Homeಕರ್ನಾಟಕಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

- Advertisement -
- Advertisement -

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ಹಲಿಗೆ (ತಮಟೆ) ಬಡೆಯುವ ವಿಚಾರಕ್ಕೆ ದಲಿತರು ಮತ್ತು ಇತರ ಜಾತಿಗಳ ಜನರ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಜೂನ್ 26ರಂದು ದಲಿತರ ಮನೆಗಳಿಗೆ ನುಗ್ಗಿ ಮಹಿಳೆಯರು, ಮಕ್ಕಳು ಸೇರಿದಂತೆ ಸಿಕ್ಕ ಸಿಕ್ಕವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ. ಭಾನುವಾರ (ಜೂ.28) ಬೋಚನಹಳ್ಳಿ ಗ್ರಾಮದ ಮಂಜುಳಾ ಮೈಲಪ್ಪ ಹಿರೇಮನಿ ಎಂಬುವರು ‘ನಮ್ಮವರ ಮೇಲೆ ಹಲ್ಲೆಯಾಗಿದೆ’ ಎಂದು 39 ಜನರ ವಿರುದ್ಧ ದೂರು ದಾಖಲಿಸಿದ್ದು, ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮತ್ತೊಂದೆಡೆ ಗ್ರಾಮದ ಪರಸಪ್ಪ ಹುಲಕೋಟಿ ಎನ್ನುವರು ಕೂಡ ಪ್ರತಿದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರೆ ಮಂಜುಳಾ ಮೈಲಪ್ಪ ಹಿರೇಮನಿ,”ಜೂನ್ 25ರಂದು ಮೊಹರಂ ಮೆರವಣಿಗೆ ವೇಳೆ ನಮ್ಮ ದಲಿತ ಹುಡುಗರು ಹಲಿಗೆ ಬಡಿಯುತ್ತಿದ್ದರು. ಈ ವೇಳೆ ಇತರ ಜಾತಿಯ ಕೆಲವರು ಅವರನ್ನು ಗೇಲಿ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ನಮ್ಮ ಮಾವ ಹೋಗಿದ್ದರು. ಈ ವೇಳೆ ಅವರಿಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಚಪ್ಪಲಿಯಿಂದ ಹೊಡೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ನಮ್ಮ ಮಾವನ ಮಗ ಸ್ಥಳಕ್ಕೆ ಹೋಗಿ ಪ್ರಶ್ನಿಸಿದ್ದಾರೆ. ಆಗ ವಾಗ್ವಾದ ನಡೆದು ನಮ್ಮ ಮಾವ ಮತ್ತು ಅವರ ಮಗನಿಗೆ ಚಪ್ಪಲಿಯಿಂದ ಥಳಿಸಿ, ಜಾತಿ ನಿಂದನೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಮುಂದುವರಿದು, “ಅಂದು ಇತರರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದರು. ಮರುದಿನ ನಮ್ಮ ಮಾವನವರು ಪರಸಪ್ಪ ಅವರ ಬಳಿ ತೆರಳಿ ಹಿಂದಿನ ದಿನ ನಡೆದ ಘಟನೆ ವಿವರಿಸಿದ್ದರು. ಆಗ ಪರಸಪ್ಪ ಮಾವನವರನ್ನು ಗದರಿಸಿ ಕಳಿಸಿದ್ದರು. ನಮ್ಮ ಮಾವನವರು ಏನೂ ಮಾಡಲಾಗದೆ ಸ್ಥಳದಿಂದ ವಾಪಾಸ್ ಬಂದಿದ್ದರು” ಎಂದು ವಿವರಿಸಿದ್ದಾರೆ.

“ಮನೆಗೆ ಬಂದ ಮಾವನವರು ಮತ್ತು ಅವರ ಮಕ್ಕಳು ಅವರವರ ಕೆಲಸ ಕಾರ್ಯಗಳಿಗೆ ತೆರಳಿದ್ದರು. ಈ ವೇಳೆ ಗುಂಪು ಕಟ್ಟಿಕೊಂಡು ಬಂದ ಎರಡ್ಮೂರು ಜಾತಿಯವರು, ನಮ್ಮ ಮನೆಗಳಿಗೆ ನುಗ್ಗಿ ಕೈಗೆ ಸಿಕ್ಕಿದ ವಸ್ತುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಹಿಳೆಯರು ಮಕ್ಕಳು ಎನ್ನದೆ ಎಲ್ಲರ ಮೇಲೆ ಹಲ್ಲೆ ಮಾಡಿದ್ದಾರೆ. ಕೊಡಲಿ ಹಿಡಿದುಕೊಂಡು ಬಂದು ಯಾರನ್ನಾದರೂ ಜೀವ ತೆಗೆಯಲು ಮುಂದಾಗಿದ್ದರು. ದಾಳಿಯ ವಿಡಿಯೋ ಮಾಡುತ್ತಿದ್ದ ನಮ್ಮ ಹುಡುಗರ ಮೊಬೈಲ್ ಫೋನ್‌ ಕಿತ್ತುಕೊಂಡು ಹೋಗಿದ್ದಾರೆ. ಮುಖ್ಯವಾಗಿ, ನಮಗೆ ಜಾತಿ ನಿಂದನೆ ಮಾಡಿದ್ದಾರೆ” ಎಂದು ಮಂಜುಳಾ ಗಂಭೀರ ಆರೋಪ ಮಾಡಿದ್ದಾರೆ.

