Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...