Homeಕರ್ನಾಟಕ"ದಲಿತ ಮುಖ್ಯಮಂತ್ರಿ" ಅರ್ಹರು ಯಾರಿಲ್ಲಿ?

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

- Advertisement -
- Advertisement -

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ರಾಜಕೀಯ ವಲಯಗಳಲ್ಲಿ ಕೇಳಿಬರುತ್ತಿದೆ.

ಮುಖ್ಯಮಂತ್ರಿ ಹುದ್ದೆಯ ಕುರಿತು 2023ರಲ್ಲಿ ಕಾಂಗ್ರೆಸ್‌ 136 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಾಗಲೇ ಗೊಂದಲ ಹಾಗೂ ಪೈಪೋಟಿ ಶುರುವಾಗಿತ್ತು. ಅಂದೇ ಕಾಂಗ್ರೆಸ್‌ ಹೈಕಮಾಂಡ್‌ ಅಂದು ಉದ್ಬವಿಸಿದ್ದ ಗೊಂದಲಕ್ಕೆ ಪರಿಹಾರವೊಂದನ್ನು ಕಂಡುಕೊಂಡಿತ್ತು.

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ತಮ್ಮ ತಮ್ಮ ಆಪ್ತ ವಲಯದಲ್ಲಿ “ಒಪ್ಪಂದ”ವೆಂದು ಮಾಹಿತಿ ರವಾನಿಸಿದ್ದರು. ಕಳೆದ 3 ವರ್ಷಗಳಲ್ಲಿ ನಿರಂತರವಾಗಿ ಮುಖ್ಯಮಂತ್ರಿ ಬದಲಾವಣೆಯ ಸುತ್ತ ಹಲವು ಪರ-ವಿರೋಧ ಹೇಳಿಕೆಗಳು ಕೇಳಿಬರುತ್ತಿದ್ದವು.

ಈಗ ಎಲ್ಲವೂ ಬಹಿರಂಗಗೊಂಡಿದೆ; ಹಿಂದೆ ಆದ ಒಪ್ಪಂದದಂತೆ ಮುಖ್ಯಮಂತ್ರಿ ಬದಲಾವಣೆಯೂ ನಡೆಯುತ್ತಿದೆ. ಇದೇ ಸಮಯದಲ್ಲಿ ಬಹುಕಾಲದಿಂದ ಕೇಳಿಬರುತ್ತಿದ್ದ ದಲಿತ ಮುಖ್ಯಮಂತ್ರಿ ಕುರಿತು ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. “ದಲಿತ ಮುಖ್ಯಮಂತ್ರಿ” ಈ ಸಮಯದಲ್ಲಿ ಸಾದ್ಯವಿಲ್ಲ ಎಂದೂ ಆ ರೀತಿಯ ಒತ್ತಾಯ ಮಾಡುತ್ತಿರುವವರಿಗೂ ತಿಳಿದಿದೆ.

ಕಳೆದ ಒಂದು ದಶಕದ ಹಿಂದೆ ಇದ್ದಂತೆ ದಲಿತ ಮುಖ್ಯಮಂತ್ರಿ ಕೂಗಿಗೆ ಅಷ್ಟು ಗಟ್ಟಿತನವಿಲ್ಲ ಎಂದು ಎಲ್ಲರಿಗೂ, ಅಷ್ಟೆ ಏಕೆ ಸ್ವತಃ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿರುವ ಪರಿಶಿಷ್ಟ ಜಾತಿಗಳ ರಾಜಕಾರಣಿಗಳಿಗೂ ತಿಳಿದಿದೆ. ಇದಕ್ಕೆ ಕಾರಣ ‘ದಲಿತ’ ಎಂದು ಹೇಳಿಕೊಳ್ಳುವ ಅದೇ ರಾಜಕಾರಣಗಳೇ ಆಗಿದ್ದಾರೆ.

