Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...