Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...