Homeಕರ್ನಾಟಕ"ದಲಿತ ಮುಖ್ಯಮಂತ್ರಿ" ಅರ್ಹರು ಯಾರಿಲ್ಲಿ?

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

- Advertisement -
- Advertisement -

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರಾಜಕೀಯ ವಲಯಗಳಲ್ಲಿ ಕೇಳಿಬರುತ್ತಿದೆ.

ಮುಖ್ಯಮಂತ್ರಿ ಹುದ್ದೆಯ ಕುರಿತು 2023ರಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಾಗಲೇ ಗೊಂದಲ ಹಾಗೂ ಪೈಪೋಟಿ ಶುರುವಾಗಿತ್ತು. ಅಂದೇ ಕಾಂಗ್ರೆಸ್‌ ಹೈಕಮಾಂಡ್‌ ಅಂದು ಉದ್ಬವಿಸಿದ್ದ ಗೊಂದಲಕ್ಕೆ ಪರಿಹಾರವೊಂದನ್ನು ಕಂಡುಕೊಂಡಿತ್ತು.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ತಮ್ಮ ತಮ್ಮ ಆಪ್ತ ವಲಯದಲ್ಲಿ “ಒಪ್ಪಂದ”ವೆಂದು ಮಾಹಿತಿ ರವಾನಿಸಿದ್ದರು. ಕಳೆದ 3 ವರ್ಷಗಳಲ್ಲಿ ನಿರಂತರವಾಗಿ ಮುಖ್ಯಮಂತ್ರಿ ಬದಲಾವಣೆಯ ಸುತ್ತ ಹಲವು ಪರ-ವಿರೋಧ ಹೇಳಿಕೆಗಳು ಕೇಳಿಬರುತ್ತಿದ್ದವು.

ಈಗ ಎಲ್ಲವೂ ಬಹಿರಂಗಗೊಂಡಿದೆ; ಹಿಂದೆ ಆದ ಒಪ್ಪಂದದಂತೆ ಮುಖ್ಯಮಂತ್ರಿ ಬದಲಾವಣೆಯೂ ನಡೆಯುತ್ತಿದೆ. ಇದೇ ಸಮಯದಲ್ಲಿ ಬಹುಕಾಲದಿಂದ ಕೇಳಿಬರುತ್ತಿದ್ದ ದಲಿತ ಮುಖ್ಯಮಂತ್ರಿ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. “ದಲಿತ ಮುಖ್ಯಮಂತ್ರಿ” ಈ ಸಮಯದಲ್ಲಿ ಸಾದ್ಯವಿಲ್ಲ ಎಂದೂ ಆ ರೀತಿಯ ಒತ್ತಾಯ ಮಾಡುತ್ತಿರುವವರಿಗೂ ತಿಳಿದಿದೆ.

ಕಳೆದ ಒಂದು ದಶಕದ ಹಿಂದೆ ಇದ್ದಂತೆ ದಲಿತ ಮುಖ್ಯಮಂತ್ರಿ ಕೂಗಿಗೆ ಅಷ್ಟು ಗಟ್ಟಿತನವಿಲ್ಲ ಎಂದು ಎಲ್ಲರಿಗೂ, ಅಷ್ಟೆ ಏಕೆ ಸ್ವತಃ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿರುವ ಪರಿಶಿಷ್ಟ ಜಾತಿಗಳ ರಾಜಕಾರಣಿಗಳಿಗೂ ತಿಳಿದಿದೆ. ಇದಕ್ಕೆ ಕಾರಣ ‘ದಲಿತ’ ಎಂದು ಹೇಳಿಕೊಳ್ಳುವ ಅದೇ ರಾಜಕಾರಣಗಳೇ ಆಗಿದ್ದಾರೆ.

