Homeಮುಖಪುಟನೀರಿನ ಬಕೆಟ್‌ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಥಳಿತ

ನೀರಿನ ಬಕೆಟ್‌ ಮುಟ್ಟಿದ್ದಕ್ಕೆ ದಲಿತ ಬಾಲಕನಿಗೆ ಥಳಿತ

- Advertisement -
- Advertisement -

ರಾಜಸ್ಥಾನದಲ್ಲಿ ಅಲ್ವಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಕೈಪಂಪ್ ಬಳಿ ಇರಿಸಲಾಗಿದ್ದ ಕುಡಿಯುವ ನೀರಿನ ಬಕೆಟ್‌ನ್ನು ಮುಟ್ಟಿದ್ದಕ್ಕಾಗಿ 8 ವರ್ಷದ ದಲಿತ ಬಾಲಕನಿಗೆ ಥಳಿಸಿರುವ ಅಮಾನವೀಯ ಘಟನೆ ನಡೆದಿದ್ದು, ಅಸ್ಪೃಶ್ಯತೆ, ಜಾತಿ ಆಧಾರಿತ ದೌರ್ಜನ್ಯ ನಮ್ಮ ಸಮಾಜದಲ್ಲಿ ಎಷ್ಟರವರೆಗೆ ಬೇರೂರಿದೆ ಎನ್ನುವುದನ್ನು ಬಹಿರಂಗಪಡಿಸುತ್ತದೆ.

4ನೇ ತರಗತಿಯಲ್ಲಿ ಕಲಿಯುತ್ತಿದ್ದ ಚಿರಾಗ್ ಎಂಬ ಬಾಲಕ ಬಾಯಾರಿಕೆಯಿಂದ ಶಾಲಾ ಆವರಣದಲ್ಲಿದ್ದ ಕೈಪಂಪಿನ ಬಳಿ ಹೋಗಿದ್ದಾನೆ. ಈ ವೇಳೆ ಆರೋಪಿ ರತಿರಾಮ್ ಠಾಕೂರ್ ಎಂಬಾತ ತನ್ನ ಬಕೆಟ್‌ನಲ್ಲಿ ನೀರು ತುಂಬಿಸಿಕೊಳ್ಳುತ್ತಿದ್ದ ಎನ್ನಲಾಗಿದೆ.

ಈ ವಿಷಯದ ಬಗ್ಗೆ ಬಾಲಕನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಗ್ರಾಮದ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿರುವ ಬಾಲಕ ಶಾಲಾ ಆವರಣದಲ್ಲಿರುವ ಕೈಪಂಪ್‌ಗೆ ನೀರು ಕುಡಿಯಲು ಹೋಗಿದ್ದ. ಈ ವೇಳೆ ಬಕೆಟ್‌ಗೆ ನೀರು ತುಂಬಿಸುತ್ತಿದ್ದ ಸವರ್ಣೀಯ ವ್ಯಕ್ತಿಯೊಬ್ಬ ಬಾಲಕ ಬಕೆಟ್‌ ಮುಟ್ಟಿದ್ದಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಆತನ ಕಿರುಚಾಟವನ್ನು ಕೇಳಿ ಶಾಲೆಯ ಬಳಿ ಹೋಗುತ್ತಿದ್ದ ನನ್ನ ಸಂಬಂಧಿಕರು ಸ್ಥಳಕ್ಕೆ ಹೋಗಿ ನೋಡಿದಾಗ ನನ್ನ ಮಗ ಅಳುತ್ತಿದ್ದ. ಬಳಿಕ ಅವರು ಘಟನೆಯ ಬಗ್ಗೆ ನನಗೆ ಹೇಳಿದ್ದಾರೆ ಮತ್ತು ನಾವು ಅಪರಾಧಿಯ ಮನೆಗೆ ಹೋದೆವು. ಆತನಲ್ಲಿ ಘಟನೆ ಬಗ್ಗೆ ವಿಚಾರಿಸಿದಾಗ ಆತ ಕ್ಷಮೆ ಕೇಳಲು ನಿರಾಕರಿಸಿದ್ದಾನೆ ಮತ್ತು ಕುಟುಂಬದ ವಿರುದ್ಧ ಜಾತಿ ನಿಂದನೆಯನ್ನು ಮಾಡಿದ್ದಾನೆ. ನನ್ನನ್ನು ನಿಮಗೆ ಏನು ಮಾಡಲು ಕೂಡ ಸಾಧ್ಯವಿಲ್ಲ ಎಂದು ಹೇಳಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಬಳಿಕ ನನ್ನ ಮಗ ಮತ್ತೆ ಶಾಲೆಗೆ ಹೋಗಲು ಭಯಪಡುತ್ತಾನೆ. ಈ ದೂರನ್ನು ಹಿಂತೆಗೆದುಕೊಳ್ಳುವಂತೆ ಅವರು ನನ್ನನ್ನು ಕೇಳಿದ್ದಾರೆ ಮತ್ತು ಆ ವ್ಯಕ್ತಿ ಮತ್ತೆ ತನಗೆ ಹೊಡೆಯುತ್ತಾನೆ ಎಂಬ ಭಯದಿಂದ ಬಾಲಕ ಶಾಲೆಗೆ ಮರಳಲು ಸಿದ್ಧವಾಗಿಲ್ಲ. ನನಗೆ ನ್ಯಾಯ ಸಿಗಬೇಕು ಮತ್ತು ತಪ್ಪಿತಸ್ಥನಿಗೆ ಶಿಕ್ಷೆಯಾಗಬೇಕು ಎಂದು ನಾನು ಬಯಸುತ್ತೇನೆ ಎಂದು ಬಾಲಕನ ತಂದೆ ಹೇಳಿದ್ದಾರೆ.

ಈ ಕುರಿತು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಸವಾಯಿ ಸಿಂಗ್ ತಿಳಿಸಿದ್ದಾರೆ. ನಾವು ಆರೋಪಿಯನ್ನು ವಿಚಾರಣೆ ನಡೆಸಿದ್ದೇವೆ. ಅವರು ತಪ್ಪಿತಸ್ಥರೆಂದು ಕಂಡುಬಂದರೆ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಬಾಲಕ ಸುರಕ್ಷಿತವಾಗಿ ಶಾಲೆಗೆ ಹೋಗುತ್ತಿದ್ದಾನೆ ಮತ್ತು ಇನ್ನು ಮುಂದೆ ಅವನಿಗೆ ಯಾವುದೇ ತೊಂದರೆಯಾಗುವುದಿಲ್ಲ. ನಾವು ಈ ಬಗ್ಗೆ ಬಾಲಕನಿಗೆ ಮತ್ತು ಆತನ ಕುಟುಂಬಕ್ಕೆ ಭರವಸೆ ನೀಡಿದ್ದೇವೆ ಎಂದು ಇನ್ಸ್‌ಪೆಕ್ಟರ್ ಹೇಳಿದ್ದಾರೆ.

ಇದನ್ನು ಓದಿ: ಟಿಎಂಸಿ ಇಂಡಿಯಾ ಬಣದ ಭಾಗವಾಗಿದೆ; ಮುಂದೆಯೂ ಇರುತ್ತದೆ: ಡೆರೆಕ್ ಒ’ಬ್ರಿಯಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...