Homeಕರ್ನಾಟಕದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

”ವಿಪಕ್ಷ ನಾಯಕ ಸಿದ್ದರಾಮಯ್ಯನವರು ದಲಿತ ವಿರೋಧಿಯಲ್ಲ ಎಂದು ಹೇಳಿಕೆ ನೀಡಿದ ಕಾರಣಕ್ಕೆ ಸಂಸದ ಮುನಿಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರ ಕೆ.ಎಂ.ಸಂದೇಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಧ್ಯ ಸಂದೇಶ್ ಅವರು, ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಿರುಕುಳ ನೀಡಿದವರ ವಿರುದ್ಧ ಕ್ರಮ ಆಗಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೆಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ”ಕೋಲಾರದ ದಲಿತ ಮುಖಂಡ ಸಂದೇಶ್ ಅವರ ಮೇಲೆ ದುರುದ್ದೇಶಪೂರಿತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಹಿಂಸೆ ನೀಡಿ ಆತನನ್ನು ಆತ್ಮಹತ್ಯೆಗೆ ಪ್ರಯತ್ನಿಸುವಂತೆ ಮಾಡಿರುವವರು ಯಾರೇ ಆಗಲಿ ಅಂಥವರನ್ನು ತಕ್ಷಣ ಬಂಧಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸಿ ಸಂತ್ರಸ್ತನಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

”ಧ್ವನಿಯಿಲ್ಲದ ಜನರ ಪರವಾದ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಂಡ ಮೇಲೆ ಆ ಹಾದಿಯಿಂದ ವಿಮುಖಗೊಳಿಸುವ ನಿರಂತರ ಪ್ರಯತ್ನಗಳು ಖಂಡಿತಾ ನಡೆಯುತ್ತವೆ, ಇಂಥಾ ದುಷ್ಟರ ಪ್ರಯತ್ನಗಳಿಂದ ನೊಂದು ದುಡುಕಿ ಆತ್ಮಹತ್ಯೆಯ ನಿರ್ಧಾರ ಕೈಗೊಂಡರೆ ನಿಮ್ಮ ಬೆನ್ನ ಹಿಂದಿರುವ ಜನ, ನಿಮ್ಮ ಕುಟುಂಬ ಎರಡೂ ಅನಾಥವಾಗುತ್ತದೆ. ವ್ಯವಸ್ಥೆಯಿಂದ ಅನ್ಯಾಯ, ಅಪಮಾನಕ್ಕೀಡಾಗಿ ನೊಂದಿರುವ ದಲಿತ ಮುಖಂಡ ಸಂದೇಶ್ ಅವರ ಜೊತೆ ನಾನಿದ್ದೇನೆ. ಅಪಮಾನಗಳನ್ನೇ ಸವಾಲಿನಂತೆ ಸ್ವೀಕರಿಸಿ ಗೆದ್ದ ಬಾಬಾ ಸಾಹೇಬರು ನೀಡಿರುವ ಸಂವಿಧಾನ ನಮ್ಮ ಜೊತೆಗಿದೆ. ಹೀಗಾಗಿ ನ್ಯಾಯ ಸಿಗುವ ಪೂರ್ಣ ವಿಶ್ವಾಸ ನನಗಿದೆ. ಸಂದೇಶ್ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ” ಎಂದು ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ಇದನ್ನೂ ಓದಿ: ‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

ಸಂದೇಶ್ ಬರೆದಿರುವ ಪತ್ರದಲ್ಲಿ ಏನಿದೆ?

“ಬಾಗಲ ಕೋಟೆ ಮೂಲದ ದಲಿತ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಮುಂದಾಗಿದ್ದರಿಂದ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ಕು ಜನ ಅಮಾಯಕರಿದ್ದಾರೆ. ಅವರಿಗೆ ತೊಂದರೆಯಾಗುವುದರಿಂದ ಆ ಪ್ರಕರಣದ ಕುರಿತು ಬರೆಯುವುದಿಲ್ಲ. ನ್ಯಾಯಾಲಯದಲ್ಲಿ ಗೆಲುವು ಸಿಗುತ್ತದೆ”.

“ನನ್ನ ವಿಚಾರವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು, ಅದನ್ನು ಪತ್ರಿಕೆಗಳಲ್ಲಿ ಕೆಟ್ಟದ್ದಾಗಿ ಬರೆದಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಯಾವುದೇ ತಪ್ಪು ಮಾಡದೆ ಇದ್ದರೂ ಸಮಾಜದಲ್ಲಿ ತಲೆ ಎತ್ತಿ ನಡೆಯಲು ಆಗುತ್ತಿಲ್ಲ.”

“ಕಣ್ಣೂರು ಸ್ಮಶಾನ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಬಂಡಹಳ್ಳಿ ಗ್ರಾಮದಲ್ಲಿ ಬಡವರ ಮನೆಗಳನ್ನು ಉಳಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟದಲ್ಲಿ ಒಂದು ಪ್ರಕರಣ, ಈಗ ಈ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳು ನನ್ನ ಸ್ವಾರ್ಥಕ್ಕಾಗಿ ಆದದ್ದಲ್ಲ.”

