Homeಅಂಕಣಗಳುಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ಸಾಮಾಜಿಕ ಕಳಕಳಿಯ ಹೆಣ್ಣುಮಕ್ಕಳ ಗುಂಪೊಂದು ಇಂತಹ ಬುಂದೇಲಖಂಡದಲ್ಲಿ ಭಿನ್ನ ಬಗೆಯ ಗ್ರಾಮೀಣ ಪತ್ರಿಕೋದ್ಯಮವನ್ನು ನೆಲೆ ನಿಲ್ಲಿಸಿದೆ. ಎಂಟು ಪುಟಗಳ ಈ ವಾರಪತ್ರಿಕೆ ಹೆಸರು "ಖಬರ್ ಲೆಹರಿಯಾ” (ಸುದ್ದಿಯ ಅಲೆಗಳು). ನೂರಕ್ಕೆ ನೂರರಷ್ಟು ಹೆಣ್ಣುಮಕ್ಕಳೇ ಹೊರತರುವ ಏಕೈಕ ಗ್ರಾಮೀಣ ಪತ್ರಿಕೆಯಿದು. ಈ ಎಲ್ಲ ಹೆಣ್ಣುಮಕ್ಕಳೂ ತಳಸಮುದಾಯಗಳವರು. ವಿದ್ಯಮಾನಗಳನ್ನು ಹೆಣ್ಣುನೋಟದಿಂದ ಮತ್ತು ಜಾತ್ಯತೀತ ನೆಲೆಯಿಂದ ವರದಿ ಮಾಡುವುದು ಈ ಪತ್ರಿಕೆಯ ವಿಶೇಷ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಹುಟ್ಟಿ ರಾಜಸ್ತಾನವನ್ನು ಹಾದು ಉತ್ತರಪ್ರದೇಶದಲ್ಲಿ ಯಮುನೆಯನ್ನು ಸೇರುವ ಚಂಬಲ್ ನದಿಯ ಪ್ರಾಚೀನ ಹೆಸರು ಚರ್ಮಾನ್ವತಿ. ಅರ್ಥಾತ್ ದಂಡೆಗಳ ಮೇಲೆ ಚರ್ಮವನ್ನು ಒಣಗಿಸಲಾಗುತ್ತಿದ್ದ ನದಿ. ಮಹಾಭಾರತದಲ್ಲಿ ಈ ನದಿಯ ಹೆಸರು ಚರ್ಮಾನ್ಯವತಿ. ಆರ್ಯ ಅರಸು ರಂತಿದೇವನು ಅಗ್ನಿಹೋತ್ರದಲ್ಲಿ ಬಲಿ ನೀಡಿದ ಸಹಸ್ರಾರು ಪ್ರಾಣಿಗಳ ರಕ್ತ ಮತ್ತು ರಾಶಿ ಹಾಕಲಾಗಿದ್ದ ಚರ್ಮಗಳಿಂದ ಹರಿದ ದ್ರವಧಾರೆಯಿಂದ ಹುಟ್ಟಿದ ನದಿ. ಪಾಂಚಾಲ ರಾಜ್ಯದ ದಕ್ಷಿಣ ಸರಹದ್ದಾಗಿತ್ತು. ಶಕುನಿಯ ರಾಜ್ಯವಾಗಿದ್ದ ಸೀಮೆ. ಪಗಡೆಯಾಟ- ವಸ್ತ್ರಾಪಹರಣದ ನಂತರ ಕ್ರುದ್ಧ ದ್ರೌಪದಿ ಚರ್ಮಾನ್ವತಿಯನ್ನೂ ಅದರ ನೀರು ಕುಡಿದವರನ್ನೂ ಶಪಿಸುತ್ತಾಳೆ.

