Homeಕರ್ನಾಟಕ70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ - ಡಾ. ಜಿ. ಪರಮೇಶ್ವರ್

70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ – ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

- Advertisement -
- Advertisement -

ಸ್ವಾತಂತ್ರ್ಯ ಬಂದು 70 ವರ್ಷಗಳ ಬಳಿಕವಾದರೂ ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗುವಂತೆ ಆಯಿತು. ಅಧಿಕಾರ ಹಂಚಿಕೆಕೊಂಡು ಸಮಾನತೆ ಕಾಣಬೇಕು ಎಂಬ ಮನಸ್ಥಿತಿ ಬಾರದೆ ಇರುವುದು ನೋವಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಪುತ್ರ ಪಾವಗಡ ಶ್ರೀರಾಮ್ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲ ಕಾಲ ಅಲ್ಲಿ ಸೇರಿದ್ದವರೊಂದಿಗೆ ಮಾತುಕತೆ ನಡೆಸಿದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಹೋರಾಟ ನನ್ನ ಸ್ವಂತಕ್ಕೆ ಮಾಡುತ್ತಿಲ್ಲ. ಬಾಲ್ಯದಿಂದಲೂ ನಾನು ಸಮಾಜದಲ್ಲಿ ಬದಲಾವಣೆಯ ಉದ್ದೇಶಕ್ಕಾಗಿ ಶ್ರಮಿಸುತ್ತಿದ್ದೇನೆ. ಸಮಾಜದಲ್ಲಿ ಜಾತಿಪದ್ದತಿ ಇದ್ದು ಇದು ಸಮಾಜಕ್ಕೆ ಅಂಟಿದ ರೋಗ. ಜಾತಿ ಪದ್ದತಿ ಮತ್ತು ಶೋಷಣೆ ವಿರುದ್ಧ ಹೋರಾಡುತ್ತಾ ಬಂದಿದ್ದೇನೆ. ದಲಿತರು ಸುಖವಾಗಿ ಅಂದರೆ ನಮ್ಮದಿಯಿಂದ ಬದುಕು ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಬೇಕು. ಆದರೆ ಅಂತಹ ಪರಿಸ್ಥಿತಿ ಇಂದಿಗೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಾವುದೇ ಚುನಾವಣೆಗಳು ಇಲ್ಲ. ಕಾಂಗ್ರೆಸ್ ಅಧಿಕಾರದಲ್ಲೂ ಇಲ್ಲ. ಆದರೆ ಡಾ.ಜಿ.ಪರಮೇಶ್ವರ್ ದಲಿತ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗಿದ್ದು ಕಾಕತಾಳೀಯ ಎಂದು ಹೇಳಿರುವುದು ಮತ್ತೊಮ್ಮೆ ದಲಿತ ಮುಖ್ಯಮಂತ್ರಿಯ ವಿಚಾರವನ್ನು ಹರಿಯಬಿಟ್ಟಂತೆ ಆಗಿದೆ. ಪಾವಗಡ ಶ್ರೀರಾಂ ದಲಿತ ಮುಖ್ಯಮಂತ್ರಿಯಾಗಬೇಕು ಎಂದು ಹೋರಾಟ ಮಾಡಿದವರಲ್ಲಿ ಒಬ್ಬರು ಎಂದು ಪರಮೇಶ್ವರ್ ನೆನಪಿಸಿದರು.

ಸೂಲಗಿತ್ತಿ ನರಸಮ್ಮ ಶಾಲೆಗೆ ಹೋಗಲಿಲ್ಲ. ಅಕ್ಷರ ಕಲಿಯಲಿಲ್ಲ. ಆದರೂ ಸಾವಿರಾರು ಹೆರಿಗೆಗಳನ್ನು ಮಾಡಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆ ಅವಿಸ್ಮರಣೀಯ. ವೈದ್ಯರೇ ಇಲ್ಲದ ಕಾಲದಲ್ಲಿ ಬರಿಗೈಯಲ್ಲಿ ಹೆರಿಗೆ ಮಾಡಿಸುವುದು ಅಂದರೆ ಕಷ್ಟದ ಕೆಲಸ. ಅಂಥಾ ಸಂದರ್ಭದಲ್ಲಿ ಹೆರಿಗೆ ಮಾಡಿಸಿ ಹೆಣ್ಣು ಮಕ್ಕಳ ಬಾಳಿನಲ್ಲಿ ನಗುವನ್ನು ಕಂಡವರು ನರಸಮ್ಮ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರಮೇಶ್ವರ ಅವರು ಉಪ ಮುಖ್ಯಮಂತ್ರಿ ಆಗಿದ್ದೇ ತಪ್ಪಾಗಿದೆ. ಯಾಕಂದ್ರೆ ಅವರು ಬ್ರಾಹ್ಮಣರ ಗುಲಾಮರಾಗಿ ಉಪಮುಖ್ಯಮಂತ್ರಿ ಆಗಿದ್ದಾಗಿ ವಿಧಾನ ಸೌಧ ದಲ್ಲಿ ಪೂಜೆ ಬ್ರಾಹ್ಮಣರ ನ್ನು ಕರೆಯಿಸಿ ಪೂಜೆ ಮಾಡಿ. ಬಾಬಾಸಾಹೆಬರಿಗೆ ಅಪಮಾನ್ ಮಾಡಿದ್ರು. ಬಾಬಾಸಾಹೆಬರು ತೋರಿಸಿದ್ದು ಭೌದ್ಧ ಧರ್ಮದ ದಾರಿ. ಕೊನೇಗೆ ಸರ್ಕಾರ ಬಿದ್ದಿದ್ದೆ ಒಳ್ಳೆದಾಯ್ತು. ನಮಗೆ ಬ್ರಾಹ್ಮಣರ ಗುಲಾಮರು ಮಂತ್ರಿಗಳು ಬೆಡಾ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...