Homeಅಂಕಣಗಳುಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ಬಹುಜನ ಭಾರತ; ಚಂಬಲ್ ಸೀಮೆಯಲ್ಲೊಂದು ಹೆಣ್ಣುನೋಟದ ದಲಿತ ಪತ್ರಿಕೋದ್ಯಮ: ಡಿ. ಉಮಾಪತಿ

ಸಾಮಾಜಿಕ ಕಳಕಳಿಯ ಹೆಣ್ಣುಮಕ್ಕಳ ಗುಂಪೊಂದು ಇಂತಹ ಬುಂದೇಲಖಂಡದಲ್ಲಿ ಭಿನ್ನ ಬಗೆಯ ಗ್ರಾಮೀಣ ಪತ್ರಿಕೋದ್ಯಮವನ್ನು ನೆಲೆ ನಿಲ್ಲಿಸಿದೆ. ಎಂಟು ಪುಟಗಳ ಈ ವಾರಪತ್ರಿಕೆ ಹೆಸರು "ಖಬರ್ ಲೆಹರಿಯಾ” (ಸುದ್ದಿಯ ಅಲೆಗಳು). ನೂರಕ್ಕೆ ನೂರರಷ್ಟು ಹೆಣ್ಣುಮಕ್ಕಳೇ ಹೊರತರುವ ಏಕೈಕ ಗ್ರಾಮೀಣ ಪತ್ರಿಕೆಯಿದು. ಈ ಎಲ್ಲ ಹೆಣ್ಣುಮಕ್ಕಳೂ ತಳಸಮುದಾಯಗಳವರು. ವಿದ್ಯಮಾನಗಳನ್ನು ಹೆಣ್ಣುನೋಟದಿಂದ ಮತ್ತು ಜಾತ್ಯತೀತ ನೆಲೆಯಿಂದ ವರದಿ ಮಾಡುವುದು ಈ ಪತ್ರಿಕೆಯ ವಿಶೇಷ.

- Advertisement -
- Advertisement -

ಮಧ್ಯಪ್ರದೇಶದಲ್ಲಿ ಹುಟ್ಟಿ ರಾಜಸ್ತಾನವನ್ನು ಹಾದು ಉತ್ತರಪ್ರದೇಶದಲ್ಲಿ ಯಮುನೆಯನ್ನು ಸೇರುವ ಚಂಬಲ್ ನದಿಯ ಪ್ರಾಚೀನ ಹೆಸರು ಚರ್ಮಾನ್ವತಿ. ಅರ್ಥಾತ್ ದಂಡೆಗಳ ಮೇಲೆ ಚರ್ಮವನ್ನು ಒಣಗಿಸಲಾಗುತ್ತಿದ್ದ ನದಿ. ಮಹಾಭಾರತದಲ್ಲಿ ಈ ನದಿಯ ಹೆಸರು ಚರ್ಮಾನ್ಯವತಿ. ಆರ್ಯ ಅರಸು ರಂತಿದೇವನು ಅಗ್ನಿಹೋತ್ರದಲ್ಲಿ ಬಲಿ ನೀಡಿದ ಸಹಸ್ರಾರು ಪ್ರಾಣಿಗಳ ರಕ್ತ ಮತ್ತು ರಾಶಿ ಹಾಕಲಾಗಿದ್ದ ಚರ್ಮಗಳಿಂದ ಹರಿದ ದ್ರವಧಾರೆಯಿಂದ ಹುಟ್ಟಿದ ನದಿ. ಪಾಂಚಾಲ ರಾಜ್ಯದ ದಕ್ಷಿಣ ಸರಹದ್ದಾಗಿತ್ತು. ಶಕುನಿಯ ರಾಜ್ಯವಾಗಿದ್ದ ಸೀಮೆ. ಪಗಡೆಯಾಟ- ವಸ್ತ್ರಾಪಹರಣದ ನಂತರ ಕ್ರುದ್ಧ ದ್ರೌಪದಿ ಚರ್ಮಾನ್ವತಿಯನ್ನೂ ಅದರ ನೀರು ಕುಡಿದವರನ್ನೂ ಶಪಿಸುತ್ತಾಳೆ.

