Homeಕರ್ನಾಟಕಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

ಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

- Advertisement -
- Advertisement -

ಡಿಸೆಂಬರ್‌ 6ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’, ‘ದಲಿತ ಸಂಘಟನೆಗಳ ಬೃಹತ್‌ ಐಕ್ಯತಾ ಸಮಾವೇಶ’ದ ಭಾಗವಾಗಿ ಇಂದು ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ.

#DalitResistance (ದಲಿತ ಪ್ರತಿರೋಧ), #DSS (ದಸಂಸ) ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ನೂರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಮ್ಮಿಕೊಂಡಿರುವ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ಆನಂದ್‌ ತೇಲ್ತುಂಬ್ಡೆಯವರು ಉದ್ಘಾಟಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗಕರ್ಮಿ ಸಿ.ಬಸವಲಿಂಗಯ್ಯ ಚಾಲನೆ ನೀಡಲಿದ್ದಾರೆ. 12 ಗಂಟೆಗೆ ಸಮಾವೇಶ ಉದ್ಘಾಟನೆಯಾಗಲಿದ್ದು, ಹಿರಿಯ ದಲಿತ ಹೋರಾಟಗಾರರಾದ ಎನ್‌.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ಕರ್ನಾಟಕ ಸರ್ಕಾರದ ಮಾಜಿ ಅಡ್ವೊಕೇಟ್ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್‌, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಡಾ.ಡಿ.ಜಿ.ಸಾಗರ್‌, ಲಕ್ಷ್ಮಿನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್.ಮುನಿಸ್ವಾಮಿ, ಎಂ.ಸೋಮಶೇಖರ್‌, ಜಗಣಿ ಶಂಕರ್‌, ಎಸ್.ಆರ್‌.ಕೊಲ್ಲೂರು ಪಾಲ್ಗೊಳ್ಳದ್ದಾರೆ.

ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್‌, ರುದ್ರಪ್ಪ ಹನಗವಾಡಿ, ಎಚ್.ಎಂ.ರುದ್ರಸ್ವಾಮಿ, ಲಕ್ಷ್ಮಿಪತಿ ಕೋಲಾರ, ಮಂಗ್ಳೂರು ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್‌, ಎಚ್.ಜನಾರ್ದನ್‌ (ಜನ್ನಿ), ಪಿಚ್ಚಳ್ಳಿ ಶ್ರೀನಿವಾಸ್, ಗೊಲ್ಲಹಳ್ಳಿ ಶಿವಪ್ರಸಾದ್, ಸಿ.ಜಿ.ಶ್ರೀನಿವಾಸನ್, ಬಸವರಾಜ ನಾಯಕ, ಎಚ್.ಎನ್.ಅಣ್ಣಯ್ಯ, ಕುಪ್ಪೆ ನಾಗರಾಜ್, ಅನಂತ ನಾಯಕ್, ಎಂ.ಆರ್‌.ಬೇರಿ, ರಮೇಶ್ ಡಾಕುಳಿಕಿ, ಆದರ್ಶ್ ಯಲ್ಲಪ್ಪ, ಭಾರತಿ ರಾಜಣ್ಣ, ಇಂದಿರಾ ಕೃಷ್ಣಪ್ಪ, ಪುರುಷೋತ್ತಮ ದಾಸ್‌ ಸೇರಿದಂತೆ ಹಲವು ದಲಿತ ಹೋರಾಟಗಾರರು ಹಾಜರಿರಲಿದ್ದಾರೆ.

ದಲಿತ ಪ್ರತಿರೋಧ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಲವಾರು ಜನರು ಟ್ವೀಟರ್‌ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಬರೆದಿದ್ದಾರೆ. “ಸ್ವಾತಂತ್ರ್ಯ ನಮ್ಮ ಹಕ್ಕು, ಸಮಾನತೆ ನಮ್ಮ ಅಗತ್ಯ, ಭ್ರಾತೃತ್ವ ನಮ್ಮ ಕನಸು” ಎಂದು ಲೇಖಾ ಅಡವಿ ಟ್ವೀಟ್ ಮಾಡಿದ್ದಾರೆ.