ದಲಿತ ಎಂಬ ‘ಪ್ಯೂರ್‌’ ಸಮಾನತೆ ಸಾರುವ ಪದವನ್ನು ಇಂದು ಎಷ್ಟೆಲ್ಲಾ ನಗೆಪಾಟಲು ಮಾಡಿದ್ದಾರೆಂದರೆ, ಯಾರೊಬ್ಬರಿಗೂ ದಲಿತ ಮುಖ್ಯಮಂತ್ರಿ ಮಾಡಿ ಎಂದು ಬಹಿರಂಗವಾಗಿ ಹೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂಬುದು ಪ್ರಸ್ತುತ ನಡೆಯುತ್ತಿರುವ ಸನ್ನಿವೇಶವನ್ನು ಗಮನಿಸಿದರೆ ತಿಳಿಯುತ್ತದೆ.

ಬಿಜೆಪಿಯ ಕೋಮು ರಾಜಕಾರಣಕ್ಕೆ, ವೈದಿಕ ಪ್ರತಿಪಾದಿತ ಮನುಶಾಸ್ತ್ರಕ್ಕೆ ಟಕ್ಕರ್‌ ಕೊಟ್ಟಂತ ದಲಿತ ರಾಜಕಾರಣ ಇಂದು ಮುಸುಕಾಗುತ್ತಿದೆ. ಅಷ್ಟೆ ಅಲ್ಲ, ದಲಿತ ಎಂಬ ಪದವನ್ನು ಹೀನಾಮಾನವಾಗಿ ತಮಗೆ ಬೇಕಾದಂತೆ ಬಳಸಿಕೊಳ್ಳುವ ಮೂಲಕ ಅದಕ್ಕೆ ಇದ್ದ ಸಾರ್ವತ್ರಿಕ ಮಾನ್ಯತೆ, ಗೌರವವನ್ನು ಹಾಳುಗೆಡವಿದ್ದಾರೆ.

ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆದ ಪರಿಶಿಷ್ಟರ ಒಳಮೀಸಲಾತಿ ವಿಷಯದಲ್ಲಿ ಹೊಲೆಯ-ಮಾದಿಗ ರಾಜಕಾರಣಿಗಳು ನಡೆದುಕೊಂಡ ರೀತಿ ನಿಜಕ್ಕೂ ಬಾಬಾ ಸಾಹೇಬರ ಆಶಯಗಳಿಗೆ ಕೊಳ್ಳಿ ಇಟ್ಟಂತೆಯೇ ಆಗಿದೆ.

ಒಳಮೀಸಲಾತಿ ವಿಷಯದಲ್ಲಿ ಸಿದ್ದರಾಮಯ್ಯರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡು, ಬೆದರಿಕೆಗಳನ್ನು ಹಾಕುವ ಮೂಲಕ ಏನೆಲ್ಲಾ ಪ್ರಯತ್ನ ಮಾಡಲಾಯಿತು ಎಂಬುದು ಗುಪ್ತವಾಗಿಯೇನೂ ಉಳಿದುಕೊಂಡಿಲ್ಲ. ಇದರ ನಡುವೆ ಅಲೆಮಾರಿ ಸಮುದಾಯಗಳ ದನಿ ಮಾತ್ರ ಯಾರಿಗೂ ಕೇಳಿಸಲೇ ಇಲ್ಲ.

ಇನ್ನೊಂದೆಡೆ ಕೋಮು ರಾಜಕಾರಣಕ್ಕೆ, ಭಾರತದ ಜಾತಿಗ್ರಸ್ತ ಸಮಾಜಕ್ಕೆ ಸರಿಯಾದ ಹೊಡೆತ ಕೊಟ್ಟದ್ದು ಮಾತ್ರ ದಲಿತ ಸಮಗ್ರ ರಾಜಕಾರಣ. ಇದನ್ನು ಸಹಿಸದ ಕೋಮುವಾದಿ ಶಕ್ತಿಗಳು ನಿರಂತರವಾಗಿ ಈ “ದಲಿತ” ಎಂಬ ಬಹುದೊಡ್ಡ ಅಸ್ಮಿತೆಯನ್ನೇ ಒಡೆಯಲು ಹಿಂಬಾಗಿಲಿನಿಂದ ಏನೆಲ್ಲಾ ಪ್ರಯತ್ನ ಮಾಡಲು ಸಾಧ್ಯವೋ ಅದನ್ನೆಲ್ಲಾ ಇಂದು ಮಾಡಿಯಾಗಿದೆ.