“ನಮ್ಮ ಕೇರಿಗೆ ನುಗ್ಗಿ ಮನಸೋಇಚ್ಚೆ ಹಲ್ಲೆ ಮಾಡುತ್ತಿದ್ದಾಗ ನಾವು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆವು, ಜೊತೆಗೆ ಆಂಬ್ಯಲೆನ್ಸ್‌ಗೂ ಕರೆ ಮಾಡಿದೆವು. ಆಂಬ್ಯುಲೆನ್ಸ್ ಬಂದು ಗಾಯಗೊಂಡ ನಮ್ಮ ಜನರನ್ನು ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ಮಾಡುತಿತ್ತು. ಆದರೂ, ಆರೋಪಿಗಳು ಹಲ್ಲೆ ನಡೆಸುವುದನ್ನು ಮುಂದುವರಿಸಿದ್ದರು. ಕೊನೆಗೆ ಪೊಲೀಸರು ಬಂದು ನಮಗೆ ರಕ್ಷಣೆ ಕೊಟ್ಟರು” ಎಂದು ತಿಳಿಸಿದ್ದಾರೆ.

“ನಾವು ಭಯದಲ್ಲಿ ಬದುಕುತ್ತಿದ್ದೇವೆ”

ಘಟನೆ ನಂತರ ನಾವು ಭಯದಲ್ಲಿ ಬದುಕುತ್ತಿದ್ದೇವೆ. ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ. ಆದರೂ, ಹಲ್ಲೆ ಮಾಡಿದವರು ದ್ವೇಷ ಇಟ್ಟುಕೊಂಡು ಮತ್ತೆ ಏನಾದರು ಮಾಡಿಯಾರು ಎಂಬ ಭಯ ನಮಗಿದೆ. ನಮ್ಮ ಹುಡುಗರು ಮನೆ ಬಿಟ್ಟು ಎಲ್ಲೂ ಹೊರಗಡೆ ಹೋಗದಂತೆ ಸೂಚಿಸಿದ್ದೇವೆ. ಇದು ಮೊದಲ ಘಟನೆಯಲ್ಲ, ನನಗೆ ಗೊತ್ತಿರುವ ಹಾಗೆ ಕಳೆದ ಹತ್ತು ವರ್ಷದಲ್ಲಿ ಹಲವಾರು ಬಾರಿ ನಮ್ಮ ಸಮುದಾಯದವರ ಮೇಲೆ ಹಲ್ಲೆಯಾಗಿದೆ. ಜಾತಿಯನ್ನೇ ಮುಂದಿಟ್ಟುಕೊಂಡು ಪದೇ ಪದೇ ಹಲ್ಲೆ ಮಾಡುವುದು, ನಿಂದಿಸುವುದು ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು, ಇವುಗಳಿಂದ ಮುಕ್ತಿ ಬೇಕು ಎಂದು ಮಂಜುಳಾ ಅಳಲು ತೋಡಿಕೊಂಡಿದ್ದಾರೆ.

ಸಮುದಾಯಗಳ ನಡುವೆ ಪರಸ್ಪರ ಅನ್ಯೋನ್ಯತೆ ಮೂಡಲಿ- ಕರಿಯಪ್ಪ ಗುಡಿಮನಿ

ದಲಿತ ಸಮುದಾಯದ ಮೇಲೆ ನಡೆದ ದಾಳಿಯನ್ನು ಖಂಡಿಸಿ ದಲಿತ ಮತ್ತು ಇತರ ಜನಪರ ಸಂಘಟನೆಗಳು ಶೀಘ್ರದಲ್ಲೇ ಬೋಚನಹಳ್ಳಿ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳುವ ತೀರ್ಮಾನ ಮಾಡಿದ್ದೇವೆ. ಅದಕ್ಕೂ ಮೊದಲು, ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ತಿಳಿಸಿದ್ದಾರೆ.

