Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...