Homeಮುಖಪುಟಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

- Advertisement -
- Advertisement -

ಬೋರ್‌ವೆಲ್ ಕೊರೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ಸವರ್ಣೀಯರ ಕುಟುಂಬವೊಂದು ಹಲ್ಲೆ ನಡೆಸಿರುವ ಪ್ರಕರಣ ಹೊಸ ತಿರುವುದು ಪಡೆದುಕೊಂಡಿದೆ. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ರಕ್ಷಣೆಗೆ ಬರಬೇಕಿದ್ದ ಪೊಲೀಸರು ಆರೋಪಿಗಳನ್ನೇ ರಕ್ಷಿಸುವ ಯತ್ನ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಹನುಮಂತಪ್ಪನ ಇಬ್ಬರು ಮಕ್ಕಳನ್ನೂ ಬಂಧಿಸಿದ್ದಾರೆ. ಜಿಲ್ಲೆಯ ಪ್ರಬಲ ರಾಜಕಾರಣಿಯೊಬ್ಬರು ಆರೋಪಿಗಳ ಬೆಂಬಲಕ್ಕೆ ನಿಂತಿರುವುದೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರದ ದಲಿತ ವ್ಯಕ್ತಿ ಹನುಮಂತಪ್ಪ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ನೀರು ಚನ್ನಾಗಿಯೇ ಸಿಕ್ಕಿತ್ತು. ಇದಾದ ಕೆಲವು ದಿನಗಳ ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವತ್ಥಪ್ಪ ಕೂಡ ಅದೇ ಬೋರ್‌ವೆಲ್‌ಗೆ ಸಮಾನಾಂತರವಾಗಿ ಪಕ್ಕದ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ಆದರೆ ನಿರೀಕ್ಷೆಯಷ್ಟು ನೀರು ಸಿಗಲಿಲ್ಲ. ತನಗೆ ನೀರು ಸಿಗದಿದ್ದುದ್ದಕ್ಕೆ ಹನುಮಂತಪ್ಪನೇ ಕಾರಣ ಎಂದು ಗ್ರಾ.ಪಂ ಅಧ್ಯಕ್ಷ ಅಶ್ವತ್ಥಪ್ಪ ಬಗೆದಿದ್ದಾರೆ.

ಇದನ್ನೇ ನೆಪಮಾಡಿಕೊಂಡು ಸವರ್ಣೀಯರಾದ ಆಶ್ವತ್ಥಪ್ಪ ಮತ್ತು ಆತನ ಸೋದರ ನರಸಿಂಹಮೂರ್ತಿ ಜಮೀನಿನಿಂದ ಮನೆಗೆ ಮರಳುತ್ತಿದ್ದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ದಾಳಿ ನಡೆಸಿದ್ದರು. ನುಮಂತಪ್ಪರ ಕೈ ಮುರಿದು ಹಾಕಿದ್ದರು. ಈ ಕುರಿತು ಹನುಮಂತಪ್ಪ ಪುತ್ರ, ತಮ್ಮ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ದೂರು ನೀಡಿದ್ದರು.

ಮಧುಗಿರಿ ಪೊಲೀಸರು ಆರಂಭದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆ ಹಿಂದೇಟು ಹಾಕಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಯಿಂದ ಒತ್ತಡ ಬಂದ ಮೇಲೆ ಅನಿವಾರ್ಯವಾಗಿ ಸವರ್ಣೀಯರಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿ ಮೇಲೆ ಎಫ್.ಐ.ಆರ್ ದಾಖಲಿಸಲಾಯಿತು. ತದನಂತರ ಹನುಮಂತಪ್ಪ ಮತ್ತು ಅವರ ಪುತ್ರರ ವಿರುದ್ಧ ಕೌಂಟರ್ ಎಫ್ಐಆರ್ ದಾಖಲಿಸಲಾಗಿದೆ!

ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣದಲ್ಲಿ ಕೌಂಟರ್ ಎಫ್ಐಆರ್ ದಾಖಲಿಸಲು ಅವಕಾಶ ಇರಲಿಲ್ಲ. ತುಮಕೂರಿನ ಪ್ರಬಲ ರಾಜಕಾರಣಿ ಕೆ.ಎನ್‌ ರಾಜಣ್ಣನವರು ಪೊಲೀಸರ ಮೇಲೆ ಒತ್ತಡ ಹಾಕಿ ದೌರ್ಜನ್ಯಕ್ಕೆ ಒಳಗಾದವರ ವಿರುದ್ಧವೇ ದೂರು ದಾಖಲಿಸುವಂತೆ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ದಲಿತ ವ್ಯಕ್ತಿ ಹನುಮಂತಪ್ಪ ಅವರ ಪುತ್ರರಾದ ಅಶೋಕ್ ಮತ್ತು ಮಂಜುನಾಥ್ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಕೇಸು ಸೇರಿದಂತೆ ಆರು ಕೇಸುಗಳನ್ನು ಹಾಕಲಾಗಿದೆ. ತಮ್ಮ ತಂದೆಯನ್ನು ಹಲ್ಲೆಕೋರರಿಂದ ಬಿಡಿಸಿಕೊಳ್ಳಲು ಹೋಗಿದ್ದ ಮಂಜುನಾಥ್ ಮತ್ತು ಅಶೋಕ್ ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನಪರ ಚಿಂತಕ, ಮತ್ತು ಹೋರಾಟಗಾರ ಕೆ.ದೊರೈರಾಜ್, “ಅಟ್ರಾಸಿಟಿ ಕೇಸ್‌ನಲ್ಲಿ ಕೌಂಟರ್ ಕೇಸು ಹಾಕಲು ಬರುವುದಿಲ್ಲ. ಆದರೆ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಕೇಸನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೌಂಟರ್ ಕೇಸ್ ದಾಖಲಿಸಿ ದೌರ್ಜನ್ಯಕ್ಕೊಳಗಾದವರನ್ನೇ ಜೈಲಿಗೆ ಕಳಿಸಿದ್ದಾರೆ. ಇದು ಪೊಲೀಸರು ಕಾನೂನಿನ ಮೂಲಕ ದೌರ್ಜನ್ಯ ನಡೆಸುವುದಾಗಿದೆ. ಇಂತಹ ಪ್ರಕರಣಗಳಲ್ಲಿ ಕೌಂಟರ್ ಕೇಸ್ ಹಾಕಲಿರುವ ನಿಯಮಾವಳಿಗಳನ್ನು ಪರಿಶೀಲಿಸುವಂತೆ ಎಸ್.ಸಿ ಎಸ್.ಟಿ ಕಮೀಷನ್ ಮತ್ತು ಮಾನವ ಹಕ್ಕುಗಳ ಆಯೋಗವನ್ನು ಒತ್ತಾಯಿಸುತ್ತೇನೆ” ಎಂದರು.

ಮಧುಗಿರಿಯಲ್ಲಿ ಸಭೆ ಸೇರಿದ ದಲಿತ ಸಂಘಟನೆಗಳ ಮುಖಂಡರು ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹನುಮಂತಪ್ಪಗೆ ನ್ಯಾಯ ದೊರೆಯದ್ದರೆ ಹೋರಾಟ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಪೊಲೀಸರು ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಅಟ್ರಾಸಿಟಿ ಕೇಸನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ. ಇದು ಸರಿಯಲ್ಲ ಎಂದು ದಲಿತ ಮುಖಂಡ ಬಾಲು ದೂರವಾಣಿ ಮೂಲಕ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೋ ವರದಿ ನೋಡಿ. ಕೃಪೆ: ಬೆವರ ಹನಿ ಮೀಡಿಯಾ

ದಲಿತ ಸಂಘಟನೆಗಳ ಕಣ್ಣೊರೆಸುವ ಕಾರಣಕ್ಕೆ ಆರೋಪಿಗಳಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳ ಬೆಂಬಲಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಿಂತಿದ್ದಾರೆ. ಪೊಲೀಸರ ಮೇಲೆ ಕ್ರಮ ಕೈಗೊಳ್ಳದಂತೆ ಒತ್ತಡ ಹಾಕುತ್ತಿದ್ದಾರೆ. ದೌರ್ಜನ್ಯಕ್ಕೊಳಕಾದವರ ಪರ ನಿಲ್ಲಬೇಕಾದ ರಾಜಣ್ಣ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...