Homeಕರ್ನಾಟಕ70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ - ಡಾ. ಜಿ. ಪರಮೇಶ್ವರ್

70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ – ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

- Advertisement -
- Advertisement -

ಸ್ವಾತಂತ್ರ್ಯ ಬಂದು 70 ವರ್ಷಗಳ ಬಳಿಕವಾದರೂ ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗುವಂತೆ ಆಯಿತು. ಅಧಿಕಾರ ಹಂಚಿಕೆಕೊಂಡು ಸಮಾನತೆ ಕಾಣಬೇಕು ಎಂಬ ಮನಸ್ಥಿತಿ ಬಾರದೆ ಇರುವುದು ನೋವಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಪುತ್ರ ಪಾವಗಡ ಶ್ರೀರಾಮ್ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲ ಕಾಲ ಅಲ್ಲಿ ಸೇರಿದ್ದವರೊಂದಿಗೆ ಮಾತುಕತೆ ನಡೆಸಿದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಹೋರಾಟ ನನ್ನ ಸ್ವಂತಕ್ಕೆ ಮಾಡುತ್ತಿಲ್ಲ. ಬಾಲ್ಯದಿಂದಲೂ ನಾನು ಸಮಾಜದಲ್ಲಿ ಬದಲಾವಣೆಯ ಉದ್ದೇಶಕ್ಕಾಗಿ ಶ್ರಮಿಸುತ್ತಿದ್ದೇನೆ. ಸಮಾಜದಲ್ಲಿ ಜಾತಿಪದ್ದತಿ ಇದ್ದು ಇದು ಸಮಾಜಕ್ಕೆ ಅಂಟಿದ ರೋಗ. ಜಾತಿ ಪದ್ದತಿ ಮತ್ತು ಶೋಷಣೆ ವಿರುದ್ಧ ಹೋರಾಡುತ್ತಾ ಬಂದಿದ್ದೇನೆ. ದಲಿತರು ಸುಖವಾಗಿ ಅಂದರೆ ನಮ್ಮದಿಯಿಂದ ಬದುಕು ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಬೇಕು. ಆದರೆ ಅಂತಹ ಪರಿಸ್ಥಿತಿ ಇಂದಿಗೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಾವುದೇ ಚುನಾವಣೆಗಳು ಇಲ್ಲ. ಕಾಂಗ್ರೆಸ್ ಅಧಿಕಾರದಲ್ಲೂ ಇಲ್ಲ. ಆದರೆ ಡಾ.ಜಿ.ಪರಮೇಶ್ವರ್ ದಲಿತ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗಿದ್ದು ಕಾಕತಾಳೀಯ ಎಂದು ಹೇಳಿರುವುದು ಮತ್ತೊಮ್ಮೆ ದಲಿತ ಮುಖ್ಯಮಂತ್ರಿಯ ವಿಚಾರವನ್ನು ಹರಿಯಬಿಟ್ಟಂತೆ ಆಗಿದೆ. ಪಾವಗಡ ಶ್ರೀರಾಂ ದಲಿತ ಮುಖ್ಯಮಂತ್ರಿಯಾಗಬೇಕು ಎಂದು ಹೋರಾಟ ಮಾಡಿದವರಲ್ಲಿ ಒಬ್ಬರು ಎಂದು ಪರಮೇಶ್ವರ್ ನೆನಪಿಸಿದರು.

ಸೂಲಗಿತ್ತಿ ನರಸಮ್ಮ ಶಾಲೆಗೆ ಹೋಗಲಿಲ್ಲ. ಅಕ್ಷರ ಕಲಿಯಲಿಲ್ಲ. ಆದರೂ ಸಾವಿರಾರು ಹೆರಿಗೆಗಳನ್ನು ಮಾಡಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆ ಅವಿಸ್ಮರಣೀಯ. ವೈದ್ಯರೇ ಇಲ್ಲದ ಕಾಲದಲ್ಲಿ ಬರಿಗೈಯಲ್ಲಿ ಹೆರಿಗೆ ಮಾಡಿಸುವುದು ಅಂದರೆ ಕಷ್ಟದ ಕೆಲಸ. ಅಂಥಾ ಸಂದರ್ಭದಲ್ಲಿ ಹೆರಿಗೆ ಮಾಡಿಸಿ ಹೆಣ್ಣು ಮಕ್ಕಳ ಬಾಳಿನಲ್ಲಿ ನಗುವನ್ನು ಕಂಡವರು ನರಸಮ್ಮ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರಮೇಶ್ವರ ಅವರು ಉಪ ಮುಖ್ಯಮಂತ್ರಿ ಆಗಿದ್ದೇ ತಪ್ಪಾಗಿದೆ. ಯಾಕಂದ್ರೆ ಅವರು ಬ್ರಾಹ್ಮಣರ ಗುಲಾಮರಾಗಿ ಉಪಮುಖ್ಯಮಂತ್ರಿ ಆಗಿದ್ದಾಗಿ ವಿಧಾನ ಸೌಧ ದಲ್ಲಿ ಪೂಜೆ ಬ್ರಾಹ್ಮಣರ ನ್ನು ಕರೆಯಿಸಿ ಪೂಜೆ ಮಾಡಿ. ಬಾಬಾಸಾಹೆಬರಿಗೆ ಅಪಮಾನ್ ಮಾಡಿದ್ರು. ಬಾಬಾಸಾಹೆಬರು ತೋರಿಸಿದ್ದು ಭೌದ್ಧ ಧರ್ಮದ ದಾರಿ. ಕೊನೇಗೆ ಸರ್ಕಾರ ಬಿದ್ದಿದ್ದೆ ಒಳ್ಳೆದಾಯ್ತು. ನಮಗೆ ಬ್ರಾಹ್ಮಣರ ಗುಲಾಮರು ಮಂತ್ರಿಗಳು ಬೆಡಾ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...