ಶಪಿತ ನದಿಯ ನೀರನ್ನು ಯಾರೂ ಮುಟ್ಟುವುದಿಲ್ಲ. ಹೀಗಾಗಿ ಈ ನದಿ ಮಲಿನವಾಗಲಿಲ್ಲ ಎಂಬ ಪ್ರತೀತಿಯಿದೆ. ಚಂಬಲ್ ಇಂದಿಗೂ ದೇಶದ ಅತ್ಯಂತ ಪರಿಶುದ್ಧ ನದಿಗಳಲ್ಲೊಂದು. ಚಂಬಲ್ ನೂರಾರು ವರ್ಷಗಳ ಕಾಲ ಕೊರೆದು ರಚಿಸಿರುವ ದುರ್ಗಮ ಕಣಿವೆಗಳು ಖ್ಯಾತ-ಕುಖ್ಯಾತ. ತಮ್ಮನ್ನು ಬಂಡಾಯಗಾರರು ಎಂದು ಕರೆದುಕೊಂಡ ಡಕಾಯಿತರು 20ನೆಯ ಶತಮಾನದಲ್ಲಿ ಈ ಕಣಿವೆಗಳಿಗೆ ಭೀತಿ- ನಿಗೂಢತೆಯನ್ನು ಲೇಪಿಸಿದರು. ಡಕಾಯಿತರ ಕುರಿತು ತಯಾರಿಸಿದ ಚಲನಚಿತ್ರಗಳು ಚಂಬಲ್ ಕಣಿವೆಯ ದಂತಕತೆಯನ್ನು ದೇಶದ ಮನೆಮನೆಗೆ ಮುಟ್ಟಿಸಿದವು. ಭೂಲಕ್ಷಣಗಳು ಮತ್ತು ಹಿಂಸೆಯ ಕುಖ್ಯಾತಿಯ ಕಾರಣ ಈ ಸೀಮೆಗೆ ಕೈಗಾರಿಕೆಗಳು ಕಾಲಿಡಲಿಲ್ಲ. ಚಂಬಲ್ ನದಿಯ ನೀರು ಇಂದಿಗೂ ಸ್ಫಟಿಕ ಶುದ್ಧವಾಗಿಯೇ ಉಳಿದಿದೆ.

ದಟ್ಟದಾರಿದ್ರ್ಯ, ಹೆಪ್ಪುಗಟ್ಟಿರುವ ಜಾತಿಪದ್ಧತಿಯ ಕ್ರೌರ್ಯ ಉತ್ತರಪ್ರದೇಶ-ಮಧ್ಯಪ್ರದೇಶ-ರಾಜಸ್ತಾನದ ಈ ಸಂಗಮ ಸೀಮೆಯ ಬಹುಜನರಾದ ದಲಿತರು ಹಿಂದುಳಿದವರು ಹಾಗೂ ಬುಡಕಟ್ಟು ಜನರನ್ನು ಇಂದಿಗೂ ತುಳಿದಿಟ್ಟಿದೆ. ಉತ್ತರಪ್ರದೇಶ ಮತ್ತು ಮಧ್ಯಪ್ರದೇಶದ ಸೀಮೆಗಳು ಸೇರಿ ಬುಂದೇಲಖಂಡ ಎಂದು ಎರಡು ರಾಜ್ಯಗಳ ಈ ಪ್ರದೇಶವನ್ನು ಕತ್ತಲ ಖಂಡ ಎನ್ನುವುದುಂಟು. ಅನಕ್ಷರತೆ, ಬಂಜರು, ಬಡತನ, ಬರಗಾಲ, ಬವಣೆಗಳೇ ಹಿಂಡಿರುವ ಖಂಡವಿದು. ಉಪ್ಪು-ರೊಟ್ಟಿ, ಹುಲ್ಲುಬೀಜಗಳನ್ನು ಬೀಸಿದ ಹಿಟ್ಟಿನ ರೊಟ್ಟಿಯನ್ನು ತಿಂದು ಜೀವ ಹಿಡಿದು ಸುದ್ದಿಯಾದವರು ಇಲ್ಲಿನ ಜನ. ಬೆಂಬಿಡದ ಬರಗಾಲ ಸಾವಿರಾರು ಸಣ್ಣ ಹಿಡುವಳಿದಾರರ ಪ್ರಾಣಬಲಿ ಪಡೆದ ಪ್ರದೇಶ. ಹಸಿದ ಮಕ್ಕಳ ಸಂಕಟ ನೋಡಲಾಗದೆ ರಕ್ತ ಮಾರಿ ಹೊಟ್ಟೆ ಹೊರೆದ ಪ್ರಕರಣಗಳು ಇಲ್ಲಿಂದ ವರದಿಯಾಗಿರುವುದು ಉಂಟು.

