Homeಕರ್ನಾಟಕ"ದಲಿತ ಮುಖ್ಯಮಂತ್ರಿ" ಅರ್ಹರು ಯಾರಿಲ್ಲಿ?

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

- Advertisement -
- Advertisement -

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರಾಜಕೀಯ ವಲಯಗಳಲ್ಲಿ ಕೇಳಿಬರುತ್ತಿದೆ.

ಮುಖ್ಯಮಂತ್ರಿ ಹುದ್ದೆಯ ಕುರಿತು 2023ರಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಾಗಲೇ ಗೊಂದಲ ಹಾಗೂ ಪೈಪೋಟಿ ಶುರುವಾಗಿತ್ತು. ಅಂದೇ ಕಾಂಗ್ರೆಸ್‌ ಹೈಕಮಾಂಡ್‌ ಅಂದು ಉದ್ಬವಿಸಿದ್ದ ಗೊಂದಲಕ್ಕೆ ಪರಿಹಾರವೊಂದನ್ನು ಕಂಡುಕೊಂಡಿತ್ತು.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ತಮ್ಮ ತಮ್ಮ ಆಪ್ತ ವಲಯದಲ್ಲಿ “ಒಪ್ಪಂದ”ವೆಂದು ಮಾಹಿತಿ ರವಾನಿಸಿದ್ದರು. ಕಳೆದ 3 ವರ್ಷಗಳಲ್ಲಿ ನಿರಂತರವಾಗಿ ಮುಖ್ಯಮಂತ್ರಿ ಬದಲಾವಣೆಯ ಸುತ್ತ ಹಲವು ಪರ-ವಿರೋಧ ಹೇಳಿಕೆಗಳು ಕೇಳಿಬರುತ್ತಿದ್ದವು.

ಈಗ ಎಲ್ಲವೂ ಬಹಿರಂಗಗೊಂಡಿದೆ; ಹಿಂದೆ ಆದ ಒಪ್ಪಂದದಂತೆ ಮುಖ್ಯಮಂತ್ರಿ ಬದಲಾವಣೆಯೂ ನಡೆಯುತ್ತಿದೆ. ಇದೇ ಸಮಯದಲ್ಲಿ ಬಹುಕಾಲದಿಂದ ಕೇಳಿಬರುತ್ತಿದ್ದ ದಲಿತ ಮುಖ್ಯಮಂತ್ರಿ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. “ದಲಿತ ಮುಖ್ಯಮಂತ್ರಿ” ಈ ಸಮಯದಲ್ಲಿ ಸಾದ್ಯವಿಲ್ಲ ಎಂದೂ ಆ ರೀತಿಯ ಒತ್ತಾಯ ಮಾಡುತ್ತಿರುವವರಿಗೂ ತಿಳಿದಿದೆ.

ಕಳೆದ ಒಂದು ದಶಕದ ಹಿಂದೆ ಇದ್ದಂತೆ ದಲಿತ ಮುಖ್ಯಮಂತ್ರಿ ಕೂಗಿಗೆ ಅಷ್ಟು ಗಟ್ಟಿತನವಿಲ್ಲ ಎಂದು ಎಲ್ಲರಿಗೂ, ಅಷ್ಟೆ ಏಕೆ ಸ್ವತಃ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿರುವ ಪರಿಶಿಷ್ಟ ಜಾತಿಗಳ ರಾಜಕಾರಣಿಗಳಿಗೂ ತಿಳಿದಿದೆ. ಇದಕ್ಕೆ ಕಾರಣ ‘ದಲಿತ’ ಎಂದು ಹೇಳಿಕೊಳ್ಳುವ ಅದೇ ರಾಜಕಾರಣಗಳೇ ಆಗಿದ್ದಾರೆ.

