Homeಮುಖಪುಟಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

- Advertisement -
- Advertisement -

ಬೋರ್‌ವೆಲ್ ಕೊರೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ಸವರ್ಣೀಯರ ಕುಟುಂಬವೊಂದು ಹಲ್ಲೆ ನಡೆಸಿರುವ ಪ್ರಕರಣ ಹೊಸ ತಿರುವುದು ಪಡೆದುಕೊಂಡಿದೆ. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ರಕ್ಷಣೆಗೆ ಬರಬೇಕಿದ್ದ ಪೊಲೀಸರು ಆರೋಪಿಗಳನ್ನೇ ರಕ್ಷಿಸುವ ಯತ್ನ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಹನುಮಂತಪ್ಪನ ಇಬ್ಬರು ಮಕ್ಕಳನ್ನೂ ಬಂಧಿಸಿದ್ದಾರೆ. ಜಿಲ್ಲೆಯ ಪ್ರಬಲ ರಾಜಕಾರಣಿಯೊಬ್ಬರು ಆರೋಪಿಗಳ ಬೆಂಬಲಕ್ಕೆ ನಿಂತಿರುವುದೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರದ ದಲಿತ ವ್ಯಕ್ತಿ ಹನುಮಂತಪ್ಪ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ನೀರು ಚನ್ನಾಗಿಯೇ ಸಿಕ್ಕಿತ್ತು. ಇದಾದ ಕೆಲವು ದಿನಗಳ ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವತ್ಥಪ್ಪ ಕೂಡ ಅದೇ ಬೋರ್‌ವೆಲ್‌ಗೆ ಸಮಾನಾಂತರವಾಗಿ ಪಕ್ಕದ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ಆದರೆ ನಿರೀಕ್ಷೆಯಷ್ಟು ನೀರು ಸಿಗಲಿಲ್ಲ. ತನಗೆ ನೀರು ಸಿಗದಿದ್ದುದ್ದಕ್ಕೆ ಹನುಮಂತಪ್ಪನೇ ಕಾರಣ ಎಂದು ಗ್ರಾ.ಪಂ ಅಧ್ಯಕ್ಷ ಅಶ್ವತ್ಥಪ್ಪ ಬಗೆದಿದ್ದಾರೆ.

ಇದನ್ನೇ ನೆಪಮಾಡಿಕೊಂಡು ಸವರ್ಣೀಯರಾದ ಆಶ್ವತ್ಥಪ್ಪ ಮತ್ತು ಆತನ ಸೋದರ ನರಸಿಂಹಮೂರ್ತಿ ಜಮೀನಿನಿಂದ ಮನೆಗೆ ಮರಳುತ್ತಿದ್ದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ದಾಳಿ ನಡೆಸಿದ್ದರು. ನುಮಂತಪ್ಪರ ಕೈ ಮುರಿದು ಹಾಕಿದ್ದರು. ಈ ಕುರಿತು ಹನುಮಂತಪ್ಪ ಪುತ್ರ, ತಮ್ಮ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ದೂರು ನೀಡಿದ್ದರು.

ಮಧುಗಿರಿ ಪೊಲೀಸರು ಆರಂಭದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆ ಹಿಂದೇಟು ಹಾಕಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಯಿಂದ ಒತ್ತಡ ಬಂದ ಮೇಲೆ ಅನಿವಾರ್ಯವಾಗಿ ಸವರ್ಣೀಯರಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿ ಮೇಲೆ ಎಫ್.ಐ.ಆರ್ ದಾಖಲಿಸಲಾಯಿತು. ತದನಂತರ ಹನುಮಂತಪ್ಪ ಮತ್ತು ಅವರ ಪುತ್ರರ ವಿರುದ್ಧ ಕೌಂಟರ್ ಎಫ್ಐಆರ್ ದಾಖಲಿಸಲಾಗಿದೆ!

ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣದಲ್ಲಿ ಕೌಂಟರ್ ಎಫ್ಐಆರ್ ದಾಖಲಿಸಲು ಅವಕಾಶ ಇರಲಿಲ್ಲ. ತುಮಕೂರಿನ ಪ್ರಬಲ ರಾಜಕಾರಣಿ ಕೆ.ಎನ್‌ ರಾಜಣ್ಣನವರು ಪೊಲೀಸರ ಮೇಲೆ ಒತ್ತಡ ಹಾಕಿ ದೌರ್ಜನ್ಯಕ್ಕೆ ಒಳಗಾದವರ ವಿರುದ್ಧವೇ ದೂರು ದಾಖಲಿಸುವಂತೆ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ದಲಿತ ವ್ಯಕ್ತಿ ಹನುಮಂತಪ್ಪ ಅವರ ಪುತ್ರರಾದ ಅಶೋಕ್ ಮತ್ತು ಮಂಜುನಾಥ್ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಕೇಸು ಸೇರಿದಂತೆ ಆರು ಕೇಸುಗಳನ್ನು ಹಾಕಲಾಗಿದೆ. ತಮ್ಮ ತಂದೆಯನ್ನು ಹಲ್ಲೆಕೋರರಿಂದ ಬಿಡಿಸಿಕೊಳ್ಳಲು ಹೋಗಿದ್ದ ಮಂಜುನಾಥ್ ಮತ್ತು ಅಶೋಕ್ ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನಪರ ಚಿಂತಕ, ಮತ್ತು ಹೋರಾಟಗಾರ ಕೆ.ದೊರೈರಾಜ್, “ಅಟ್ರಾಸಿಟಿ ಕೇಸ್‌ನಲ್ಲಿ ಕೌಂಟರ್ ಕೇಸು ಹಾಕಲು ಬರುವುದಿಲ್ಲ. ಆದರೆ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಕೇಸನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೌಂಟರ್ ಕೇಸ್ ದಾಖಲಿಸಿ ದೌರ್ಜನ್ಯಕ್ಕೊಳಗಾದವರನ್ನೇ ಜೈಲಿಗೆ ಕಳಿಸಿದ್ದಾರೆ. ಇದು ಪೊಲೀಸರು ಕಾನೂನಿನ ಮೂಲಕ ದೌರ್ಜನ್ಯ ನಡೆಸುವುದಾಗಿದೆ. ಇಂತಹ ಪ್ರಕರಣಗಳಲ್ಲಿ ಕೌಂಟರ್ ಕೇಸ್ ಹಾಕಲಿರುವ ನಿಯಮಾವಳಿಗಳನ್ನು ಪರಿಶೀಲಿಸುವಂತೆ ಎಸ್.ಸಿ ಎಸ್.ಟಿ ಕಮೀಷನ್ ಮತ್ತು ಮಾನವ ಹಕ್ಕುಗಳ ಆಯೋಗವನ್ನು ಒತ್ತಾಯಿಸುತ್ತೇನೆ” ಎಂದರು.

ಮಧುಗಿರಿಯಲ್ಲಿ ಸಭೆ ಸೇರಿದ ದಲಿತ ಸಂಘಟನೆಗಳ ಮುಖಂಡರು ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹನುಮಂತಪ್ಪಗೆ ನ್ಯಾಯ ದೊರೆಯದ್ದರೆ ಹೋರಾಟ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಪೊಲೀಸರು ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಅಟ್ರಾಸಿಟಿ ಕೇಸನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ. ಇದು ಸರಿಯಲ್ಲ ಎಂದು ದಲಿತ ಮುಖಂಡ ಬಾಲು ದೂರವಾಣಿ ಮೂಲಕ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೋ ವರದಿ ನೋಡಿ. ಕೃಪೆ: ಬೆವರ ಹನಿ ಮೀಡಿಯಾ

ದಲಿತ ಸಂಘಟನೆಗಳ ಕಣ್ಣೊರೆಸುವ ಕಾರಣಕ್ಕೆ ಆರೋಪಿಗಳಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳ ಬೆಂಬಲಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಿಂತಿದ್ದಾರೆ. ಪೊಲೀಸರ ಮೇಲೆ ಕ್ರಮ ಕೈಗೊಳ್ಳದಂತೆ ಒತ್ತಡ ಹಾಕುತ್ತಿದ್ದಾರೆ. ದೌರ್ಜನ್ಯಕ್ಕೊಳಕಾದವರ ಪರ ನಿಲ್ಲಬೇಕಾದ ರಾಜಣ್ಣ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಗೆ ಹಾರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...