Homeಮುಖಪುಟಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

- Advertisement -
- Advertisement -

ಬೋರ್‌ವೆಲ್ ಕೊರೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ಸವರ್ಣೀಯರ ಕುಟುಂಬವೊಂದು ಹಲ್ಲೆ ನಡೆಸಿರುವ ಪ್ರಕರಣ ಹೊಸ ತಿರುವುದು ಪಡೆದುಕೊಂಡಿದೆ. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ರಕ್ಷಣೆಗೆ ಬರಬೇಕಿದ್ದ ಪೊಲೀಸರು ಆರೋಪಿಗಳನ್ನೇ ರಕ್ಷಿಸುವ ಯತ್ನ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಹನುಮಂತಪ್ಪನ ಇಬ್ಬರು ಮಕ್ಕಳನ್ನೂ ಬಂಧಿಸಿದ್ದಾರೆ. ಜಿಲ್ಲೆಯ ಪ್ರಬಲ ರಾಜಕಾರಣಿಯೊಬ್ಬರು ಆರೋಪಿಗಳ ಬೆಂಬಲಕ್ಕೆ ನಿಂತಿರುವುದೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರದ ದಲಿತ ವ್ಯಕ್ತಿ ಹನುಮಂತಪ್ಪ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ನೀರು ಚನ್ನಾಗಿಯೇ ಸಿಕ್ಕಿತ್ತು. ಇದಾದ ಕೆಲವು ದಿನಗಳ ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವತ್ಥಪ್ಪ ಕೂಡ ಅದೇ ಬೋರ್‌ವೆಲ್‌ಗೆ ಸಮಾನಾಂತರವಾಗಿ ಪಕ್ಕದ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ಆದರೆ ನಿರೀಕ್ಷೆಯಷ್ಟು ನೀರು ಸಿಗಲಿಲ್ಲ. ತನಗೆ ನೀರು ಸಿಗದಿದ್ದುದ್ದಕ್ಕೆ ಹನುಮಂತಪ್ಪನೇ ಕಾರಣ ಎಂದು ಗ್ರಾ.ಪಂ ಅಧ್ಯಕ್ಷ ಅಶ್ವತ್ಥಪ್ಪ ಬಗೆದಿದ್ದಾರೆ.

ಇದನ್ನೇ ನೆಪಮಾಡಿಕೊಂಡು ಸವರ್ಣೀಯರಾದ ಆಶ್ವತ್ಥಪ್ಪ ಮತ್ತು ಆತನ ಸೋದರ ನರಸಿಂಹಮೂರ್ತಿ ಜಮೀನಿನಿಂದ ಮನೆಗೆ ಮರಳುತ್ತಿದ್ದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ದಾಳಿ ನಡೆಸಿದ್ದರು. ನುಮಂತಪ್ಪರ ಕೈ ಮುರಿದು ಹಾಕಿದ್ದರು. ಈ ಕುರಿತು ಹನುಮಂತಪ್ಪ ಪುತ್ರ, ತಮ್ಮ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ದೂರು ನೀಡಿದ್ದರು.

ಮಧುಗಿರಿ ಪೊಲೀಸರು ಆರಂಭದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆ ಹಿಂದೇಟು ಹಾಕಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಯಿಂದ ಒತ್ತಡ ಬಂದ ಮೇಲೆ ಅನಿವಾರ್ಯವಾಗಿ ಸವರ್ಣೀಯರಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿ ಮೇಲೆ ಎಫ್.ಐ.ಆರ್ ದಾಖಲಿಸಲಾಯಿತು. ತದನಂತರ ಹನುಮಂತಪ್ಪ ಮತ್ತು ಅವರ ಪುತ್ರರ ವಿರುದ್ಧ ಕೌಂಟರ್ ಎಫ್ಐಆರ್ ದಾಖಲಿಸಲಾಗಿದೆ!

ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣದಲ್ಲಿ ಕೌಂಟರ್ ಎಫ್ಐಆರ್ ದಾಖಲಿಸಲು ಅವಕಾಶ ಇರಲಿಲ್ಲ. ತುಮಕೂರಿನ ಪ್ರಬಲ ರಾಜಕಾರಣಿ ಕೆ.ಎನ್‌ ರಾಜಣ್ಣನವರು ಪೊಲೀಸರ ಮೇಲೆ ಒತ್ತಡ ಹಾಕಿ ದೌರ್ಜನ್ಯಕ್ಕೆ ಒಳಗಾದವರ ವಿರುದ್ಧವೇ ದೂರು ದಾಖಲಿಸುವಂತೆ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ದಲಿತ ವ್ಯಕ್ತಿ ಹನುಮಂತಪ್ಪ ಅವರ ಪುತ್ರರಾದ ಅಶೋಕ್ ಮತ್ತು ಮಂಜುನಾಥ್ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಕೇಸು ಸೇರಿದಂತೆ ಆರು ಕೇಸುಗಳನ್ನು ಹಾಕಲಾಗಿದೆ. ತಮ್ಮ ತಂದೆಯನ್ನು ಹಲ್ಲೆಕೋರರಿಂದ ಬಿಡಿಸಿಕೊಳ್ಳಲು ಹೋಗಿದ್ದ ಮಂಜುನಾಥ್ ಮತ್ತು ಅಶೋಕ್ ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನಪರ ಚಿಂತಕ, ಮತ್ತು ಹೋರಾಟಗಾರ ಕೆ.ದೊರೈರಾಜ್, “ಅಟ್ರಾಸಿಟಿ ಕೇಸ್‌ನಲ್ಲಿ ಕೌಂಟರ್ ಕೇಸು ಹಾಕಲು ಬರುವುದಿಲ್ಲ. ಆದರೆ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಕೇಸನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೌಂಟರ್ ಕೇಸ್ ದಾಖಲಿಸಿ ದೌರ್ಜನ್ಯಕ್ಕೊಳಗಾದವರನ್ನೇ ಜೈಲಿಗೆ ಕಳಿಸಿದ್ದಾರೆ. ಇದು ಪೊಲೀಸರು ಕಾನೂನಿನ ಮೂಲಕ ದೌರ್ಜನ್ಯ ನಡೆಸುವುದಾಗಿದೆ. ಇಂತಹ ಪ್ರಕರಣಗಳಲ್ಲಿ ಕೌಂಟರ್ ಕೇಸ್ ಹಾಕಲಿರುವ ನಿಯಮಾವಳಿಗಳನ್ನು ಪರಿಶೀಲಿಸುವಂತೆ ಎಸ್.ಸಿ ಎಸ್.ಟಿ ಕಮೀಷನ್ ಮತ್ತು ಮಾನವ ಹಕ್ಕುಗಳ ಆಯೋಗವನ್ನು ಒತ್ತಾಯಿಸುತ್ತೇನೆ” ಎಂದರು.

ಮಧುಗಿರಿಯಲ್ಲಿ ಸಭೆ ಸೇರಿದ ದಲಿತ ಸಂಘಟನೆಗಳ ಮುಖಂಡರು ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹನುಮಂತಪ್ಪಗೆ ನ್ಯಾಯ ದೊರೆಯದ್ದರೆ ಹೋರಾಟ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಪೊಲೀಸರು ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಅಟ್ರಾಸಿಟಿ ಕೇಸನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ. ಇದು ಸರಿಯಲ್ಲ ಎಂದು ದಲಿತ ಮುಖಂಡ ಬಾಲು ದೂರವಾಣಿ ಮೂಲಕ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೋ ವರದಿ ನೋಡಿ. ಕೃಪೆ: ಬೆವರ ಹನಿ ಮೀಡಿಯಾ

ದಲಿತ ಸಂಘಟನೆಗಳ ಕಣ್ಣೊರೆಸುವ ಕಾರಣಕ್ಕೆ ಆರೋಪಿಗಳಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳ ಬೆಂಬಲಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಿಂತಿದ್ದಾರೆ. ಪೊಲೀಸರ ಮೇಲೆ ಕ್ರಮ ಕೈಗೊಳ್ಳದಂತೆ ಒತ್ತಡ ಹಾಕುತ್ತಿದ್ದಾರೆ. ದೌರ್ಜನ್ಯಕ್ಕೊಳಕಾದವರ ಪರ ನಿಲ್ಲಬೇಕಾದ ರಾಜಣ್ಣ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...