ದಲಿತ ಎಂಬ ‘ಪ್ಯೂರ್‌’ ಸಮಾನತೆ ಸಾರುವ ಪದವನ್ನು ಇಂದು ಎಷ್ಟೆಲ್ಲಾ ನಗೆಪಾಟಲು ಮಾಡಿದ್ದಾರೆಂದರೆ, ಯಾರೊಬ್ಬರಿಗೂ ದಲಿತ ಮುಖ್ಯಮಂತ್ರಿ ಮಾಡಿ ಎಂದು ಬಹಿರಂಗವಾಗಿ ಹೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂಬುದು ಪ್ರಸ್ತುತ ನಡೆಯುತ್ತಿರುವ ಸನ್ನಿವೇಶವನ್ನು ಗಮನಿಸಿದರೆ ತಿಳಿಯುತ್ತದೆ.

ಬಿಜೆಪಿಯ ಕೋಮು ರಾಜಕಾರಣಕ್ಕೆ, ವೈದಿಕ ಪ್ರತಿಪಾದಿತ ಮನುಶಾಸ್ತ್ರಕ್ಕೆ ಟಕ್ಕರ್‌ ಕೊಟ್ಟಂತ ದಲಿತ ರಾಜಕಾರಣ ಇಂದು ಮುಸುಕಾಗುತ್ತಿದೆ. ಅಷ್ಟೆ ಅಲ್ಲ, ದಲಿತ ಎಂಬ ಪದವನ್ನು ಹೀನಾಮಾನವಾಗಿ ತಮಗೆ ಬೇಕಾದಂತೆ ಬಳಸಿಕೊಳ್ಳುವ ಮೂಲಕ ಅದಕ್ಕೆ ಇದ್ದ ಸಾರ್ವತ್ರಿಕ ಮಾನ್ಯತೆ, ಗೌರವವನ್ನು ಹಾಳುಗೆಡವಿದ್ದಾರೆ.

ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆದ ಪರಿಶಿಷ್ಟರ ಒಳಮೀಸಲಾತಿ ವಿಷಯದಲ್ಲಿ ಹೊಲೆಯ-ಮಾದಿಗ ರಾಜಕಾರಣಿಗಳು ನಡೆದುಕೊಂಡ ರೀತಿ ನಿಜಕ್ಕೂ ಬಾಬಾ ಸಾಹೇಬರ ಆಶಯಗಳಿಗೆ ಕೊಳ್ಳಿ ಇಟ್ಟಂತೆಯೇ ಆಗಿದೆ.

ಒಳಮೀಸಲಾತಿ ವಿಷಯದಲ್ಲಿ ಸಿದ್ದರಾಮಯ್ಯರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡು, ಬೆದರಿಕೆಗಳನ್ನು ಹಾಕುವ ಮೂಲಕ ಏನೆಲ್ಲಾ ಪ್ರಯತ್ನ ಮಾಡಲಾಯಿತು ಎಂಬುದು ಗುಪ್ತವಾಗಿಯೇನೂ ಉಳಿದುಕೊಂಡಿಲ್ಲ. ಇದರ ನಡುವೆ ಅಲೆಮಾರಿ ಸಮುದಾಯಗಳ ದನಿ ಮಾತ್ರ ಯಾರಿಗೂ ಕೇಳಿಸಲೇ ಇಲ್ಲ.

ಇನ್ನೊಂದೆಡೆ ಕೋಮು ರಾಜಕಾರಣಕ್ಕೆ, ಭಾರತದ ಜಾತಿಗ್ರಸ್ತ ಸಮಾಜಕ್ಕೆ ಸರಿಯಾದ ಹೊಡೆತ ಕೊಟ್ಟದ್ದು ಮಾತ್ರ ದಲಿತ ಸಮಗ್ರ ರಾಜಕಾರಣ. ಇದನ್ನು ಸಹಿಸದ ಕೋಮುವಾದಿ ಶಕ್ತಿಗಳು ನಿರಂತರವಾಗಿ ಈ “ದಲಿತ” ಎಂಬ ಬಹುದೊಡ್ಡ ಅಸ್ಮಿತೆಯನ್ನೇ ಒಡೆಯಲು ಹಿಂಬಾಗಿಲಿನಿಂದ ಏನೆಲ್ಲಾ ಪ್ರಯತ್ನ ಮಾಡಲು ಸಾಧ್ಯವೋ ಅದನ್ನೆಲ್ಲಾ ಇಂದು ಮಾಡಿಯಾಗಿದೆ.