ಶಪಿತ ನದಿಯ ನೀರನ್ನು ಯಾರೂ ಮುಟ್ಟುವುದಿಲ್ಲ. ಹೀಗಾಗಿ ಈ ನದಿ ಮಲಿನವಾಗಲಿಲ್ಲ ಎಂಬ ಪ್ರತೀತಿಯಿದೆ. ಚಂಬಲ್ ಇಂದಿಗೂ ದೇಶದ ಅತ್ಯಂತ ಪರಿಶುದ್ಧ ನದಿಗಳಲ್ಲೊಂದು. ಚಂಬಲ್ ನೂರಾರು ವರ್ಷಗಳ ಕಾಲ ಕೊರೆದು ರಚಿಸಿರುವ ದುರ್ಗಮ ಕಣಿವೆಗಳು ಖ್ಯಾತ-ಕುಖ್ಯಾತ. ತಮ್ಮನ್ನು ಬಂಡಾಯಗಾರರು ಎಂದು ಕರೆದುಕೊಂಡ ಡಕಾಯಿತರು 20ನೆಯ ಶತಮಾನದಲ್ಲಿ ಈ ಕಣಿವೆಗಳಿಗೆ ಭೀತಿ- ನಿಗೂಢತೆಯನ್ನು ಲೇಪಿಸಿದರು. ಡಕಾಯಿತರ ಕುರಿತು ತಯಾರಿಸಿದ ಚಲನಚಿತ್ರಗಳು ಚಂಬಲ್ ಕಣಿವೆಯ ದಂತಕತೆಯನ್ನು ದೇಶದ ಮನೆಮನೆಗೆ ಮುಟ್ಟಿಸಿದವು. ಭೂಲಕ್ಷಣಗಳು ಮತ್ತು ಹಿಂಸೆಯ ಕುಖ್ಯಾತಿಯ ಕಾರಣ ಈ ಸೀಮೆಗೆ ಕೈಗಾರಿಕೆಗಳು ಕಾಲಿಡಲಿಲ್ಲ. ಚಂಬಲ್ ನದಿಯ ನೀರು ಇಂದಿಗೂ ಸ್ಫಟಿಕ ಶುದ್ಧವಾಗಿಯೇ ಉಳಿದಿದೆ.

ದಟ್ಟದಾರಿದ್ರ್ಯ, ಹೆಪ್ಪುಗಟ್ಟಿರುವ ಜಾತಿಪದ್ಧತಿಯ ಕ್ರೌರ್ಯ ಉತ್ತರಪ್ರದೇಶ-ಮಧ್ಯಪ್ರದೇಶ-ರಾಜಸ್ತಾನದ ಈ ಸಂಗಮ ಸೀಮೆಯ ಬಹುಜನರಾದ ದಲಿತರು ಹಿಂದುಳಿದವರು ಹಾಗೂ ಬುಡಕಟ್ಟು ಜನರನ್ನು ಇಂದಿಗೂ ತುಳಿದಿಟ್ಟಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದ ಸೀಮೆಗಳು ಸೇರಿ ಬುಂದೇಲಖಂಡ ಎಂದು ಎರಡು ರಾಜ್ಯಗಳ ಈ ಪ್ರದೇಶವನ್ನು ಕತ್ತಲ ಖಂಡ ಎನ್ನುವುದುಂಟು. ಅನಕ್ಷರತೆ, ಬಂಜರು, ಬಡತನ, ಬರಗಾಲ, ಬವಣೆಗಳೇ ಹಿಂಡಿರುವ ಖಂಡವಿದು. ಉಪ್ಪು-ರೊಟ್ಟಿ, ಹುಲ್ಲುಬೀಜಗಳನ್ನು ಬೀಸಿದ ಹಿಟ್ಟಿನ ರೊಟ್ಟಿಯನ್ನು ತಿಂದು ಜೀವ ಹಿಡಿದು ಸುದ್ದಿಯಾದವರು ಇಲ್ಲಿನ ಜನ. ಬೆಂಬಿಡದ ಬರಗಾಲ ಸಾವಿರಾರು ಸಣ್ಣ ಹಿಡುವಳಿದಾರರ ಪ್ರಾಣಬಲಿ ಪಡೆದ ಪ್ರದೇಶ. ಹಸಿದ ಮಕ್ಕಳ ಸಂಕಟ ನೋಡಲಾಗದೆ ರಕ್ತ ಮಾರಿ ಹೊಟ್ಟೆ ಹೊರೆದ ಪ್ರಕರಣಗಳು ಇಲ್ಲಿಂದ ವರದಿಯಾಗಿರುವುದು ಉಂಟು.