ಸಾಮಾಜಿಕ ಕಳಕಳಿಯ ಹೆಣ್ಣುಮಕ್ಕಳ ಗುಂಪೊಂದು ಇಂತಹ ಬುಂದೇಲಖಂಡದಲ್ಲಿ ಭಿನ್ನ ಬಗೆಯ ಗ್ರಾಮೀಣ ಪತ್ರಿಕೋದ್ಯಮವನ್ನು ನೆಲೆ ನಿಲ್ಲಿಸಿದೆ. ಎಂಟು ಪುಟಗಳ ಈ ವಾರಪತ್ರಿಕೆ ಹೆಸರು “ಖಬರ್ ಲೆಹರಿಯಾ” (ಸುದ್ದಿಯ ಅಲೆಗಳು). ನೂರಕ್ಕೆ ನೂರರಷ್ಟು ಹೆಣ್ಣುಮಕ್ಕಳೇ ಹೊರತರುವ ಏಕೈಕ ಗ್ರಾಮೀಣ ಪತ್ರಿಕೆಯಿದು. ಈ ಎಲ್ಲ ಹೆಣ್ಣುಮಕ್ಕಳೂ ತಳಸಮುದಾಯಗಳವರು. ವಿದ್ಯಮಾನಗಳನ್ನು ಹೆಣ್ಣುನೋಟದಿಂದ ಮತ್ತು ಜಾತ್ಯತೀತ ನೆಲೆಯಿಂದ ವರದಿ ಮಾಡುವುದು ಈ ಪತ್ರಿಕೆಯ ವಿಶೇಷ.

ಅವಧಿ, ಬುಂದೇಲಿ, ಭೋಜ್ಪುರಿ ಹಾಗೂ ಬಜ್ಜಿಕಾ ಎಂಬ ನಾಲ್ಕು ಪ್ರಾದೇಶಿಕ ನುಡಿಗಟ್ಟುಗಳಲ್ಲಿ ಹೊರಬರುವ ಈ ವಾರಪತ್ರಿಕೆಯು ದೇಶವಿದೇಶಗಳ ಮಾಧ್ಯಮಗಳ ಗಮನ ಸೆಳೆದಿದೆ. ಪತ್ರಕರ್ತೆಯರಿಗೆಂದು ಮೀಸಲಾದ ಪ್ರತಿಷ್ಠಿತ ಚಮೇಲಿ ದೇವಿ ಜೈನ್ ಪ್ರಶಸ್ತಿ, ಯುನೆಸ್ಕೋದ ಕಿಂಗ್ ಸೆಜೋಂಗ್ ಸಾಕ್ಷರತೆ ಬಹುಮಾನ, ಲಾಡ್ಲಿ ಮೀಡಿಯಾ ಪ್ರಶಸ್ತಿ, ಟೈಮ್ಸ್ ನೌ ಸುದ್ದಿವಾಹಿನಿಯ ಅಮೇಝಿಂಗ್ ಇಂಡಿಯನ್ ಪ್ರಶಸ್ತಿ, ಕೈಫಿ ಅಜ್ಮಿ ಪ್ರಶಸ್ತಿ, ಬೆಂಗಳೂರಿನ ಸ್ಫೂರ್ತಿಧಾಮ ಟ್ರಸ್ಟ್‌ನ ಬೋಧಿವೃಕ್ಷ ಪ್ರಶಸ್ತಿಗಳು ಈ ಸಾಹಸಕ್ಕೆ ಸಂದಿವೆ.

