Homeಕರ್ನಾಟಕ70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ - ಡಾ. ಜಿ. ಪರಮೇಶ್ವರ್

70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ – ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

- Advertisement -
- Advertisement -

ಸ್ವಾತಂತ್ರ್ಯ ಬಂದು 70 ವರ್ಷಗಳ ಬಳಿಕವಾದರೂ ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗುವಂತೆ ಆಯಿತು. ಅಧಿಕಾರ ಹಂಚಿಕೆಕೊಂಡು ಸಮಾನತೆ ಕಾಣಬೇಕು ಎಂಬ ಮನಸ್ಥಿತಿ ಬಾರದೆ ಇರುವುದು ನೋವಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಪುತ್ರ ಪಾವಗಡ ಶ್ರೀರಾಮ್ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲ ಕಾಲ ಅಲ್ಲಿ ಸೇರಿದ್ದವರೊಂದಿಗೆ ಮಾತುಕತೆ ನಡೆಸಿದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಹೋರಾಟ ನನ್ನ ಸ್ವಂತಕ್ಕೆ ಮಾಡುತ್ತಿಲ್ಲ. ಬಾಲ್ಯದಿಂದಲೂ ನಾನು ಸಮಾಜದಲ್ಲಿ ಬದಲಾವಣೆಯ ಉದ್ದೇಶಕ್ಕಾಗಿ ಶ್ರಮಿಸುತ್ತಿದ್ದೇನೆ. ಸಮಾಜದಲ್ಲಿ ಜಾತಿಪದ್ದತಿ ಇದ್ದು ಇದು ಸಮಾಜಕ್ಕೆ ಅಂಟಿದ ರೋಗ. ಜಾತಿ ಪದ್ದತಿ ಮತ್ತು ಶೋಷಣೆ ವಿರುದ್ಧ ಹೋರಾಡುತ್ತಾ ಬಂದಿದ್ದೇನೆ. ದಲಿತರು ಸುಖವಾಗಿ ಅಂದರೆ ನಮ್ಮದಿಯಿಂದ ಬದುಕು ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಬೇಕು. ಆದರೆ ಅಂತಹ ಪರಿಸ್ಥಿತಿ ಇಂದಿಗೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಾವುದೇ ಚುನಾವಣೆಗಳು ಇಲ್ಲ. ಕಾಂಗ್ರೆಸ್ ಅಧಿಕಾರದಲ್ಲೂ ಇಲ್ಲ. ಆದರೆ ಡಾ.ಜಿ.ಪರಮೇಶ್ವರ್ ದಲಿತ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗಿದ್ದು ಕಾಕತಾಳೀಯ ಎಂದು ಹೇಳಿರುವುದು ಮತ್ತೊಮ್ಮೆ ದಲಿತ ಮುಖ್ಯಮಂತ್ರಿಯ ವಿಚಾರವನ್ನು ಹರಿಯಬಿಟ್ಟಂತೆ ಆಗಿದೆ. ಪಾವಗಡ ಶ್ರೀರಾಂ ದಲಿತ ಮುಖ್ಯಮಂತ್ರಿಯಾಗಬೇಕು ಎಂದು ಹೋರಾಟ ಮಾಡಿದವರಲ್ಲಿ ಒಬ್ಬರು ಎಂದು ಪರಮೇಶ್ವರ್ ನೆನಪಿಸಿದರು.

ಸೂಲಗಿತ್ತಿ ನರಸಮ್ಮ ಶಾಲೆಗೆ ಹೋಗಲಿಲ್ಲ. ಅಕ್ಷರ ಕಲಿಯಲಿಲ್ಲ. ಆದರೂ ಸಾವಿರಾರು ಹೆರಿಗೆಗಳನ್ನು ಮಾಡಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆ ಅವಿಸ್ಮರಣೀಯ. ವೈದ್ಯರೇ ಇಲ್ಲದ ಕಾಲದಲ್ಲಿ ಬರಿಗೈಯಲ್ಲಿ ಹೆರಿಗೆ ಮಾಡಿಸುವುದು ಅಂದರೆ ಕಷ್ಟದ ಕೆಲಸ. ಅಂಥಾ ಸಂದರ್ಭದಲ್ಲಿ ಹೆರಿಗೆ ಮಾಡಿಸಿ ಹೆಣ್ಣು ಮಕ್ಕಳ ಬಾಳಿನಲ್ಲಿ ನಗುವನ್ನು ಕಂಡವರು ನರಸಮ್ಮ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರಮೇಶ್ವರ ಅವರು ಉಪ ಮುಖ್ಯಮಂತ್ರಿ ಆಗಿದ್ದೇ ತಪ್ಪಾಗಿದೆ. ಯಾಕಂದ್ರೆ ಅವರು ಬ್ರಾಹ್ಮಣರ ಗುಲಾಮರಾಗಿ ಉಪಮುಖ್ಯಮಂತ್ರಿ ಆಗಿದ್ದಾಗಿ ವಿಧಾನ ಸೌಧ ದಲ್ಲಿ ಪೂಜೆ ಬ್ರಾಹ್ಮಣರ ನ್ನು ಕರೆಯಿಸಿ ಪೂಜೆ ಮಾಡಿ. ಬಾಬಾಸಾಹೆಬರಿಗೆ ಅಪಮಾನ್ ಮಾಡಿದ್ರು. ಬಾಬಾಸಾಹೆಬರು ತೋರಿಸಿದ್ದು ಭೌದ್ಧ ಧರ್ಮದ ದಾರಿ. ಕೊನೇಗೆ ಸರ್ಕಾರ ಬಿದ್ದಿದ್ದೆ ಒಳ್ಳೆದಾಯ್ತು. ನಮಗೆ ಬ್ರಾಹ್ಮಣರ ಗುಲಾಮರು ಮಂತ್ರಿಗಳು ಬೆಡಾ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...