Homeಮುಖಪುಟನೀರಿನ ಬಕೆಟ್‌ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಥಳಿತ

ನೀರಿನ ಬಕೆಟ್‌ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಥಳಿತ

- Advertisement -
- Advertisement -

ರಾಜಸ್ಥಾನದಲ್ಲಿ ಅಲ್ವಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೈಪಂಪ್ ಬಳಿ ಇರಿಸಲಾಗಿದ್ದ ಕುಡಿಯುವ ನೀರಿನ ಬಕೆಟ್‌ನ್ನು ಮುಟ್ಟಿದ್ದಕ್ಕಾಗಿ 8 ವರ್ಷದ ದಲಿತ ಬಾಲಕನಿಗೆ ಥಳಿಸಿರುವ ಅಮಾನವೀಯ ಘಟನೆ ನಡೆದಿದ್ದು, ಅಸ್ಪೃಶ್ಯತೆ, ಜಾತಿ ಆಧಾರಿತ ದೌರ್ಜನ್ಯ ನಮ್ಮ ಸಮಾಜದಲ್ಲಿ ಎಷ್ಟರವರೆಗೆ ಬೇರೂರಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

4ನೇ ತರಗತಿಯಲ್ಲಿ ಕಲಿಯುತ್ತಿದ್ದ ಚಿರಾಗ್ ಎಂಬ ಬಾಲಕ ಬಾಯಾರಿಕೆಯಿಂದ ಶಾಲಾ ಆವರಣದಲ್ಲಿದ್ದ ಕೈಪಂಪಿನ ಬಳಿ ಹೋಗಿದ್ದಾನೆ. ಈ ವೇಳೆ ಆರೋಪಿ ರತಿರಾಮ್ ಠಾಕೂರ್ ಎಂಬಾತ ತನ್ನ ಬಕೆಟ್‌ನಲ್ಲಿ ನೀರು ತುಂಬಿಸಿಕೊಳ್ಳುತ್ತಿದ್ದ ಎನ್ನಲಾಗಿದೆ.

ಈ ವಿಷಯದ ಬಗ್ಗೆ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಗ್ರಾಮದ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿರುವ ಬಾಲಕ ಶಾಲಾ ಆವರಣದಲ್ಲಿರುವ ಕೈಪಂಪ್‌ಗೆ ನೀರು ಕುಡಿಯಲು ಹೋಗಿದ್ದ. ಈ ವೇಳೆ ಬಕೆಟ್‌ಗೆ ನೀರು ತುಂಬಿಸುತ್ತಿದ್ದ ಸವರ್ಣೀಯ ವ್ಯಕ್ತಿಯೊಬ್ಬ ಬಾಲಕ ಬಕೆಟ್‌ ಮುಟ್ಟಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಆತನ ಕಿರುಚಾಟವನ್ನು ಕೇಳಿ ಶಾಲೆಯ ಬಳಿ ಹೋಗುತ್ತಿದ್ದ ನನ್ನ ಸಂಬಂಧಿಕರು ಸ್ಥಳಕ್ಕೆ ಹೋಗಿ ನೋಡಿದಾಗ ನನ್ನ ಮಗ ಅಳುತ್ತಿದ್ದ. ಬಳಿಕ ಅವರು ಘಟನೆಯ ಬಗ್ಗೆ ನನಗೆ ಹೇಳಿದ್ದಾರೆ ಮತ್ತು ನಾವು ಅಪರಾಧಿಯ ಮನೆಗೆ ಹೋದೆವು. ಆತನಲ್ಲಿ ಘಟನೆ ಬಗ್ಗೆ ವಿಚಾರಿಸಿದಾಗ ಆತ ಕ್ಷಮೆ ಕೇಳಲು ನಿರಾಕರಿಸಿದ್ದಾನೆ ಮತ್ತು ಕುಟುಂಬದ ವಿರುದ್ಧ ಜಾತಿ ನಿಂದನೆಯನ್ನು ಮಾಡಿದ್ದಾನೆ. ನನ್ನನ್ನು ನಿಮಗೆ ಏನು ಮಾಡಲು ಕೂಡ ಸಾಧ್ಯವಿಲ್ಲ ಎಂದು ಹೇಳಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಬಳಿಕ ನನ್ನ ಮಗ ಮತ್ತೆ ಶಾಲೆಗೆ ಹೋಗಲು ಭಯಪಡುತ್ತಾನೆ. ಈ ದೂರನ್ನು ಹಿಂತೆಗೆದುಕೊಳ್ಳುವಂತೆ ಅವರು ನನ್ನನ್ನು ಕೇಳಿದ್ದಾರೆ ಮತ್ತು ಆ ವ್ಯಕ್ತಿ ಮತ್ತೆ ತನಗೆ ಹೊಡೆಯುತ್ತಾನೆ ಎಂಬ ಭಯದಿಂದ ಬಾಲಕ ಶಾಲೆಗೆ ಮರಳಲು ಸಿದ್ಧವಾಗಿಲ್ಲ. ನನಗೆ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥನಿಗೆ ಶಿಕ್ಷೆಯಾಗಬೇಕು ಎಂದು ನಾನು ಬಯಸುತ್ತೇನೆ ಎಂದು ಬಾಲಕನ ತಂದೆ ಹೇಳಿದ್ದಾರೆ.

ಈ ಕುರಿತು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಸವಾಯಿ ಸಿಂಗ್ ತಿಳಿಸಿದ್ದಾರೆ. ನಾವು ಆರೋಪಿಯನ್ನು ವಿಚಾರಣೆ ನಡೆಸಿದ್ದೇವೆ. ಅವರು ತಪ್ಪಿತಸ್ಥರೆಂದು ಕಂಡುಬಂದರೆ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಬಾಲಕ ಸುರಕ್ಷಿತವಾಗಿ ಶಾಲೆಗೆ ಹೋಗುತ್ತಿದ್ದಾನೆ ಮತ್ತು ಇನ್ನು ಮುಂದೆ ಅವನಿಗೆ ಯಾವುದೇ ತೊಂದರೆಯಾಗುವುದಿಲ್ಲ. ನಾವು ಈ ಬಗ್ಗೆ ಬಾಲಕನಿಗೆ ಮತ್ತು ಆತನ ಕುಟುಂಬಕ್ಕೆ ಭರವಸೆ ನೀಡಿದ್ದೇವೆ ಎಂದು ಇನ್ಸ್‌ಪೆಕ್ಟರ್ ಹೇಳಿದ್ದಾರೆ.

ಇದನ್ನು ಓದಿ: ಟಿಎಂಸಿ ಇಂಡಿಯಾ ಬಣದ ಭಾಗವಾಗಿದೆ; ಮುಂದೆಯೂ ಇರುತ್ತದೆ: ಡೆರೆಕ್ ಒ’ಬ್ರಿಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...