ದಲಿತ ಎಂಬ ‘ಪ್ಯೂರ್‌’ ಸಮಾನತೆ ಸಾರುವ ಪದವನ್ನು ಇಂದು ಎಷ್ಟೆಲ್ಲಾ ನಗೆಪಾಟಲು ಮಾಡಿದ್ದಾರೆಂದರೆ, ಯಾರೊಬ್ಬರಿಗೂ ದಲಿತ ಮುಖ್ಯಮಂತ್ರಿ ಮಾಡಿ ಎಂದು ಬಹಿರಂಗವಾಗಿ ಹೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂಬುದು ಪ್ರಸ್ತುತ ನಡೆಯುತ್ತಿರುವ ಸನ್ನಿವೇಶವನ್ನು ಗಮನಿಸಿದರೆ ತಿಳಿಯುತ್ತದೆ.

ಬಿಜೆಪಿಯ ಕೋಮು ರಾಜಕಾರಣಕ್ಕೆ, ವೈದಿಕ ಪ್ರತಿಪಾದಿತ ಮನುಶಾಸ್ತ್ರಕ್ಕೆ ಟಕ್ಕರ್‌ ಕೊಟ್ಟಂತ ದಲಿತ ರಾಜಕಾರಣ ಇಂದು ಮುಸುಕಾಗುತ್ತಿದೆ. ಅಷ್ಟೆ ಅಲ್ಲ, ದಲಿತ ಎಂಬ ಪದವನ್ನು ಹೀನಾಮಾನವಾಗಿ ತಮಗೆ ಬೇಕಾದಂತೆ ಬಳಸಿಕೊಳ್ಳುವ ಮೂಲಕ ಅದಕ್ಕೆ ಇದ್ದ ಸಾರ್ವತ್ರಿಕ ಮಾನ್ಯತೆ, ಗೌರವವನ್ನು ಹಾಳುಗೆಡವಿದ್ದಾರೆ.

ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆದ ಪರಿಶಿಷ್ಟರ ಒಳಮೀಸಲಾತಿ ವಿಷಯದಲ್ಲಿ ಹೊಲೆಯ-ಮಾದಿಗ ರಾಜಕಾರಣಿಗಳು ನಡೆದುಕೊಂಡ ರೀತಿ ನಿಜಕ್ಕೂ ಬಾಬಾ ಸಾಹೇಬರ ಆಶಯಗಳಿಗೆ ಕೊಳ್ಳಿ ಇಟ್ಟಂತೆಯೇ ಆಗಿದೆ.

ಒಳಮೀಸಲಾತಿ ವಿಷಯದಲ್ಲಿ ಸಿದ್ದರಾಮಯ್ಯರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡು, ಬೆದರಿಕೆಗಳನ್ನು ಹಾಕುವ ಮೂಲಕ ಏನೆಲ್ಲಾ ಪ್ರಯತ್ನ ಮಾಡಲಾಯಿತು ಎಂಬುದು ಗುಪ್ತವಾಗಿಯೇನೂ ಉಳಿದುಕೊಂಡಿಲ್ಲ. ಇದರ ನಡುವೆ ಅಲೆಮಾರಿ ಸಮುದಾಯಗಳ ದನಿ ಮಾತ್ರ ಯಾರಿಗೂ ಕೇಳಿಸಲೇ ಇಲ್ಲ.

ಇನ್ನೊಂದೆಡೆ ಕೋಮು ರಾಜಕಾರಣಕ್ಕೆ, ಭಾರತದ ಜಾತಿಗ್ರಸ್ತ ಸಮಾಜಕ್ಕೆ ಸರಿಯಾದ ಹೊಡೆತ ಕೊಟ್ಟದ್ದು ಮಾತ್ರ ದಲಿತ ಸಮಗ್ರ ರಾಜಕಾರಣ. ಇದನ್ನು ಸಹಿಸದ ಕೋಮುವಾದಿ ಶಕ್ತಿಗಳು ನಿರಂತರವಾಗಿ ಈ “ದಲಿತ” ಎಂಬ ಬಹುದೊಡ್ಡ ಅಸ್ಮಿತೆಯನ್ನೇ ಒಡೆಯಲು ಹಿಂಬಾಗಿಲಿನಿಂದ ಏನೆಲ್ಲಾ ಪ್ರಯತ್ನ ಮಾಡಲು ಸಾಧ್ಯವೋ ಅದನ್ನೆಲ್ಲಾ ಇಂದು ಮಾಡಿಯಾಗಿದೆ.