ಒಂದು ಕಾಲಕ್ಕೆ ಕಂಪ್ಯೂಟರನ್ನು ಮುಟ್ಟುವುದಿರಲಿ, ನೋಡುವುದೂ ದುಸ್ಸಾಧ್ಯವಿದ್ದ ಹಿನ್ನೆಲೆಯಿಂದ ಬಂದ ಬಡ ಯುವತಿಯರ ಆತ್ಮವಿಶ್ವಾಸ ಕುದುರಿದೆ. ಸಮಾಜ, ಸರ್ಕಾರ, ಸರೀಕ ಪತ್ರಕರ್ತರು ಗುರುತಿಸಿ ನಡೆಸಿಕೊಳ್ಳುವ ಪರಿ ಹೊಸ ಹುಮ್ಮಸ್ಸು ನೀಡಿದೆ. ಹೆಸರಿಗಂಟಿಕೊಂಡು ಬಂದ ತಳಸಮುದಾಯದ ಅಡ್ಡಹೆಸರುಗಳನ್ನು ಈ ಯುವತಿಯರು ಕಿತ್ತೆಸೆದಿದ್ದಾರೆ.

ದೊಡ್ಡ ಪತ್ರಿಕೆಗಳು ದೊಡ್ಡ ಪೇಟೆ ಪಟ್ಟಣಗಳ ಸುದ್ದಿ ಪ್ರಕಟಿಸುತ್ತವೆ. ಅವುಗಳ ಸಂಪಾದಕೀಯ ಸಿಬ್ಬಂದಿ ವಿಶ್ವವಿದ್ಯಾಲಯ ಶಿಕ್ಷಣ ಉಳ್ಳವರು, ಇಂಗ್ಲಿಷ್ ಬಲ್ಲವರು. ಬುಂದೇಲಖಂಡದ ಈ ಹಳ್ಳಿಗಾಡಿನ ಜನರ ಪಾಲಿಗೆ ಇಂಗ್ಲಿಷ್ ಮಾತ್ರವಲ್ಲ, ಹಿಂದಿ ಕೂಡ ಕುಲೀನ ಭಾಷೆ. ದಲಿತ ಮಹಿಳೆಯರು ದುಪ್ಪಟ್ಟು ಶೋಷಣೆ ಎದುರಿಸಿದವರು. ಬೇರುಮಟ್ಟದ ಸ್ಥಳೀಯ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲವರು ಎಂಬುದು ’ಲೆಹರಿಯಾ’ ಹಿಂದಿನ ಆಲೋಚನೆ.

