Homeಮುಖಪುಟಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

ಬೋರ್‌ವೆಲ್ ಕೊರೆಸಿದ್ದಕ್ಕೆ ದಲಿತನ ಮೇಲೆ ಹಲ್ಲೆ: ಆರೋಪಿಗಳ ಬೆಂಬಲಕ್ಕೆ ನಿಂತ ರಾಜಕಾರಣಿ?

- Advertisement -
- Advertisement -

ಬೋರ್‌ವೆಲ್ ಕೊರೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ತಿಪ್ಪಾಪುರ ಗ್ರಾಮದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ಸವರ್ಣೀಯರ ಕುಟುಂಬವೊಂದು ಹಲ್ಲೆ ನಡೆಸಿರುವ ಪ್ರಕರಣ ಹೊಸ ತಿರುವುದು ಪಡೆದುಕೊಂಡಿದೆ. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ರಕ್ಷಣೆಗೆ ಬರಬೇಕಿದ್ದ ಪೊಲೀಸರು ಆರೋಪಿಗಳನ್ನೇ ರಕ್ಷಿಸುವ ಯತ್ನ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದ ಹನುಮಂತಪ್ಪನ ಇಬ್ಬರು ಮಕ್ಕಳನ್ನೂ ಬಂಧಿಸಿದ್ದಾರೆ. ಜಿಲ್ಲೆಯ ಪ್ರಬಲ ರಾಜಕಾರಣಿಯೊಬ್ಬರು ಆರೋಪಿಗಳ ಬೆಂಬಲಕ್ಕೆ ನಿಂತಿರುವುದೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರದ ದಲಿತ ವ್ಯಕ್ತಿ ಹನುಮಂತಪ್ಪ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ನೀರು ಚನ್ನಾಗಿಯೇ ಸಿಕ್ಕಿತ್ತು. ಇದಾದ ಕೆಲವು ದಿನಗಳ ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶ್ವತ್ಥಪ್ಪ ಕೂಡ ಅದೇ ಬೋರ್‌ವೆಲ್‌ಗೆ ಸಮಾನಾಂತರವಾಗಿ ಪಕ್ಕದ ತನ್ನ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿದರು. ಆದರೆ ನಿರೀಕ್ಷೆಯಷ್ಟು ನೀರು ಸಿಗಲಿಲ್ಲ. ತನಗೆ ನೀರು ಸಿಗದಿದ್ದುದ್ದಕ್ಕೆ ಹನುಮಂತಪ್ಪನೇ ಕಾರಣ ಎಂದು ಗ್ರಾ.ಪಂ ಅಧ್ಯಕ್ಷ ಅಶ್ವತ್ಥಪ್ಪ ಬಗೆದಿದ್ದಾರೆ.

ಇದನ್ನೇ ನೆಪಮಾಡಿಕೊಂಡು ಸವರ್ಣೀಯರಾದ ಆಶ್ವತ್ಥಪ್ಪ ಮತ್ತು ಆತನ ಸೋದರ ನರಸಿಂಹಮೂರ್ತಿ ಜಮೀನಿನಿಂದ ಮನೆಗೆ ಮರಳುತ್ತಿದ್ದ ದಲಿತ ವ್ಯಕ್ತಿ ಹನುಮಂತಪ್ಪ ಮೇಲೆ ದಾಳಿ ನಡೆಸಿದ್ದರು. ನುಮಂತಪ್ಪರ ಕೈ ಮುರಿದು ಹಾಕಿದ್ದರು. ಈ ಕುರಿತು ಹನುಮಂತಪ್ಪ ಪುತ್ರ, ತಮ್ಮ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ದೂರು ನೀಡಿದ್ದರು.

ಮಧುಗಿರಿ ಪೊಲೀಸರು ಆರಂಭದಲ್ಲಿ ದಲಿತ ದೌರ್ಜನ್ಯ ತಡೆ ಕಾಯ್ದೆ ಹಿಂದೇಟು ಹಾಕಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಯಿಂದ ಒತ್ತಡ ಬಂದ ಮೇಲೆ ಅನಿವಾರ್ಯವಾಗಿ ಸವರ್ಣೀಯರಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿ ಮೇಲೆ ಎಫ್.ಐ.ಆರ್ ದಾಖಲಿಸಲಾಯಿತು. ತದನಂತರ ಹನುಮಂತಪ್ಪ ಮತ್ತು ಅವರ ಪುತ್ರರ ವಿರುದ್ಧ ಕೌಂಟರ್ ಎಫ್ಐಆರ್ ದಾಖಲಿಸಲಾಗಿದೆ!

ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣದಲ್ಲಿ ಕೌಂಟರ್ ಎಫ್ಐಆರ್ ದಾಖಲಿಸಲು ಅವಕಾಶ ಇರಲಿಲ್ಲ. ತುಮಕೂರಿನ ಪ್ರಬಲ ರಾಜಕಾರಣಿ ಕೆ.ಎನ್‌ ರಾಜಣ್ಣನವರು ಪೊಲೀಸರ ಮೇಲೆ ಒತ್ತಡ ಹಾಕಿ ದೌರ್ಜನ್ಯಕ್ಕೆ ಒಳಗಾದವರ ವಿರುದ್ಧವೇ ದೂರು ದಾಖಲಿಸುವಂತೆ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಆರೋಪಿಸಿವೆ.

ದಲಿತ ವ್ಯಕ್ತಿ ಹನುಮಂತಪ್ಪ ಅವರ ಪುತ್ರರಾದ ಅಶೋಕ್ ಮತ್ತು ಮಂಜುನಾಥ್ ವಿರುದ್ಧ ಮಹಿಳೆಯ ಮೇಲೆ ಅತ್ಯಾಚಾರ ಯತ್ನ ಕೇಸು ಸೇರಿದಂತೆ ಆರು ಕೇಸುಗಳನ್ನು ಹಾಕಲಾಗಿದೆ. ತಮ್ಮ ತಂದೆಯನ್ನು ಹಲ್ಲೆಕೋರರಿಂದ ಬಿಡಿಸಿಕೊಳ್ಳಲು ಹೋಗಿದ್ದ ಮಂಜುನಾಥ್ ಮತ್ತು ಅಶೋಕ್ ನ್ಯಾಯಾಂಗ ಬಂಧನದಲ್ಲಿರಬೇಕಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಜನಪರ ಚಿಂತಕ, ಮತ್ತು ಹೋರಾಟಗಾರ ಕೆ.ದೊರೈರಾಜ್, “ಅಟ್ರಾಸಿಟಿ ಕೇಸ್‌ನಲ್ಲಿ ಕೌಂಟರ್ ಕೇಸು ಹಾಕಲು ಬರುವುದಿಲ್ಲ. ಆದರೆ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಕೇಸನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೌಂಟರ್ ಕೇಸ್ ದಾಖಲಿಸಿ ದೌರ್ಜನ್ಯಕ್ಕೊಳಗಾದವರನ್ನೇ ಜೈಲಿಗೆ ಕಳಿಸಿದ್ದಾರೆ. ಇದು ಪೊಲೀಸರು ಕಾನೂನಿನ ಮೂಲಕ ದೌರ್ಜನ್ಯ ನಡೆಸುವುದಾಗಿದೆ. ಇಂತಹ ಪ್ರಕರಣಗಳಲ್ಲಿ ಕೌಂಟರ್ ಕೇಸ್ ಹಾಕಲಿರುವ ನಿಯಮಾವಳಿಗಳನ್ನು ಪರಿಶೀಲಿಸುವಂತೆ ಎಸ್.ಸಿ ಎಸ್.ಟಿ ಕಮೀಷನ್ ಮತ್ತು ಮಾನವ ಹಕ್ಕುಗಳ ಆಯೋಗವನ್ನು ಒತ್ತಾಯಿಸುತ್ತೇನೆ” ಎಂದರು.

ಮಧುಗಿರಿಯಲ್ಲಿ ಸಭೆ ಸೇರಿದ ದಲಿತ ಸಂಘಟನೆಗಳ ಮುಖಂಡರು ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹನುಮಂತಪ್ಪಗೆ ನ್ಯಾಯ ದೊರೆಯದ್ದರೆ ಹೋರಾಟ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಪೊಲೀಸರು ಕಾಣದ ಕೈಗಳ ಒತ್ತಡಕ್ಕೆ ಒಳಗಾಗಿ ಅಟ್ರಾಸಿಟಿ ಕೇಸನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ. ಇದು ಸರಿಯಲ್ಲ ಎಂದು ದಲಿತ ಮುಖಂಡ ಬಾಲು ದೂರವಾಣಿ ಮೂಲಕ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ವಿಡಿಯೋ ವರದಿ ನೋಡಿ. ಕೃಪೆ: ಬೆವರ ಹನಿ ಮೀಡಿಯಾ

ದಲಿತ ಸಂಘಟನೆಗಳ ಕಣ್ಣೊರೆಸುವ ಕಾರಣಕ್ಕೆ ಆರೋಪಿಗಳಾದ ಅಶ್ವತ್ಥಪ್ಪ ಮತ್ತು ನರಸಿಂಹಮೂರ್ತಿಯನ್ನು ಬಂಧಿಸಲಾಗಿದೆ. ಆರೋಪಿಗಳ ಬೆಂಬಲಕ್ಕೆ ಮಾಜಿ ಶಾಸಕ ಕೆ.ಎನ್.ರಾಜಣ್ಣ ನಿಂತಿದ್ದಾರೆ. ಪೊಲೀಸರ ಮೇಲೆ ಕ್ರಮ ಕೈಗೊಳ್ಳದಂತೆ ಒತ್ತಡ ಹಾಕುತ್ತಿದ್ದಾರೆ. ದೌರ್ಜನ್ಯಕ್ಕೊಳಕಾದವರ ಪರ ನಿಲ್ಲಬೇಕಾದ ರಾಜಣ್ಣ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.


ಇದನ್ನೂ ಓದಿ: ಕೊಳವೆ ಬಾವಿ ತೋಡಿಸಿದ್ದಕ್ಕೆ ದಲಿತ ವ್ಯಕ್ತಿಯ ಕೈ ಕಾಲು ಮುರಿದ ಗ್ರಾ.ಪಂ ಅಧ್ಯಕ್ಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...