“ನಾನು ಇಲ್ಲಿಯ ತನಕ 129 ಅಂತರ್ಜಾತಿ ವಿವಾಹಗಳನ್ನು ನಡೆಸಿದ್ದು, ಯಾವುದೇ ದಂಪತಿಯಿಂದ ಒಂದು ಪೈಸೆ ಹಣ ಪಡೆದಿಲ್ಲ. ನನ್ನ ಜೀವನದಲ್ಲಿ ಯಾವುದೇ ಕಚೇರಿ, ಅಧಿಕಾರಿಯ ಬಳಿ ರೋಲ್‌ಕಾಲ್ ಮಾಡಿಲ್ಲ. ನನ್ನ ವಿರುದ್ಧವಾಗಿ ಯಾವುದೇ ಆಧಾರವಿಲ್ಲದೆ ಪತ್ರಿಕಾಗೋಷ್ಠಿ ನಡೆಸಿರುವುದರಿಂದ ನೋವಾಗಿದೆ.”

“ನಾನು ಜೀವನಪೂರ್ತಿ ಬಾಡಿಗೆ ಮನೆಯಲ್ಲಿಯೇ ವಾಸವಿದ್ದೇನೆ. ಇಲ್ಲಿಯತನಕ ಸ್ವಃತ ಮನೆಯನ್ನೂ ಕಟ್ಟಿಕೊಂಡಿಲ್ಲ. ಒಂದೇ ಒಂದು ಗುಂಟೆ ಜಮೀನಿಲ್ಲ. ಒಂದೇ ಒಂದು ನಿವೇಶನ ಇಲ್ಲ. ನನಗೆ ಕೆಟ್ಟ ಹವ್ಯಾಸಗಳೂ ಇಲ್ಲ. ನನ್ನ ಜನರು ಪೋನ್‌ ಮಾಡಿದರೆ ತಕ್ಷಣ ಅಲ್ಲಿಗೆ ಹೋಗಿ ಅವರಿಗೆ ನ್ಯಾಯ ಕೊಡಿಸುವ ಹವ್ಯಾಸವೊಂದು ನನಗಿದೆ.”

“ನನ್ನನ್ನು ಮುಗಿಸಲು ಕೋಲಾರ ಜಿಲ್ಲೆಯ ಮಾನ್ಯ ಸಂಸದರು ಷಡ್ಯಂತ್ರ ನಡೆಸಿ, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇಷ್ಟು ವರ್ಷ ಮನೆಮನೆಗೆ ಪತ್ರಿಕೆ ಹಾಕಿಕೊಂಡು, ಕಾಲಿಗೆ ಚಪ್ಪಲಿ ಇಲ್ಲದೆ, ಹರಿದ ಬಟ್ಟೆಹಾಕಿಕೊಂಡು ಕೂಡಿಟ್ಟುಕೊಂಡಿದ್ದ ಗೌರವವನ್ನು ಮಾನ್ಯ ಸಂಸದರು ಹಾಳು ಮಾಡಿದ್ದಾರೆ.”

“ನಾನು ಮೊದಲೇ ಹೇಳಿದ್ದೆ. ನನಗೆ ಯಾವತ್ತೂ ಅವಮಾನ ಆಗುತ್ತೋ ಅವತ್ತು ನನ್ನ ಸಾವು ಎಂದು. ಆದರೆ ನಾನು ಯಾವ ತಪ್ಪು ಮಾಡದೆ ನನಗೆ ಸಾಕಷ್ಟು ಅವಮಾನ ಆಗುತ್ತಿದ್ದು ಇದನ್ನು ನನ್ನಿಂದ ಸಹಿಸಲು ಆಗುತ್ತಿಲ್ಲ.”

“ಸಿದ್ದರಾಮಯ್ಯನರು ದಲಿತ ವಿರೋಧಿ ಅಲ್ಲ ಎಂದು ನಾನು ಕೊಟ್ಟ ಒಂದೇ ಒಂದು ಹೇಳಿಕೆಯಿಂದ ನನಗೆ ಈ ಪರಿಸ್ಥಿತಿ ಬಂದಿದೆ. ನಾನು ಕಷ್ಟದಲ್ಲಿದ್ದ ಸಮಯದಲ್ಲಿ ನನಗೆ ಯಾರು ಸಹಾಯ ಮಾಡಿಲ್ಲ. ಈ ಸಮಾಜದಲ್ಲಿ ನಾನು ಯಾವತ್ತೂ ತಲೆ ಬಾಗಿಲ್ಲ. ಆದರೆ ನಾನು ಮಾಡದ ತಪ್ಪಿಂದ ಈ ತೀರ್ಮಾನ ತೆಗೆದುಕೊಂಡಿದ್ದೇನೆ.”

-ಹೀಗೆ ಪತ್ರ ಬರೆದಿರುವ ಸಂದೇಶ್ ಅವರು ತಮ್ಮ ಹಿತೈಷಿಗಳನ್ನು ನನೆದಿದ್ದಾರೆ. ಸಂದೇಶ್ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಬಳಿಕ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡಿದ್ದು, ಸಂದೇಶ ಪರ ನಿಂತಿದ್ದಾರೆ. ದಲಿತ ಹಿರಿಯ ಹೋರಾಟಗಾರರು ಈ ಕುರಿತು ಮಾತನಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...