Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...