“ಜಾತಿ ಎಲ್ಲಿದೆ ಎನ್ನುತ್ತಲೇ ಅಸಮಾನತೆ ತೋರುವ ಫ್ಯೂಡಲ್‌‌ಗಳಿಂದ ಮತ್ತು ಜಾತಿ ಶ್ರೇಷ್ಠತೆಯ ಕಾಯಿಲೆಯಿಂದ ನರಳುತ್ತಿರುವವರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಅನಿವಾರ್ಯ. ಅದಕ್ಕಾಗಿಯೇ ಈ ಐಕ್ಯತೆ” ಎಂದು ಮುರುಳಿ ಮಾಲೂರು ಟ್ವೀಟ್ ಮಾಡಿದ್ದಾರೆ.

“ಸಿಂಹದಂತೆ ಸಿಡಿದು ಬನ್ನಿ ಹುಲಿಯಂತೆ ನೆಗೆದು ಬನ್ನಿ ಹೋರಾಟದ ಸಾಗರಕ್ಕೆ ನಾರಿಯರೇ ನಗುತ ಬನ್ನಿ” ಎಂದು ನಿಶಾ ಗೂಳೂರ್‌ ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದಲ್ಲಿ ಶೇ 24 ರಿಂದ 30 ಇರುವ ದಲಿತ ಸಮುದಾಯದಿಂದ ಆದ ಮುಖ್ಯಮಂತ್ರಿಗಳ ಸಂಖ್ಯೆ ಎಷ್ಟು? ಸೊನ್ನೆ! ಇನ್ನು ಮುಂದಾದರೂ ದಲಿತರು ರಾಜಕೀಯವಾಗಿ ಎಚ್ಚರಗೊಳ್ಳಲಿ” ಎಂದು ಶ್ಯಾಮ್ ಎಂಬವರು ಮನವಿ ಮಾಡಿದ್ದಾರೆ.

“ತಳದಲ್ಲಿದ್ದವರು ನಾವು, ಬೂದಿಯಲೆದ್ದವರು, ಕತ್ತಲೆ ಚರಿತ್ರೆಯ ಬೆತ್ತಲೆ ಮಾಡುವ ಕನಸನು ಹೊತ್ತವರು ನಾವು, ಕನಸನು ಹೊತ್ತವರು” ಎಂದು ಗುಲಾಬ್ ಪಾಷಾ ಬರೆದಿದ್ದಾರೆ.

ಸಮಾವೇಶಕ್ಕೆ ಸಂಬಂಧಿಸಿದ ಹತ್ತಾರು ಪೋಸ್ಟರ್‌ಗಳು ಟ್ವಿಟರ್‌ನಲ್ಲಿ ಹರಿದಾಡಿವೆ. ಹೋರಾಟದ ಹಾಡುಗಳ ಸಾಲುಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

“ಒಡೆದು ಹೋದ ದಲಿತ ಸಂಘಟನೆಗಳು ಕೋಮುವಾದಿಗಳಿಗೆ ಸುಲಭ ತುತ್ತುಗಳು. ಐಕ್ಯತೆ ಎಂಬುದು ಅಭಿಯಾನದ ಹೆಸರಲ್ಲ, ಅದು ಹೋರಾಟದ ನಂಬಿಕೆಯ ಮಾರ್ಗ” ಎಂದು ಬಹುತ್ವ ಕರ್ನಾಟಕ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವು ಮುಂದೆ ಮತ ಚಲಾಯಿಸುವುದರ ಮೂಲಕ ಕೋಮುವಾದದ ನಶೆಯಲ್ಲಿರುವ ಸರಕಾರವನ್ನು ಕಿತ್ತೊಗೆದು ಜಾತ್ಯಾತೀತ ಸರಕಾರದ ಭವ್ಯ ಭಾರತವನ್ನ ನಿರ್ಮಾಣ ಮಾಡೋಣ. ಎಲ್ಲರೂ ಭಾರತೀಯರಾಗೋಣ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...