ಇದಕ್ಕೆ ಪುಷ್ಟಿ ಕೊಡುವಂತೆ ದಲಿತ ಎಂಬ ಹೆಸರಿನಲ್ಲಿ ಇಷ್ಟು ದಿನಗಳ ಕಾಲ ಜನರನ್ನು ಸಂಘಟಿಸಿದ್ದ ‘ದೊಡ್ಡ ದೊಡ್ಡ’ ನೇತಾರರು ಒಳಮೀಸಲಾತಿಯಂತಹ ಬಹಳ ಸಂದಿಗ್ದ ಪರಿಸ್ಥಿತಿಯಲ್ಲಿ ಸಾಪೇಕ್ಷ ತಟಸ್ಥರಾಗಿ ಉಳಿದುಕೊಂಡಿದ್ದರಿಂದ ಹಲವು ಪ್ರಶ್ನೆಗಳಿಗೆ ಆಸ್ಪದ ನೀಡಿದರು.

ದಲಿತ ಎಂಬ ಪದವನ್ನು ಸಾಮಾಜಿಕ, ಸಾಂಸ್ಕೃತಿಕ ರಾಜಕಾರಣದಲ್ಲಿ ಎಷ್ಟು ಗಟ್ಟಿಗೊಳಿಸುತ್ತೇವೆಯೋ ಅಷ್ಟು ಚುನಾವಣಾ ರಾಜಕಾರಣದಲ್ಲಿ ದಲಿತ ಎಂಬ ಪದಕ್ಕೆ, ಅದರ ಕೂಗಿಗೆ ಗಟ್ಟಿತನ ಬರುತ್ತದೆ. ಆದರೆ ಈಗ ಪ್ರಸ್ತುತ ಸನ್ನಿವೇಶದಲ್ಲಿ ಇರುವ ಪರಿಶಿಷ್ಟ ಜಾತಿಗಳ ರಾಜಕಾರಣಿಗಳು ತಮ್ಮ ಉಪಜಾತಿಗಳ ಹೆಸರಿನಲ್ಲೋ ಅಥವಾ ತಾನೆಷ್ಟು ಕಾಂಗ್ರೆಸ್ಸಿಗ ಎಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನೋ, ಉಪಮುಖ್ಯಮಂತ್ರಿ ಹುದ್ದೆಯನ್ನೋ ಪಡೆಯಬಹುದು. ಈಗ ಪ್ರಸ್ತುತ ಇರುವ ರಾಜಕಾರಣಿಗಳಲ್ಲಿ ದಲಿತ ಎಂದು ಕ್ಲೇಮ್‌ ಮಾಡಿಕೊಳ್ಳುವಷ್ಟು, ದಲಿತ ಎಂಬ ಪದಕ್ಕೆ ನಿಜಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ ಯಾರೊಬ್ಬರೂ ಇಲ್ಲ. ಮುಂದೊಂದು ದಿನ ದಲಿತತ್ವವನ್ನು ನಿಜಕ್ಕೂ ಮೈಗೂಡಿಸಿಕೊಂಡಿರುವವರು, ನಿಜವಾದ ಸಾಮಾಜಿಕ ನ್ಯಾಯದ ಪ್ರತಿಪಾದಕರು ಬಂದಾಗ ದಲಿತ ಮುಖ್ಯಮಂತ್ರಿ ಮುಂತಾದವು ಸಾಧ್ಯವಾಗಬಹುದೇನೋ…

ಒಟ್ಟಾರೆ ದಲಿತ ಮುಖ್ಯಮಂತ್ರಿ ಎಂಬ ದಶಕಗಳ ಬಹುದೊಡ್ಡ ಕೂಗನ್ನು ದಲಿತ ರಾಜಕಾರಣಿಗಳು, ದಲಿತ ಮುಖಂಡರೇ ಹಾಳುಗೆಡವಿದ್ದಾರೆ ಎಂದರೆ ತಪ್ಪಾಗಲಾರದು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...