Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...