ದಲಿತ ಬಾಲಕ ಶಾಲಾ ತರಗತಿ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಜಸ್ಥಾನ ಜೈಪುರದ ಬೆಹ್ರೋರ್ ಜಿಲ್ಲೆಯಲ್ಲಿ ನಡೆದಿದೆ.
ಪ್ರಾಗ್ಪುರ ಪ್ರದೇಶದ ಜವಾಹರ್ ನವೋದಯ ಶಾಲೆಯ 10ನೇ ತರಗತಿಯಲ್ಲಿ ಓದುತ್ತಿದ್ದ ದಲಿತ ಬಾಲಕನೊಬ್ಬ ತನ್ನ ತರಗತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಪೊಲೀಸರ ಪ್ರಕಾರ, ಘಟನೆ ಬುಧವಾರ ಸಂಭವಿಸಿದೆ ಮತ್ತು ಬಾಲಕನ ಕುಟುಂಬವು ಬಾಲಕನ ದೇಹವನ್ನು ಸ್ವೀಕರಿಸಲು ನಿರಾಕರಿಸಿದೆ.
ಬಾಲಕನ ಕುಟುಂಬವು ಇಬ್ಬರು ಶಿಕ್ಷಕರನ್ನು ಬಂಧನಕ್ಕೆ ಆಗ್ರಹಿಸಿ ಪ್ತತಿಭಟನೆ ನಡೆಸಿದೆ. ಶಿಕ್ಷಕರು ಬಾಲಕನಿಗೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ ಎಂದು ಕುಟುಂಬ ಆರೋಪಿಸಿದೆ.
ಕೊಟ್ಪುಟಾಲಿ-ಬೆಹ್ರೋರ್ನ ಪೊಲೀಸ್ ವರಿಷ್ಠಾಧಿಕಾರಿ ರಂಜಿತಾ ಶರ್ಮಾ ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ್ದು,ಇಬ್ಬರು ಶಿಕ್ಷಕರು ಬಾಲಕನಿಗೆ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ. ಕುಟುಂಬಸ್ಥರು ಧರಣಿ ನಡೆಸುತ್ತಿರುವುದರಿಂದ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಲಿಲ್ಲ. ಅವರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಆರೋಪಿ ಶಿಕ್ಷಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ಸೇರಿದಂತೆ ಹಲವು ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೆ ಯಾರ ಬಂಧನವೂ ಆಗಿಲ್ಲ ಎಂದು ವರದಿ ತಿಳಿಸಿದೆ.
ಇದನ್ನು ಓದಿ: ಇಶಾ ಫೌಂಡೇಶನ್ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್