ಸಾಮಾಜಿಕ ಕಳಕಳಿಯ ಹೆಣ್ಣುಮಕ್ಕಳ ಗುಂಪೊಂದು ಇಂತಹ ಬುಂದೇಲಖಂಡದಲ್ಲಿ ಭಿನ್ನ ಬಗೆಯ ಗ್ರಾಮೀಣ ಪತ್ರಿಕೋದ್ಯಮವನ್ನು ನೆಲೆ ನಿಲ್ಲಿಸಿದೆ. ಎಂಟು ಪುಟಗಳ ಈ ವಾರಪತ್ರಿಕೆ ಹೆಸರು “ಖಬರ್ ಲೆಹರಿಯಾ” (ಸುದ್ದಿಯ ಅಲೆಗಳು). ನೂರಕ್ಕೆ ನೂರರಷ್ಟು ಹೆಣ್ಣುಮಕ್ಕಳೇ ಹೊರತರುವ ಏಕೈಕ ಗ್ರಾಮೀಣ ಪತ್ರಿಕೆಯಿದು. ಈ ಎಲ್ಲ ಹೆಣ್ಣುಮಕ್ಕಳೂ ತಳಸಮುದಾಯಗಳವರು. ವಿದ್ಯಮಾನಗಳನ್ನು ಹೆಣ್ಣುನೋಟದಿಂದ ಮತ್ತು ಜಾತ್ಯತೀತ ನೆಲೆಯಿಂದ ವರದಿ ಮಾಡುವುದು ಈ ಪತ್ರಿಕೆಯ ವಿಶೇಷ.

ಅವಧಿ, ಬುಂದೇಲಿ, ಭೋಜ್ಪುರಿ ಹಾಗೂ ಬಜ್ಜಿಕಾ ಎಂಬ ನಾಲ್ಕು ಪ್ರಾದೇಶಿಕ ನುಡಿಗಟ್ಟುಗಳಲ್ಲಿ ಹೊರಬರುವ ಈ ವಾರಪತ್ರಿಕೆಯು ದೇಶವಿದೇಶಗಳ ಮಾಧ್ಯಮಗಳ ಗಮನ ಸೆಳೆದಿದೆ. ಪತ್ರಕರ್ತೆಯರಿಗೆಂದು ಮೀಸಲಾದ ಪ್ರತಿಷ್ಠಿತ ಚಮೇಲಿ ದೇವಿ ಜೈನ್ ಪ್ರಶಸ್ತಿ, ಯುನೆಸ್ಕೋದ ಕಿಂಗ್ ಸೆಜೋಂಗ್ ಸಾಕ್ಷರತೆ ಬಹುಮಾನ, ಲಾಡ್ಲಿ ಮೀಡಿಯಾ ಪ್ರಶಸ್ತಿ, ಟೈಮ್ಸ್ ನೌ ಸುದ್ದಿವಾಹಿನಿಯ ಅಮೇಝಿಂಗ್ ಇಂಡಿಯನ್ ಪ್ರಶಸ್ತಿ, ಕೈಫಿ ಅಜ್ಮಿ ಪ್ರಶಸ್ತಿ, ಬೆಂಗಳೂರಿನ ಸ್ಫೂರ್ತಿಧಾಮ ಟ್ರಸ್ಟ್‌ನ ಬೋಧಿವೃಕ್ಷ ಪ್ರಶಸ್ತಿಗಳು ಈ ಸಾಹಸಕ್ಕೆ ಸಂದಿವೆ.

