Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...