Homeಕರ್ನಾಟಕಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

ಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

- Advertisement -
- Advertisement -

ಡಿಸೆಂಬರ್‌ 6ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’, ‘ದಲಿತ ಸಂಘಟನೆಗಳ ಬೃಹತ್‌ ಐಕ್ಯತಾ ಸಮಾವೇಶ’ದ ಭಾಗವಾಗಿ ಇಂದು ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ.

#DalitResistance (ದಲಿತ ಪ್ರತಿರೋಧ), #DSS (ದಸಂಸ) ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ನೂರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಮ್ಮಿಕೊಂಡಿರುವ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ಆನಂದ್‌ ತೇಲ್ತುಂಬ್ಡೆಯವರು ಉದ್ಘಾಟಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗಕರ್ಮಿ ಸಿ.ಬಸವಲಿಂಗಯ್ಯ ಚಾಲನೆ ನೀಡಲಿದ್ದಾರೆ. 12 ಗಂಟೆಗೆ ಸಮಾವೇಶ ಉದ್ಘಾಟನೆಯಾಗಲಿದ್ದು, ಹಿರಿಯ ದಲಿತ ಹೋರಾಟಗಾರರಾದ ಎನ್‌.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ಕರ್ನಾಟಕ ಸರ್ಕಾರದ ಮಾಜಿ ಅಡ್ವೊಕೇಟ್ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್‌, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಡಾ.ಡಿ.ಜಿ.ಸಾಗರ್‌, ಲಕ್ಷ್ಮಿನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್.ಮುನಿಸ್ವಾಮಿ, ಎಂ.ಸೋಮಶೇಖರ್‌, ಜಗಣಿ ಶಂಕರ್‌, ಎಸ್.ಆರ್‌.ಕೊಲ್ಲೂರು ಪಾಲ್ಗೊಳ್ಳದ್ದಾರೆ.

ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್‌, ರುದ್ರಪ್ಪ ಹನಗವಾಡಿ, ಎಚ್.ಎಂ.ರುದ್ರಸ್ವಾಮಿ, ಲಕ್ಷ್ಮಿಪತಿ ಕೋಲಾರ, ಮಂಗ್ಳೂರು ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್‌, ಎಚ್.ಜನಾರ್ದನ್‌ (ಜನ್ನಿ), ಪಿಚ್ಚಳ್ಳಿ ಶ್ರೀನಿವಾಸ್, ಗೊಲ್ಲಹಳ್ಳಿ ಶಿವಪ್ರಸಾದ್, ಸಿ.ಜಿ.ಶ್ರೀನಿವಾಸನ್, ಬಸವರಾಜ ನಾಯಕ, ಎಚ್.ಎನ್.ಅಣ್ಣಯ್ಯ, ಕುಪ್ಪೆ ನಾಗರಾಜ್, ಅನಂತ ನಾಯಕ್, ಎಂ.ಆರ್‌.ಬೇರಿ, ರಮೇಶ್ ಡಾಕುಳಿಕಿ, ಆದರ್ಶ್ ಯಲ್ಲಪ್ಪ, ಭಾರತಿ ರಾಜಣ್ಣ, ಇಂದಿರಾ ಕೃಷ್ಣಪ್ಪ, ಪುರುಷೋತ್ತಮ ದಾಸ್‌ ಸೇರಿದಂತೆ ಹಲವು ದಲಿತ ಹೋರಾಟಗಾರರು ಹಾಜರಿರಲಿದ್ದಾರೆ.

ದಲಿತ ಪ್ರತಿರೋಧ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಲವಾರು ಜನರು ಟ್ವೀಟರ್‌ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಬರೆದಿದ್ದಾರೆ. “ಸ್ವಾತಂತ್ರ್ಯ ನಮ್ಮ ಹಕ್ಕು, ಸಮಾನತೆ ನಮ್ಮ ಅಗತ್ಯ, ಭ್ರಾತೃತ್ವ ನಮ್ಮ ಕನಸು” ಎಂದು ಲೇಖಾ ಅಡವಿ ಟ್ವೀಟ್ ಮಾಡಿದ್ದಾರೆ.