ಒಂದು ಕಾಲಕ್ಕೆ ಕಂಪ್ಯೂಟರನ್ನು ಮುಟ್ಟುವುದಿರಲಿ, ನೋಡುವುದೂ ದುಸ್ಸಾಧ್ಯವಿದ್ದ ಹಿನ್ನೆಲೆಯಿಂದ ಬಂದ ಬಡ ಯುವತಿಯರ ಆತ್ಮವಿಶ್ವಾಸ ಕುದುರಿದೆ. ಸಮಾಜ, ಸರ್ಕಾರ, ಸರೀಕ ಪತ್ರಕರ್ತರು ಗುರುತಿಸಿ ನಡೆಸಿಕೊಳ್ಳುವ ಪರಿ ಹೊಸ ಹುಮ್ಮಸ್ಸು ನೀಡಿದೆ. ಹೆಸರಿಗಂಟಿಕೊಂಡು ಬಂದ ತಳಸಮುದಾಯದ ಅಡ್ಡಹೆಸರುಗಳನ್ನು ಈ ಯುವತಿಯರು ಕಿತ್ತೆಸೆದಿದ್ದಾರೆ.

ದೊಡ್ಡ ಪತ್ರಿಕೆಗಳು ದೊಡ್ಡ ಪೇಟೆ ಪಟ್ಟಣಗಳ ಸುದ್ದಿ ಪ್ರಕಟಿಸುತ್ತವೆ. ಅವುಗಳ ಸಂಪಾದಕೀಯ ಸಿಬ್ಬಂದಿ ವಿಶ್ವವಿದ್ಯಾಲಯ ಶಿಕ್ಷಣ ಉಳ್ಳವರು, ಇಂಗ್ಲಿಷ್ ಬಲ್ಲವರು. ಬುಂದೇಲಖಂಡದ ಈ ಹಳ್ಳಿಗಾಡಿನ ಜನರ ಪಾಲಿಗೆ ಇಂಗ್ಲಿಷ್ ಮಾತ್ರವಲ್ಲ, ಹಿಂದಿ ಕೂಡ ಕುಲೀನ ಭಾಷೆ. ದಲಿತ ಮಹಿಳೆಯರು ದುಪ್ಪಟ್ಟು ಶೋಷಣೆ ಎದುರಿಸಿದವರು. ಬೇರುಮಟ್ಟದ ಸ್ಥಳೀಯ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲವರು ಎಂಬುದು ’ಲೆಹರಿಯಾ’ ಹಿಂದಿನ ಆಲೋಚನೆ.