ಬೋಚನಹಳ್ಳಿಯಲ್ಲಿ ಎರಡು ತಳ ಸಮುದಾಯಗಳ ನಡುವೆ ಸಂಘರ್ಷ ನಡೆದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಪರಸ್ಪರ ಅನ್ಯೋನ್ಯತೆಯಿಂದ ಇರಬೇಕಾದ ಈ ಸಮುದಾಯಗಳ ಜನರು, ಈ ರೀತಿ ಗಲಾಟೆ ಮಾಡಿಕೊಳ್ಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ನಾವು ಯಾವುದೇ ಸಮುದಾಯವನ್ನು ಗುರಿಯಾಗಿಸುತ್ತಿಲ್ಲ. ನಮ್ಮ ಆಗ್ರಹ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬುವುದು ಮಾತ್ರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಜಾತಿ ದೌರ್ಜನ್ಯಗಳು ನಡೆಯುತ್ತಿವೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಜನ ಸಮುದಾಯಗಳ ನಡುವೆ ಪರಸ್ಪರ ಸೌಹಾರ್ದತೆ, ನಂಬಿಕೆ ಮೂಡಿಸುವ ಕೆಲಸ ಮಾಡಬೇಕು ಎಂದು ಕರಿಯಪ್ಪ ಆಗ್ರಹಿಸಿದ್ದಾರೆ.

ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ದಲಿತರ ಮೇಲಿನ ಹಲ್ಲೆಯನ್ನು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ ವಿದ್ಯಾರ್ಥಿ ಸಂಘಟನೆ, ಮಹಿಳಾ ಮುನ್ನಡೆ ಹಾಗೂ ಪ್ರಗತಿಪರ ಚಿಂತಕರು ತೀವ್ರವಾಗಿ ಖಂಡಿಸಿದ್ದು, ಹೋರಾಟಕ್ಕೆ ಕರೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಾದಿಗ ರಕ್ಷಣಾ ವೇದಿಕೆ, ಮೊಹರಂ ಹಬ್ಬದ ಸಂದರ್ಭದಲ್ಲಿ ಮಾದಿಗ ಸಮುದಾಯದ ಕಾಲೋನಿಗೆ ನುಗ್ಗಿ ಕೆಲ ಕಿಡಿಗೇಡಿಗಳು ದೌರ್ಜನ್ಯ ನಡೆಸಿರುವ ಘಟನೆ ಖಂಡನೀಯವಾಗಿದೆ. ಗ್ರಾಮದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವಂತಹ ಜಾತಿವಾದಿ ಮನೋಭಾವದ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

“ಸಂವಿಧಾನ ನೀಡಿರುವ ಸಮಾನತೆ, ಗೌರವ ಮತ್ತು ಬದುಕುವ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಹಾಗೂ ಆಡಳಿತದ ಜವಾಬ್ದಾರಿಯಾಗಿದೆ. ಯಾವುದೇ ಸಮುದಾಯದ ಮೇಲೆ ಅನ್ಯಾಯ ನಡೆದರೆ ಅದನ್ನು ಸಹಿಸಲಸಾಧ್ಯ. ಬೋಚನಹಳ್ಳಿ ಗ್ರಾಮದ ಮಾದಿಗ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು” ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ.

ಗ್ರಾಮದಲ್ಲಿ ಶಾಶ್ವತ ಶಾಂತಿ, ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮುಂದಿನ ಹೋರಾಟದ ರೂಪರೇಷೆಗಳ ಬಗ್ಗೆ ಸಂಘಟನೆಗಳ ಮುಖಂಡರು ಚರ್ಚಿಸಿದ್ದಾರೆ. ನೊಂದ ಸಮುದಾಯದ ಪರವಾಗಿ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಅವರ ನೇತೃತ್ವದಲ್ಲಿ ಮುಂದಿನ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ. ಗ್ರಾಮದ ನೊಂದ ಮಾದಿಗ ಸಮುದಾಯದ ನೂರಾರು ಜನರು ಈ ಸಂದರ್ಭದಲ್ಲಿ ಭಾಗವಹಿಸಿ ನ್ಯಾಯಕ್ಕಾಗಿ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮುದಕಪ್ಪ ಹೊಸಮನಿ, ಜಿಲ್ಲಾ ಉಪಾಧ್ಯಕ್ಷ ರಾಣದಪ್ಪ, ಮುಖಂಡರಾದ ನಿಂಗಪ್ಪ ಪೂಜಾರಿ, ಜಿಲ್ಲಾ ಖಜಾಂಚಿ ಗವಿಸಿದ್ದಪ್ಪ ಹಲಗಿ, ತಾಲೂಕು ಕಾರ್ಯದರ್ಶಿ ಯಂಕಪ್ಪ ಬಿಸರಳ್ಳಿ, ತಾಲೂಕು ಸಹ ಕಾರ್ಯದರ್ಶಿ ಹೊಸಳ್ಳಿ ನಾಗರಾಜ್, ಮುಖಂಡರಾದ ಕಾರಿಗನೂರು ಓಬಳೇಶ್, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಪರವಾಗಿ ವಕೀಲರಾದ ಯಮನೂರಪ್ಪ ಈಳಿಗನೂರು, ಉಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....