Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....