ಕ್ಷೇತ್ರಕ್ಕೆ ತೆರಳಿ ಸುದ್ದಿ ಸಂಗ್ರಹಿಸುವವರು, ಬರೆಯುವವರು, ಪರಿಷ್ಕರಿಸಿ ತಲೆಬರೆಹ ನೀಡುವವರು, ಪತ್ರಿಕೆಯ ವಿನ್ಯಾಸ ಮಾಡುವವರು, ಮುದ್ರಣ ಮಾಡಿಸಿ ತರುವವರು, ಹಳ್ಳಿಗಳಿಗೆ ಹಂಚುವವರು ಎಲ್ಲರೂ ಹೆಣ್ಣುಮಕ್ಕಳೇ. ಒಂಟಿಯಾಗಿ ಹಳ್ಳಿ ಹಳ್ಳಿ ಸುತ್ತಿ ಸುದ್ದಿ ಹೆಕ್ಕುತ್ತಾರೆ. ನಕಾಶೆಯಲ್ಲೇ ಇಲ್ಲದ, ನೀರು ದೀಪಗಳಿರದ, ಅಂಚೆಯೂ ತಲುಪದ ಕೊಂಪೆಗಳನ್ನೂ ಬಿಟ್ಟಿಲ್ಲ ಇವರು. ದೊಡ್ಡ ಪತ್ರಿಕೆಗಳ ವರದಿಗಾರರು ಅನುಭವಿಸುವ ಸೌಲಭ್ಯಗಳು ಇವರಿಗಿಲ್ಲ. ಹಸಿವಾದರೆ ಮನೆಯಿಂದ ಒಯ್ದ ಬುತ್ತಿಯೇ ಗತಿ. ಬಸ್ಸು, ಸೈಕಲ್ಲು, ಕಿಲೋಮೀಟರುಗಟ್ಟಲೆ ಕಾಲ್ನಡಿಗೆ ಮಾಮೂಲು. ಪುಂಡು ಪೋಕರಿಗಳನ್ನೂ ಪುರುಷಪ್ರಾಧಾನ್ಯ ವ್ಯವಸ್ಥೆಯ ಕಿರುಕುಳಗಳನ್ನೂ ನಿತ್ಯ ನುಂಗಿ ನಡೆಯುತ್ತಾರೆ.

ಬುಂದೇಲ್ ಖಂಡದ ಚಿತ್ರಕೂಟ, ಫೈಝಾಬಾದ್, ಝಾನ್ಸಿ, ಲಲಿತಪುರ್, ಅಂಬೇಡ್ಕರ್ ನಗರ್, ಬಾಂದಾ ಜಿಲ್ಲೆಗಳಲ್ಲಿ ಲೆಹರಿಯಾ ಹೆಜ್ಜೆ ಗುರುತುಗಳು ಪಡಿಮೂಡಿವೆ. ಆರುನೂರು ಕುಗ್ರಾಮಗಳ ಬದುಕಿನ ಹಾಸು ಹೊಕ್ಕಾಗಿದೆ ಖಬರ್ ಲೆಹರಿಯಾ. ಈ ಪೈಕಿ ಬಹುತೇಕ ಹಳ್ಳಿಗಳು ಮುಖ್ಯವಾಹಿನಿಯ ಸುದ್ದಿಪತ್ರಿಕೆಗಳನ್ನು ಕಂಡಿಲ್ಲ. ಹಳ್ಳಿ ಹಳ್ಳಿಗಳ ಕುಡಿವ ನೀರು, ರಸ್ತೆ, ಶಾಲೆ, ಆಸ್ಪತ್ರೆ, ಮನರೇಗ ಯೋಜನೆಯಲ್ಲಿ ಕೂಲಿ ನಿರಾಕರಿಸಿ ಬಡಪಾಯಿಗಳ ವಂಚಿಸುವ ಪಂಚಾಯತಿ ಪ್ರಧಾನ, ರೇಷನ್ ಕಾರ್ಡ್ ಸಮಸ್ಯೆ, ಕಳವು, ಕೊಲೆ, ದಬ್ಬಾಳಿಕೆ, ಅಧಿಕಾರಿಗಳ ನಿರ್ಲಕ್ಷ್ಯದ ವ್ಯಥೆಯ ಕತೆಗಳ ಕುರಿತು ದೊಡ್ಡ ಪತ್ರಿಕೆಗಳಿಗೆ ರುಚಿಯಿಲ್ಲ.

