Homeಮುಖಪುಟಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

- Advertisement -
- Advertisement -

ಬೋರ್‌ವೆಲ್ ಕೊರೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ಸವರ್ಣೀಯರ ಕುಟುಂಬವೊಂದು ಹಲ್ಲೆ ನಡೆಸಿರುವ ಪ್ರಕರಣ ಹೊಸ ತಿರುವುದು ಪಡೆದುಕೊಂಡಿದೆ. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ರಕ್ಷಣೆಗೆ ಬರಬೇಕಿದ್ದ ಪೊಲೀಸರು ಆರೋಪಿಗಳನ್ನೇ ರಕ್ಷಿಸುವ ಯತ್ನ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಹನುಮಂತಪ್ಪನ ಇಬ್ಬರು ಮಕ್ಕಳನ್ನೂ ಬಂಧಿಸಿದ್ದಾರೆ. ಜಿಲ್ಲೆಯ ಪ್ರಬಲ ರಾಜಕಾರಣಿಯೊಬ್ಬರು ಆರೋಪಿಗಳ ಬೆಂಬಲಕ್ಕೆ ನಿಂತಿರುವುದೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರದ ದಲಿತ ವ್ಯಕ್ತಿ ಹನುಮಂತಪ್ಪ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ನೀರು ಚನ್ನಾಗಿಯೇ ಸಿಕ್ಕಿತ್ತು. ಇದಾದ ಕೆಲವು ದಿನಗಳ ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವತ್ಥಪ್ಪ ಕೂಡ ಅದೇ ಬೋರ್‌ವೆಲ್‌ಗೆ ಸಮಾನಾಂತರವಾಗಿ ಪಕ್ಕದ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ಆದರೆ ನಿರೀಕ್ಷೆಯಷ್ಟು ನೀರು ಸಿಗಲಿಲ್ಲ. ತನಗೆ ನೀರು ಸಿಗದಿದ್ದುದ್ದಕ್ಕೆ ಹನುಮಂತಪ್ಪನೇ ಕಾರಣ ಎಂದು ಗ್ರಾ.ಪಂ ಅಧ್ಯಕ್ಷ ಅಶ್ವತ್ಥಪ್ಪ ಬಗೆದಿದ್ದಾರೆ.

ಇದನ್ನೇ ನೆಪಮಾಡಿಕೊಂಡು ಸವರ್ಣೀಯರಾದ ಆಶ್ವತ್ಥಪ್ಪ ಮತ್ತು ಆತನ ಸೋದರ ನರಸಿಂಹಮೂರ್ತಿ ಜಮೀನಿನಿಂದ ಮನೆಗೆ ಮರಳುತ್ತಿದ್ದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ದಾಳಿ ನಡೆಸಿದ್ದರು. ನುಮಂತಪ್ಪರ ಕೈ ಮುರಿದು ಹಾಕಿದ್ದರು. ಈ ಕುರಿತು ಹನುಮಂತಪ್ಪ ಪುತ್ರ, ತಮ್ಮ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ದೂರು ನೀಡಿದ್ದರು.

ಮಧುಗಿರಿ ಪೊಲೀಸರು ಆರಂಭದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆ ಹಿಂದೇಟು ಹಾಕಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಯಿಂದ ಒತ್ತಡ ಬಂದ ಮೇಲೆ ಅನಿವಾರ್ಯವಾಗಿ ಸವರ್ಣೀಯರಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿ ಮೇಲೆ ಎಫ್.ಐ.ಆರ್ ದಾಖಲಿಸಲಾಯಿತು. ತದನಂತರ ಹನುಮಂತಪ್ಪ ಮತ್ತು ಅವರ ಪುತ್ರರ ವಿರುದ್ಧ ಕೌಂಟರ್ ಎಫ್ಐಆರ್ ದಾಖಲಿಸಲಾಗಿದೆ!

ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣದಲ್ಲಿ ಕೌಂಟರ್ ಎಫ್ಐಆರ್ ದಾಖಲಿಸಲು ಅವಕಾಶ ಇರಲಿಲ್ಲ. ತುಮಕೂರಿನ ಪ್ರಬಲ ರಾಜಕಾರಣಿ ಕೆ.ಎನ್‌ ರಾಜಣ್ಣನವರು ಪೊಲೀಸರ ಮೇಲೆ ಒತ್ತಡ ಹಾಕಿ ದೌರ್ಜನ್ಯಕ್ಕೆ ಒಳಗಾದವರ ವಿರುದ್ಧವೇ ದೂರು ದಾಖಲಿಸುವಂತೆ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ದಲಿತ ವ್ಯಕ್ತಿ ಹನುಮಂತಪ್ಪ ಅವರ ಪುತ್ರರಾದ ಅಶೋಕ್ ಮತ್ತು ಮಂಜುನಾಥ್ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಕೇಸು ಸೇರಿದಂತೆ ಆರು ಕೇಸುಗಳನ್ನು ಹಾಕಲಾಗಿದೆ. ತಮ್ಮ ತಂದೆಯನ್ನು ಹಲ್ಲೆಕೋರರಿಂದ ಬಿಡಿಸಿಕೊಳ್ಳಲು ಹೋಗಿದ್ದ ಮಂಜುನಾಥ್ ಮತ್ತು ಅಶೋಕ್ ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನಪರ ಚಿಂತಕ, ಮತ್ತು ಹೋರಾಟಗಾರ ಕೆ.ದೊರೈರಾಜ್, “ಅಟ್ರಾಸಿಟಿ ಕೇಸ್‌ನಲ್ಲಿ ಕೌಂಟರ್ ಕೇಸು ಹಾಕಲು ಬರುವುದಿಲ್ಲ. ಆದರೆ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಕೇಸನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೌಂಟರ್ ಕೇಸ್ ದಾಖಲಿಸಿ ದೌರ್ಜನ್ಯಕ್ಕೊಳಗಾದವರನ್ನೇ ಜೈಲಿಗೆ ಕಳಿಸಿದ್ದಾರೆ. ಇದು ಪೊಲೀಸರು ಕಾನೂನಿನ ಮೂಲಕ ದೌರ್ಜನ್ಯ ನಡೆಸುವುದಾಗಿದೆ. ಇಂತಹ ಪ್ರಕರಣಗಳಲ್ಲಿ ಕೌಂಟರ್ ಕೇಸ್ ಹಾಕಲಿರುವ ನಿಯಮಾವಳಿಗಳನ್ನು ಪರಿಶೀಲಿಸುವಂತೆ ಎಸ್.ಸಿ ಎಸ್.ಟಿ ಕಮೀಷನ್ ಮತ್ತು ಮಾನವ ಹಕ್ಕುಗಳ ಆಯೋಗವನ್ನು ಒತ್ತಾಯಿಸುತ್ತೇನೆ” ಎಂದರು.

ಮಧುಗಿರಿಯಲ್ಲಿ ಸಭೆ ಸೇರಿದ ದಲಿತ ಸಂಘಟನೆಗಳ ಮುಖಂಡರು ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹನುಮಂತಪ್ಪಗೆ ನ್ಯಾಯ ದೊರೆಯದ್ದರೆ ಹೋರಾಟ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಪೊಲೀಸರು ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಅಟ್ರಾಸಿಟಿ ಕೇಸನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ. ಇದು ಸರಿಯಲ್ಲ ಎಂದು ದಲಿತ ಮುಖಂಡ ಬಾಲು ದೂರವಾಣಿ ಮೂಲಕ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೋ ವರದಿ ನೋಡಿ. ಕೃಪೆ: ಬೆವರ ಹನಿ ಮೀಡಿಯಾ

ದಲಿತ ಸಂಘಟನೆಗಳ ಕಣ್ಣೊರೆಸುವ ಕಾರಣಕ್ಕೆ ಆರೋಪಿಗಳಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳ ಬೆಂಬಲಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಿಂತಿದ್ದಾರೆ. ಪೊಲೀಸರ ಮೇಲೆ ಕ್ರಮ ಕೈಗೊಳ್ಳದಂತೆ ಒತ್ತಡ ಹಾಕುತ್ತಿದ್ದಾರೆ. ದೌರ್ಜನ್ಯಕ್ಕೊಳಕಾದವರ ಪರ ನಿಲ್ಲಬೇಕಾದ ರಾಜಣ್ಣ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...