“ಜಾತಿ ಎಲ್ಲಿದೆ ಎನ್ನುತ್ತಲೇ ಅಸಮಾನತೆ ತೋರುವ ಫ್ಯೂಡಲ್‌‌ಗಳಿಂದ ಮತ್ತು ಜಾತಿ ಶ್ರೇಷ್ಠತೆಯ ಕಾಯಿಲೆಯಿಂದ ನರಳುತ್ತಿರುವವರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಅನಿವಾರ್ಯ. ಅದಕ್ಕಾಗಿಯೇ ಈ ಐಕ್ಯತೆ” ಎಂದು ಮುರುಳಿ ಮಾಲೂರು ಟ್ವೀಟ್ ಮಾಡಿದ್ದಾರೆ.

“ಸಿಂಹದಂತೆ ಸಿಡಿದು ಬನ್ನಿ ಹುಲಿಯಂತೆ ನೆಗೆದು ಬನ್ನಿ ಹೋರಾಟದ ಸಾಗರಕ್ಕೆ ನಾರಿಯರೇ ನಗುತ ಬನ್ನಿ” ಎಂದು ನಿಶಾ ಗೂಳೂರ್‌ ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದಲ್ಲಿ ಶೇ 24 ರಿಂದ 30 ಇರುವ ದಲಿತ ಸಮುದಾಯದಿಂದ ಆದ ಮುಖ್ಯಮಂತ್ರಿಗಳ ಸಂಖ್ಯೆ ಎಷ್ಟು? ಸೊನ್ನೆ! ಇನ್ನು ಮುಂದಾದರೂ ದಲಿತರು ರಾಜಕೀಯವಾಗಿ ಎಚ್ಚರಗೊಳ್ಳಲಿ” ಎಂದು ಶ್ಯಾಮ್ ಎಂಬವರು ಮನವಿ ಮಾಡಿದ್ದಾರೆ.

“ತಳದಲ್ಲಿದ್ದವರು ನಾವು, ಬೂದಿಯಲೆದ್ದವರು, ಕತ್ತಲೆ ಚರಿತ್ರೆಯ ಬೆತ್ತಲೆ ಮಾಡುವ ಕನಸನು ಹೊತ್ತವರು ನಾವು, ಕನಸನು ಹೊತ್ತವರು” ಎಂದು ಗುಲಾಬ್ ಪಾಷಾ ಬರೆದಿದ್ದಾರೆ.

ಸಮಾವೇಶಕ್ಕೆ ಸಂಬಂಧಿಸಿದ ಹತ್ತಾರು ಪೋಸ್ಟರ್‌ಗಳು ಟ್ವಿಟರ್‌ನಲ್ಲಿ ಹರಿದಾಡಿವೆ. ಹೋರಾಟದ ಹಾಡುಗಳ ಸಾಲುಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

“ಒಡೆದು ಹೋದ ದಲಿತ ಸಂಘಟನೆಗಳು ಕೋಮುವಾದಿಗಳಿಗೆ ಸುಲಭ ತುತ್ತುಗಳು. ಐಕ್ಯತೆ ಎಂಬುದು ಅಭಿಯಾನದ ಹೆಸರಲ್ಲ, ಅದು ಹೋರಾಟದ ನಂಬಿಕೆಯ ಮಾರ್ಗ” ಎಂದು ಬಹುತ್ವ ಕರ್ನಾಟಕ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವು ಮುಂದೆ ಮತ ಚಲಾಯಿಸುವುದರ ಮೂಲಕ ಕೋಮುವಾದದ ನಶೆಯಲ್ಲಿರುವ ಸರಕಾರವನ್ನು ಕಿತ್ತೊಗೆದು ಜಾತ್ಯಾತೀತ ಸರಕಾರದ ಭವ್ಯ ಭಾರತವನ್ನ ನಿರ್ಮಾಣ ಮಾಡೋಣ. ಎಲ್ಲರೂ ಭಾರತೀಯರಾಗೋಣ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...