಯಾವುದೇ ದಂಪತಿಯಿಂದ ಒಂದು ಪೈಸೆ ಹಣ ಪಡೆದಿಲ್ಲ. ನನ್ನ ಜೀವನದಲ್ಲಿ ಯಾವುದೇ ಕಚೇರಿ, ಅಧಿಕಾರಿಯ ಬಳಿ ರೋಲ್‌ಕಾಲ್ ಮಾಡಿಲ್ಲ. ನನ್ನ ವಿರುದ್ಧವಾಗಿ ಯಾವುದೇ ಆಧಾರವಿಲ್ಲದೆ ಪತ್ರಿಕಾಗೋಷ್ಠಿ ನಡೆಸಿರುವುದರಿಂದ ನೋವಾಗಿದೆ.”

“ನಾನು ಜೀವನಪೂರ್ತಿ ಬಾಡಿಗೆ ಮನೆಯಲ್ಲಿಯೇ ವಾಸವಿದ್ದೇನೆ. ಇಲ್ಲಿಯತನಕ ಸ್ವಃತ ಮನೆಯನ್ನೂ ಕಟ್ಟಿಕೊಂಡಿಲ್ಲ. ಒಂದೇ ಒಂದು ಗುಂಟೆ ಜಮೀನಿಲ್ಲ. ಒಂದೇ ಒಂದು ನಿವೇಶನ ಇಲ್ಲ. ನನಗೆ ಕೆಟ್ಟ ಹವ್ಯಾಸಗಳೂ ಇಲ್ಲ. ನನ್ನ ಜನರು ಪೋನ್‌ ಮಾಡಿದರೆ ತಕ್ಷಣ ಅಲ್ಲಿಗೆ ಹೋಗಿ ಅವರಿಗೆ ನ್ಯಾಯ ಕೊಡಿಸುವ ಹವ್ಯಾಸವೊಂದು ನನಗಿದೆ.”

“ನನ್ನನ್ನು ಮುಗಿಸಲು ಕೋಲಾರ ಜಿಲ್ಲೆಯ ಮಾನ್ಯ ಸಂಸದರು ಷಡ್ಯಂತ್ರ ನಡೆಸಿ, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇಷ್ಟು ವರ್ಷ ಮನೆಮನೆಗೆ ಪತ್ರಿಕೆ ಹಾಕಿಕೊಂಡು, ಕಾಲಿಗೆ ಚಪ್ಪಲಿ ಇಲ್ಲದೆ, ಹರಿದ ಬಟ್ಟೆಹಾಕಿಕೊಂಡು ಕೂಡಿಟ್ಟುಕೊಂಡಿದ್ದ ಗೌರವವನ್ನು ಮಾನ್ಯ ಸಂಸದರು ಹಾಳು ಮಾಡಿದ್ದಾರೆ.”

“ನಾನು ಮೊದಲೇ ಹೇಳಿದ್ದೆ. ನನಗೆ ಯಾವತ್ತೂ ಅವಮಾನ ಆಗುತ್ತೋ ಅವತ್ತು ನನ್ನ ಸಾವು ಎಂದು. ಆದರೆ ನಾನು ಯಾವ ತಪ್ಪು ಮಾಡದೆ ನನಗೆ ಸಾಕಷ್ಟು ಅವಮಾನ ಆಗುತ್ತಿದ್ದು ಇದನ್ನು ನನ್ನಿಂದ ಸಹಿಸಲು ಆಗುತ್ತಿಲ್ಲ.”

“ಸಿದ್ದರಾಮಯ್ಯನರು ದಲಿತ ವಿರೋಧಿ ಅಲ್ಲ ಎಂದು ನಾನು ಕೊಟ್ಟ ಒಂದೇ ಒಂದು ಹೇಳಿಕೆಯಿಂದ ನನಗೆ ಈ ಪರಿಸ್ಥಿತಿ ಬಂದಿದೆ. ನಾನು ಕಷ್ಟದಲ್ಲಿದ್ದ ಸಮಯದಲ್ಲಿ ನನಗೆ ಯಾರು ಸಹಾಯ ಮಾಡಿಲ್ಲ. ಈ ಸಮಾಜದಲ್ಲಿ ನಾನು ಯಾವತ್ತೂ ತಲೆ ಬಾಗಿಲ್ಲ. ಆದರೆ ನಾನು ಮಾಡದ ತಪ್ಪಿಂದ ಈ ತೀರ್ಮಾನ ತೆಗೆದುಕೊಂಡಿದ್ದೇನೆ.”

-ಹೀಗೆ ಪತ್ರ ಬರೆದಿರುವ ಸಂದೇಶ್ ಅವರು ತಮ್ಮ ಹಿತೈಷಿಗಳನ್ನು ನನೆದಿದ್ದಾರೆ. ಸಂದೇಶ್ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಬಳಿಕ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡಿದ್ದು, ಸಂದೇಶ ಪರ ನಿಂತಿದ್ದಾರೆ. ದಲಿತ ಹಿರಿಯ ಹೋರಾಟಗಾರರು ಈ ಕುರಿತು ಮಾತನಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...