ಕ್ಷೇತ್ರಕ್ಕೆ ತೆರಳಿ ಸುದ್ದಿ ಸಂಗ್ರಹಿಸುವವರು, ಬರೆಯುವವರು, ಪರಿಷ್ಕರಿಸಿ ತಲೆಬರೆಹ ನೀಡುವವರು, ಪತ್ರಿಕೆಯ ವಿನ್ಯಾಸ ಮಾಡುವವರು, ಮುದ್ರಣ ಮಾಡಿಸಿ ತರುವವರು, ಹಳ್ಳಿಗಳಿಗೆ ಹಂಚುವವರು ಎಲ್ಲರೂ ಹೆಣ್ಣುಮಕ್ಕಳೇ. ಒಂಟಿಯಾಗಿ ಹಳ್ಳಿ ಹಳ್ಳಿ ಸುತ್ತಿ ಸುದ್ದಿ ಹೆಕ್ಕುತ್ತಾರೆ. ನಕಾಶೆಯಲ್ಲೇ ಇಲ್ಲದ, ನೀರು ದೀಪಗಳಿರದ, ಅಂಚೆಯೂ ತಲುಪದ ಕೊಂಪೆಗಳನ್ನೂ ಬಿಟ್ಟಿಲ್ಲ ಇವರು. ದೊಡ್ಡ ಪತ್ರಿಕೆಗಳ ವರದಿಗಾರರು ಅನುಭವಿಸುವ ಸೌಲಭ್ಯಗಳು ಇವರಿಗಿಲ್ಲ. ಹಸಿವಾದರೆ ಮನೆಯಿಂದ ಒಯ್ದ ಬುತ್ತಿಯೇ ಗತಿ. ಬಸ್ಸು, ಸೈಕಲ್ಲು, ಕಿಲೋಮೀಟರುಗಟ್ಟಲೆ ಕಾಲ್ನಡಿಗೆ ಮಾಮೂಲು. ಪುಂಡು ಪೋಕರಿಗಳನ್ನೂ ಪುರುಷಪ್ರಾಧಾನ್ಯ ವ್ಯವಸ್ಥೆಯ ಕಿರುಕುಳಗಳನ್ನೂ ನಿತ್ಯ ನುಂಗಿ ನಡೆಯುತ್ತಾರೆ.

ಬುಂದೇಲ್ ಖಂಡದ ಚಿತ್ರಕೂಟ, ಫೈಝಾಬಾದ್, ಝಾನ್ಸಿ, ಲಲಿತಪುರ್, ಅಂಬೇಡ್ಕರ್ ನಗರ್, ಬಾಂದಾ ಜಿಲ್ಲೆಗಳಲ್ಲಿ ಲೆಹರಿಯಾ ಹೆಜ್ಜೆ ಗುರುತುಗಳು ಪಡಿಮೂಡಿವೆ. ಆರುನೂರು ಕುಗ್ರಾಮಗಳ ಬದುಕಿನ ಹಾಸು ಹೊಕ್ಕಾಗಿದೆ ಖಬರ್ ಲೆಹರಿಯಾ. ಈ ಪೈಕಿ ಬಹುತೇಕ ಹಳ್ಳಿಗಳು ಮುಖ್ಯವಾಹಿನಿಯ ಸುದ್ದಿಪತ್ರಿಕೆಗಳನ್ನು ಕಂಡಿಲ್ಲ. ಹಳ್ಳಿ ಹಳ್ಳಿಗಳ ಕುಡಿವ ನೀರು, ರಸ್ತೆ, ಶಾಲೆ, ಆಸ್ಪತ್ರೆ, ಮನರೇಗ ಯೋಜನೆಯಲ್ಲಿ ಕೂಲಿ ನಿರಾಕರಿಸಿ ಬಡಪಾಯಿಗಳ ವಂಚಿಸುವ ಪಂಚಾಯತಿ ಪ್ರಧಾನ, ರೇಷನ್ ಕಾರ್ಡ್ ಸಮಸ್ಯೆ, ಕಳವು, ಕೊಲೆ, ದಬ್ಬಾಳಿಕೆ, ಅಧಿಕಾರಿಗಳ ನಿರ್ಲಕ್ಷ್ಯದ ವ್ಯಥೆಯ ಕತೆಗಳ ಕುರಿತು ದೊಡ್ಡ ಪತ್ರಿಕೆಗಳಿಗೆ ರುಚಿಯಿಲ್ಲ.

