Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...