ಇದಕ್ಕೆ ಪುಷ್ಟಿ ಕೊಡುವಂತೆ ದಲಿತ ಎಂಬ ಹೆಸರಿನಲ್ಲಿ ಇಷ್ಟು ದಿನಗಳ ಕಾಲ ಜನರನ್ನು ಸಂಘಟಿಸಿದ್ದ ‘ದೊಡ್ಡ ದೊಡ್ಡ’ ನೇತಾರರು ಒಳಮೀಸಲಾತಿಯಂತಹ ಬಹಳ ಸಂದಿಗ್ದ ಪರಿಸ್ಥಿತಿಯಲ್ಲಿ ಸಾಪೇಕ್ಷ ತಟಸ್ಥರಾಗಿ ಉಳಿದುಕೊಂಡಿದ್ದರಿಂದ ಹಲವು ಪ್ರಶ್ನೆಗಳಿಗೆ ಆಸ್ಪದ ನೀಡಿದರು.

ದಲಿತ ಎಂಬ ಪದವನ್ನು ಸಾಮಾಜಿಕ, ಸಾಂಸ್ಕೃತಿಕ ರಾಜಕಾರಣದಲ್ಲಿ ಎಷ್ಟು ಗಟ್ಟಿಗೊಳಿಸುತ್ತೇವೆಯೋ ಅಷ್ಟು ಚುನಾವಣಾ ರಾಜಕಾರಣದಲ್ಲಿ ದಲಿತ ಎಂಬ ಪದಕ್ಕೆ, ಅದರ ಕೂಗಿಗೆ ಗಟ್ಟಿತನ ಬರುತ್ತದೆ. ಆದರೆ ಈಗ ಪ್ರಸ್ತುತ ಸನ್ನಿವೇಶದಲ್ಲಿ ಇರುವ ಪರಿಶಿಷ್ಟ ಜಾತಿಗಳ ರಾಜಕಾರಣಿಗಳು ತಮ್ಮ ಉಪಜಾತಿಗಳ ಹೆಸರಿನಲ್ಲೋ ಅಥವಾ ತಾನೆಷ್ಟು ಕಾಂಗ್ರೆಸ್ಸಿಗ ಎಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನೋ, ಉಪಮುಖ್ಯಮಂತ್ರಿ ಹುದ್ದೆಯನ್ನೋ ಪಡೆಯಬಹುದು. ಈಗ ಪ್ರಸ್ತುತ ಇರುವ ರಾಜಕಾರಣಿಗಳಲ್ಲಿ ದಲಿತ ಎಂದು ಕ್ಲೇಮ್‌ ಮಾಡಿಕೊಳ್ಳುವಷ್ಟು, ದಲಿತ ಎಂಬ ಪದಕ್ಕೆ ನಿಜಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ ಯಾರೊಬ್ಬರೂ ಇಲ್ಲ. ಮುಂದೊಂದು ದಿನ ದಲಿತತ್ವವನ್ನು ನಿಜಕ್ಕೂ ಮೈಗೂಡಿಸಿಕೊಂಡಿರುವವರು, ನಿಜವಾದ ಸಾಮಾಜಿಕ ನ್ಯಾಯದ ಪ್ರತಿಪಾದಕರು ಬಂದಾಗ ದಲಿತ ಮುಖ್ಯಮಂತ್ರಿ ಮುಂತಾದವು ಸಾಧ್ಯವಾಗಬಹುದೇನೋ…

ಒಟ್ಟಾರೆ ದಲಿತ ಮುಖ್ಯಮಂತ್ರಿ ಎಂಬ ದಶಕಗಳ ಬಹುದೊಡ್ಡ ಕೂಗನ್ನು ದಲಿತ ರಾಜಕಾರಣಿಗಳು, ದಲಿತ ಮುಖಂಡರೇ ಹಾಳುಗೆಡವಿದ್ದಾರೆ ಎಂದರೆ ತಪ್ಪಾಗಲಾರದು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಒಪ್ಪುವುದಿಲ್ಲ : ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...