Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...