Homeಮುಖಪುಟಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

- Advertisement -
- Advertisement -

ಬೋರ್‌ವೆಲ್ ಕೊರೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ಸವರ್ಣೀಯರ ಕುಟುಂಬವೊಂದು ಹಲ್ಲೆ ನಡೆಸಿರುವ ಪ್ರಕರಣ ಹೊಸ ತಿರುವುದು ಪಡೆದುಕೊಂಡಿದೆ. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ರಕ್ಷಣೆಗೆ ಬರಬೇಕಿದ್ದ ಪೊಲೀಸರು ಆರೋಪಿಗಳನ್ನೇ ರಕ್ಷಿಸುವ ಯತ್ನ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಹನುಮಂತಪ್ಪನ ಇಬ್ಬರು ಮಕ್ಕಳನ್ನೂ ಬಂಧಿಸಿದ್ದಾರೆ. ಜಿಲ್ಲೆಯ ಪ್ರಬಲ ರಾಜಕಾರಣಿಯೊಬ್ಬರು ಆರೋಪಿಗಳ ಬೆಂಬಲಕ್ಕೆ ನಿಂತಿರುವುದೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರದ ದಲಿತ ವ್ಯಕ್ತಿ ಹನುಮಂತಪ್ಪ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ನೀರು ಚನ್ನಾಗಿಯೇ ಸಿಕ್ಕಿತ್ತು. ಇದಾದ ಕೆಲವು ದಿನಗಳ ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವತ್ಥಪ್ಪ ಕೂಡ ಅದೇ ಬೋರ್‌ವೆಲ್‌ಗೆ ಸಮಾನಾಂತರವಾಗಿ ಪಕ್ಕದ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ಆದರೆ ನಿರೀಕ್ಷೆಯಷ್ಟು ನೀರು ಸಿಗಲಿಲ್ಲ. ತನಗೆ ನೀರು ಸಿಗದಿದ್ದುದ್ದಕ್ಕೆ ಹನುಮಂತಪ್ಪನೇ ಕಾರಣ ಎಂದು ಗ್ರಾ.ಪಂ ಅಧ್ಯಕ್ಷ ಅಶ್ವತ್ಥಪ್ಪ ಬಗೆದಿದ್ದಾರೆ.

ಇದನ್ನೇ ನೆಪಮಾಡಿಕೊಂಡು ಸವರ್ಣೀಯರಾದ ಆಶ್ವತ್ಥಪ್ಪ ಮತ್ತು ಆತನ ಸೋದರ ನರಸಿಂಹಮೂರ್ತಿ ಜಮೀನಿನಿಂದ ಮನೆಗೆ ಮರಳುತ್ತಿದ್ದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ದಾಳಿ ನಡೆಸಿದ್ದರು. ನುಮಂತಪ್ಪರ ಕೈ ಮುರಿದು ಹಾಕಿದ್ದರು. ಈ ಕುರಿತು ಹನುಮಂತಪ್ಪ ಪುತ್ರ, ತಮ್ಮ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ದೂರು ನೀಡಿದ್ದರು.

ಮಧುಗಿರಿ ಪೊಲೀಸರು ಆರಂಭದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆ ಹಿಂದೇಟು ಹಾಕಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಯಿಂದ ಒತ್ತಡ ಬಂದ ಮೇಲೆ ಅನಿವಾರ್ಯವಾಗಿ ಸವರ್ಣೀಯರಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿ ಮೇಲೆ ಎಫ್.ಐ.ಆರ್ ದಾಖಲಿಸಲಾಯಿತು. ತದನಂತರ ಹನುಮಂತಪ್ಪ ಮತ್ತು ಅವರ ಪುತ್ರರ ವಿರುದ್ಧ ಕೌಂಟರ್ ಎಫ್ಐಆರ್ ದಾಖಲಿಸಲಾಗಿದೆ!

ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣದಲ್ಲಿ ಕೌಂಟರ್ ಎಫ್ಐಆರ್ ದಾಖಲಿಸಲು ಅವಕಾಶ ಇರಲಿಲ್ಲ. ತುಮಕೂರಿನ ಪ್ರಬಲ ರಾಜಕಾರಣಿ ಕೆ.ಎನ್‌ ರಾಜಣ್ಣನವರು ಪೊಲೀಸರ ಮೇಲೆ ಒತ್ತಡ ಹಾಕಿ ದೌರ್ಜನ್ಯಕ್ಕೆ ಒಳಗಾದವರ ವಿರುದ್ಧವೇ ದೂರು ದಾಖಲಿಸುವಂತೆ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ದಲಿತ ವ್ಯಕ್ತಿ ಹನುಮಂತಪ್ಪ ಅವರ ಪುತ್ರರಾದ ಅಶೋಕ್ ಮತ್ತು ಮಂಜುನಾಥ್ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಕೇಸು ಸೇರಿದಂತೆ ಆರು ಕೇಸುಗಳನ್ನು ಹಾಕಲಾಗಿದೆ. ತಮ್ಮ ತಂದೆಯನ್ನು ಹಲ್ಲೆಕೋರರಿಂದ ಬಿಡಿಸಿಕೊಳ್ಳಲು ಹೋಗಿದ್ದ ಮಂಜುನಾಥ್ ಮತ್ತು ಅಶೋಕ್ ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನಪರ ಚಿಂತಕ, ಮತ್ತು ಹೋರಾಟಗಾರ ಕೆ.ದೊರೈರಾಜ್, “ಅಟ್ರಾಸಿಟಿ ಕೇಸ್‌ನಲ್ಲಿ ಕೌಂಟರ್ ಕೇಸು ಹಾಕಲು ಬರುವುದಿಲ್ಲ. ಆದರೆ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಕೇಸನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೌಂಟರ್ ಕೇಸ್ ದಾಖಲಿಸಿ ದೌರ್ಜನ್ಯಕ್ಕೊಳಗಾದವರನ್ನೇ ಜೈಲಿಗೆ ಕಳಿಸಿದ್ದಾರೆ. ಇದು ಪೊಲೀಸರು ಕಾನೂನಿನ ಮೂಲಕ ದೌರ್ಜನ್ಯ ನಡೆಸುವುದಾಗಿದೆ. ಇಂತಹ ಪ್ರಕರಣಗಳಲ್ಲಿ ಕೌಂಟರ್ ಕೇಸ್ ಹಾಕಲಿರುವ ನಿಯಮಾವಳಿಗಳನ್ನು ಪರಿಶೀಲಿಸುವಂತೆ ಎಸ್.ಸಿ ಎಸ್.ಟಿ ಕಮೀಷನ್ ಮತ್ತು ಮಾನವ ಹಕ್ಕುಗಳ ಆಯೋಗವನ್ನು ಒತ್ತಾಯಿಸುತ್ತೇನೆ” ಎಂದರು.

ಮಧುಗಿರಿಯಲ್ಲಿ ಸಭೆ ಸೇರಿದ ದಲಿತ ಸಂಘಟನೆಗಳ ಮುಖಂಡರು ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹನುಮಂತಪ್ಪಗೆ ನ್ಯಾಯ ದೊರೆಯದ್ದರೆ ಹೋರಾಟ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಪೊಲೀಸರು ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಅಟ್ರಾಸಿಟಿ ಕೇಸನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ. ಇದು ಸರಿಯಲ್ಲ ಎಂದು ದಲಿತ ಮುಖಂಡ ಬಾಲು ದೂರವಾಣಿ ಮೂಲಕ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೋ ವರದಿ ನೋಡಿ. ಕೃಪೆ: ಬೆವರ ಹನಿ ಮೀಡಿಯಾ

ದಲಿತ ಸಂಘಟನೆಗಳ ಕಣ್ಣೊರೆಸುವ ಕಾರಣಕ್ಕೆ ಆರೋಪಿಗಳಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳ ಬೆಂಬಲಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಿಂತಿದ್ದಾರೆ. ಪೊಲೀಸರ ಮೇಲೆ ಕ್ರಮ ಕೈಗೊಳ್ಳದಂತೆ ಒತ್ತಡ ಹಾಕುತ್ತಿದ್ದಾರೆ. ದೌರ್ಜನ್ಯಕ್ಕೊಳಕಾದವರ ಪರ ನಿಲ್ಲಬೇಕಾದ ರಾಜಣ್ಣ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...