ಡಿಜಿಟಲ್ ದಾರಿ ಹಿಡಿದ ನಂತರ ಪತ್ರಿಕೆಯನ್ನು ಓದುವ ಹೆಣ್ಣುಮಕ್ಕಳ ಪ್ರಮಾಣ ಭಾರೀ ಜಿಗಿತ ಕಂಡಿದೆ. ಸ್ಮಾರ್ಟ್ ಫೋನ್ ಮತ್ತು ಸೆಲ್ಫಿ ಸ್ಟಿಕ್ ಬಳಸಿ ಫೋಟೋ-ವಿಡಿಯೋ ತೆಗೆದು ವರದಿ ಸಂದರ್ಶನಗಳನ್ನು ವಾಟ್ಸಾಪ್‌ನಲ್ಲಿ ಕಚೇರಿಗೆ ರವಾನಿಸುತ್ತಿದ್ದಾರೆ ವರದಿಗಾರ್ತಿಯರು. ಪತ್ರಿಕೆಯಲ್ಲಿ ಅಚ್ಚಾಗುವ ವರದಿಗಳು ದೃಶ್ಯರೂಪದಲ್ಲಿ ಸಾಮಾಜಿಕ ಅಂತರ್ಜಾಲ ತಾಣಗಳ ಮೂಲಕ ಲಕ್ಷಾಂತರ ಮಂದಿಯನ್ನು ತಲುಪುತ್ತಿವೆ.

ಪತ್ರಿಕೆಯ ಡಿಜಿಟಲ್ ವ್ಯವಹಾರಗಳನ್ನು ಮುದ್ರಣದಿಂದ ಪ್ರತ್ಯೇಕಿಸಿ ಚಂಬಲ್ ಮೀಡಿಯಾ ಎಂಬ ಹೊಸ ಕಂಪನಿಯ ಕೈಗೆ ಒಪ್ಪಿಸಲಾಗಿದೆ. ಗ್ರಾಮೀಣ ಡಿಜಿಟಲ್ ಮಾಧ್ಯಮದ ಹೂರಣವನ್ನು ರೂಪಿಸಿ ಪ್ರಸ್ತುತಪಡಿಸುವುದು ಈ ಕಂಪನಿಯ ಕಾರ್ಯಸೂಚಿ. ಗ್ರಾಮೀಣ ಪ್ರದೇಶಗಳಲ್ಲೂ ಈಗ ಅಂತರ್ಜಾಲ ಸೌಲಭ್ಯ ಧಾರಾಳ. ಆದರೆ ಆ ಜನರಿಗೆ ಗುಣಮಟ್ಟದ ಸ್ವತಂತ್ರ ಪ್ರಗತಿಪರ ಡಿಜಿಟಲ್ ಮೀಡಿಯಾ ಲಭ್ಯವಿಲ್ಲ. ಅವರ ಸುದ್ದಿಯನ್ನು ಅವರದೇ ಭಾಷೆಯಲ್ಲಿ ಹೇಳುವ ಮತ್ತೊಂದು ಪ್ರಯತ್ನ ಈವರೆಗೆ ಆಗಿಲ್ಲ, ಸನಿಹ ಭವಿಷ್ಯದಲ್ಲಿ ನಡೆಯುವುದೂ ಇಲ್ಲ. ದಲಿತ, ಆದಿವಾಸಿ ಹಾಗೂ ಮುಸ್ಲಿಮ್ ಹೆಣ್ಣುಮಕ್ಕಳೇ ಚಂಬಲ್ ಮೀಡಿಯಾದಲ್ಲೂ ಸಕ್ರಿಯರಾಗಿರುತ್ತಾರೆ. ಮುಂಬರುವ ಮೂರು ವರ್ಷಗಳಲ್ಲಿ ಹಿಂದೀ ರಾಜ್ಯಗಳ ಎಂಬತ್ತು ಜಿಲ್ಲೆಗಳಲ್ಲಿ ನೆಲೆಯೂರುವ ಗುರಿಯನ್ನು ಇರಿಸಿಕೊಳ್ಳಲಾಗಿದೆ.

ಚಂಬಲ್ ಹೆಣ್ಣುಮಕ್ಕಳ ಈ ವಿರಳ ಪ್ರಯೋಗ ದೇಶದ ಇತರೆ ಸೀಮೆಗಳಲ್ಲೂ ಕುಡಿಯೊಡೆದು ಹಬ್ಬಬೇಕಿದೆ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...