ಇದಕ್ಕೆ ಪುಷ್ಟಿ ಕೊಡುವಂತೆ ದಲಿತ ಎಂಬ ಹೆಸರಿನಲ್ಲಿ ಇಷ್ಟು ದಿನಗಳ ಕಾಲ ಜನರನ್ನು ಸಂಘಟಿಸಿದ್ದ ‘ದೊಡ್ಡ ದೊಡ್ಡ’ ನೇತಾರರು ಒಳಮೀಸಲಾತಿಯಂತಹ ಬಹಳ ಸಂದಿಗ್ದ ಪರಿಸ್ಥಿತಿಯಲ್ಲಿ ಸಾಪೇಕ್ಷ ತಟಸ್ಥರಾಗಿ ಉಳಿದುಕೊಂಡಿದ್ದರಿಂದ ಹಲವು ಪ್ರಶ್ನೆಗಳಿಗೆ ಆಸ್ಪದ ನೀಡಿದರು.

ದಲಿತ ಎಂಬ ಪದವನ್ನು ಸಾಮಾಜಿಕ, ಸಾಂಸ್ಕೃತಿಕ ರಾಜಕಾರಣದಲ್ಲಿ ಎಷ್ಟು ಗಟ್ಟಿಗೊಳಿಸುತ್ತೇವೆಯೋ ಅಷ್ಟು ಚುನಾವಣಾ ರಾಜಕಾರಣದಲ್ಲಿ ದಲಿತ ಎಂಬ ಪದಕ್ಕೆ, ಅದರ ಕೂಗಿಗೆ ಗಟ್ಟಿತನ ಬರುತ್ತದೆ. ಆದರೆ ಈಗ ಪ್ರಸ್ತುತ ಸನ್ನಿವೇಶದಲ್ಲಿ ಇರುವ ಪರಿಶಿಷ್ಟ ಜಾತಿಗಳ ರಾಜಕಾರಣಿಗಳು ತಮ್ಮ ಉಪಜಾತಿಗಳ ಹೆಸರಿನಲ್ಲೋ ಅಥವಾ ತಾನೆಷ್ಟು ಕಾಂಗ್ರೆಸ್ಸಿಗ ಎಂಬ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನೋ, ಉಪಮುಖ್ಯಮಂತ್ರಿ ಹುದ್ದೆಯನ್ನೋ ಪಡೆಯಬಹುದು. ಈಗ ಪ್ರಸ್ತುತ ಇರುವ ರಾಜಕಾರಣಿಗಳಲ್ಲಿ ದಲಿತ ಎಂದು ಕ್ಲೇಮ್‌ ಮಾಡಿಕೊಳ್ಳುವಷ್ಟು, ದಲಿತ ಎಂಬ ಪದಕ್ಕೆ ನಿಜಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ ಯಾರೊಬ್ಬರೂ ಇಲ್ಲ. ಮುಂದೊಂದು ದಿನ ದಲಿತತ್ವವನ್ನು ನಿಜಕ್ಕೂ ಮೈಗೂಡಿಸಿಕೊಂಡಿರುವವರು, ನಿಜವಾದ ಸಾಮಾಜಿಕ ನ್ಯಾಯದ ಪ್ರತಿಪಾದಕರು ಬಂದಾಗ ದಲಿತ ಮುಖ್ಯಮಂತ್ರಿ ಮುಂತಾದವು ಸಾಧ್ಯವಾಗಬಹುದೇನೋ…

ಒಟ್ಟಾರೆ ದಲಿತ ಮುಖ್ಯಮಂತ್ರಿ ಎಂಬ ದಶಕಗಳ ಬಹುದೊಡ್ಡ ಕೂಗನ್ನು ದಲಿತ ರಾಜಕಾರಣಿಗಳು, ದಲಿತ ಮುಖಂಡರೇ ಹಾಳುಗೆಡವಿದ್ದಾರೆ ಎಂದರೆ ತಪ್ಪಾಗಲಾರದು.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...