ಡಿಜಿಟಲ್ ದಾರಿ ಹಿಡಿದ ನಂತರ ಪತ್ರಿಕೆಯನ್ನು ಓದುವ ಹೆಣ್ಣುಮಕ್ಕಳ ಪ್ರಮಾಣ ಭಾರೀ ಜಿಗಿತ ಕಂಡಿದೆ. ಸ್ಮಾರ್ಟ್ ಫೋನ್ ಮತ್ತು ಸೆಲ್ಫಿ ಸ್ಟಿಕ್ ಬಳಸಿ ಫೋಟೋ-ವಿಡಿಯೋ ತೆಗೆದು ವರದಿ ಸಂದರ್ಶನಗಳನ್ನು ವಾಟ್ಸಾಪ್‌ನಲ್ಲಿ ಕಚೇರಿಗೆ ರವಾನಿಸುತ್ತಿದ್ದಾರೆ ವರದಿಗಾರ್ತಿಯರು. ಪತ್ರಿಕೆಯಲ್ಲಿ ಅಚ್ಚಾಗುವ ವರದಿಗಳು ದೃಶ್ಯರೂಪದಲ್ಲಿ ಸಾಮಾಜಿಕ ಅಂತರ್ಜಾಲ ತಾಣಗಳ ಮೂಲಕ ಲಕ್ಷಾಂತರ ಮಂದಿಯನ್ನು ತಲುಪುತ್ತಿವೆ.

ಪತ್ರಿಕೆಯ ಡಿಜಿಟಲ್ ವ್ಯವಹಾರಗಳನ್ನು ಮುದ್ರಣದಿಂದ ಪ್ರತ್ಯೇಕಿಸಿ ಚಂಬಲ್ ಮೀಡಿಯಾ ಎಂಬ ಹೊಸ ಕಂಪನಿಯ ಕೈಗೆ ಒಪ್ಪಿಸಲಾಗಿದೆ. ಗ್ರಾಮೀಣ ಡಿಜಿಟಲ್ ಮಾಧ್ಯಮದ ಹೂರಣವನ್ನು ರೂಪಿಸಿ ಪ್ರಸ್ತುತಪಡಿಸುವುದು ಈ ಕಂಪನಿಯ ಕಾರ್ಯಸೂಚಿ. ಗ್ರಾಮೀಣ ಪ್ರದೇಶಗಳಲ್ಲೂ ಈಗ ಅಂತರ್ಜಾಲ ಸೌಲಭ್ಯ ಧಾರಾಳ. ಆದರೆ ಆ ಜನರಿಗೆ ಗುಣಮಟ್ಟದ ಸ್ವತಂತ್ರ ಪ್ರಗತಿಪರ ಡಿಜಿಟಲ್ ಮೀಡಿಯಾ ಲಭ್ಯವಿಲ್ಲ. ಅವರ ಸುದ್ದಿಯನ್ನು ಅವರದೇ ಭಾಷೆಯಲ್ಲಿ ಹೇಳುವ ಮತ್ತೊಂದು ಪ್ರಯತ್ನ ಈವರೆಗೆ ಆಗಿಲ್ಲ, ಸನಿಹ ಭವಿಷ್ಯದಲ್ಲಿ ನಡೆಯುವುದೂ ಇಲ್ಲ. ದಲಿತ, ಆದಿವಾಸಿ ಹಾಗೂ ಮುಸ್ಲಿಮ್ ಹೆಣ್ಣುಮಕ್ಕಳೇ ಚಂಬಲ್ ಮೀಡಿಯಾದಲ್ಲೂ ಸಕ್ರಿಯರಾಗಿರುತ್ತಾರೆ. ಮುಂಬರುವ ಮೂರು ವರ್ಷಗಳಲ್ಲಿ ಹಿಂದೀ ರಾಜ್ಯಗಳ ಎಂಬತ್ತು ಜಿಲ್ಲೆಗಳಲ್ಲಿ ನೆಲೆಯೂರುವ ಗುರಿಯನ್ನು ಇರಿಸಿಕೊಳ್ಳಲಾಗಿದೆ.

ಚಂಬಲ್ ಹೆಣ್ಣುಮಕ್ಕಳ ಈ ವಿರಳ ಪ್ರಯೋಗ ದೇಶದ ಇತರೆ ಸೀಮೆಗಳಲ್ಲೂ ಕುಡಿಯೊಡೆದು ಹಬ್ಬಬೇಕಿದೆ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...