Homeಕರ್ನಾಟಕಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

ಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

- Advertisement -
- Advertisement -

ಡಿಸೆಂಬರ್‌ 6ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’, ‘ದಲಿತ ಸಂಘಟನೆಗಳ ಬೃಹತ್‌ ಐಕ್ಯತಾ ಸಮಾವೇಶ’ದ ಭಾಗವಾಗಿ ಇಂದು ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ.

#DalitResistance (ದಲಿತ ಪ್ರತಿರೋಧ), #DSS (ದಸಂಸ) ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ನೂರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಮ್ಮಿಕೊಂಡಿರುವ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ಆನಂದ್‌ ತೇಲ್ತುಂಬ್ಡೆಯವರು ಉದ್ಘಾಟಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗಕರ್ಮಿ ಸಿ.ಬಸವಲಿಂಗಯ್ಯ ಚಾಲನೆ ನೀಡಲಿದ್ದಾರೆ. 12 ಗಂಟೆಗೆ ಸಮಾವೇಶ ಉದ್ಘಾಟನೆಯಾಗಲಿದ್ದು, ಹಿರಿಯ ದಲಿತ ಹೋರಾಟಗಾರರಾದ ಎನ್‌.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ಕರ್ನಾಟಕ ಸರ್ಕಾರದ ಮಾಜಿ ಅಡ್ವೊಕೇಟ್ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್‌, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಡಾ.ಡಿ.ಜಿ.ಸಾಗರ್‌, ಲಕ್ಷ್ಮಿನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್.ಮುನಿಸ್ವಾಮಿ, ಎಂ.ಸೋಮಶೇಖರ್‌, ಜಗಣಿ ಶಂಕರ್‌, ಎಸ್.ಆರ್‌.ಕೊಲ್ಲೂರು ಪಾಲ್ಗೊಳ್ಳದ್ದಾರೆ.

ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್‌, ರುದ್ರಪ್ಪ ಹನಗವಾಡಿ, ಎಚ್.ಎಂ.ರುದ್ರಸ್ವಾಮಿ, ಲಕ್ಷ್ಮಿಪತಿ ಕೋಲಾರ, ಮಂಗ್ಳೂರು ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್‌, ಎಚ್.ಜನಾರ್ದನ್‌ (ಜನ್ನಿ), ಪಿಚ್ಚಳ್ಳಿ ಶ್ರೀನಿವಾಸ್, ಗೊಲ್ಲಹಳ್ಳಿ ಶಿವಪ್ರಸಾದ್, ಸಿ.ಜಿ.ಶ್ರೀನಿವಾಸನ್, ಬಸವರಾಜ ನಾಯಕ, ಎಚ್.ಎನ್.ಅಣ್ಣಯ್ಯ, ಕುಪ್ಪೆ ನಾಗರಾಜ್, ಅನಂತ ನಾಯಕ್, ಎಂ.ಆರ್‌.ಬೇರಿ, ರಮೇಶ್ ಡಾಕುಳಿಕಿ, ಆದರ್ಶ್ ಯಲ್ಲಪ್ಪ, ಭಾರತಿ ರಾಜಣ್ಣ, ಇಂದಿರಾ ಕೃಷ್ಣಪ್ಪ, ಪುರುಷೋತ್ತಮ ದಾಸ್‌ ಸೇರಿದಂತೆ ಹಲವು ದಲಿತ ಹೋರಾಟಗಾರರು ಹಾಜರಿರಲಿದ್ದಾರೆ.

ದಲಿತ ಪ್ರತಿರೋಧ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಲವಾರು ಜನರು ಟ್ವೀಟರ್‌ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಬರೆದಿದ್ದಾರೆ. “ಸ್ವಾತಂತ್ರ್ಯ ನಮ್ಮ ಹಕ್ಕು, ಸಮಾನತೆ ನಮ್ಮ ಅಗತ್ಯ, ಭ್ರಾತೃತ್ವ ನಮ್ಮ ಕನಸು” ಎಂದು ಲೇಖಾ ಅಡವಿ ಟ್ವೀಟ್ ಮಾಡಿದ್ದಾರೆ.

“ಜಾತಿ ಎಲ್ಲಿದೆ ಎನ್ನುತ್ತಲೇ ಅಸಮಾನತೆ ತೋರುವ ಫ್ಯೂಡಲ್‌‌ಗಳಿಂದ ಮತ್ತು ಜಾತಿ ಶ್ರೇಷ್ಠತೆಯ ಕಾಯಿಲೆಯಿಂದ ನರಳುತ್ತಿರುವವರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಅನಿವಾರ್ಯ. ಅದಕ್ಕಾಗಿಯೇ ಈ ಐಕ್ಯತೆ” ಎಂದು ಮುರುಳಿ ಮಾಲೂರು ಟ್ವೀಟ್ ಮಾಡಿದ್ದಾರೆ.

“ಸಿಂಹದಂತೆ ಸಿಡಿದು ಬನ್ನಿ ಹುಲಿಯಂತೆ ನೆಗೆದು ಬನ್ನಿ ಹೋರಾಟದ ಸಾಗರಕ್ಕೆ ನಾರಿಯರೇ ನಗುತ ಬನ್ನಿ” ಎಂದು ನಿಶಾ ಗೂಳೂರ್‌ ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದಲ್ಲಿ ಶೇ 24 ರಿಂದ 30 ಇರುವ ದಲಿತ ಸಮುದಾಯದಿಂದ ಆದ ಮುಖ್ಯಮಂತ್ರಿಗಳ ಸಂಖ್ಯೆ ಎಷ್ಟು? ಸೊನ್ನೆ! ಇನ್ನು ಮುಂದಾದರೂ ದಲಿತರು ರಾಜಕೀಯವಾಗಿ ಎಚ್ಚರಗೊಳ್ಳಲಿ” ಎಂದು ಶ್ಯಾಮ್ ಎಂಬವರು ಮನವಿ ಮಾಡಿದ್ದಾರೆ.

“ತಳದಲ್ಲಿದ್ದವರು ನಾವು, ಬೂದಿಯಲೆದ್ದವರು, ಕತ್ತಲೆ ಚರಿತ್ರೆಯ ಬೆತ್ತಲೆ ಮಾಡುವ ಕನಸನು ಹೊತ್ತವರು ನಾವು, ಕನಸನು ಹೊತ್ತವರು” ಎಂದು ಗುಲಾಬ್ ಪಾಷಾ ಬರೆದಿದ್ದಾರೆ.

ಸಮಾವೇಶಕ್ಕೆ ಸಂಬಂಧಿಸಿದ ಹತ್ತಾರು ಪೋಸ್ಟರ್‌ಗಳು ಟ್ವಿಟರ್‌ನಲ್ಲಿ ಹರಿದಾಡಿವೆ. ಹೋರಾಟದ ಹಾಡುಗಳ ಸಾಲುಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

“ಒಡೆದು ಹೋದ ದಲಿತ ಸಂಘಟನೆಗಳು ಕೋಮುವಾದಿಗಳಿಗೆ ಸುಲಭ ತುತ್ತುಗಳು. ಐಕ್ಯತೆ ಎಂಬುದು ಅಭಿಯಾನದ ಹೆಸರಲ್ಲ, ಅದು ಹೋರಾಟದ ನಂಬಿಕೆಯ ಮಾರ್ಗ” ಎಂದು ಬಹುತ್ವ ಕರ್ನಾಟಕ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವು ಮುಂದೆ ಮತ ಚಲಾಯಿಸುವುದರ ಮೂಲಕ ಕೋಮುವಾದದ ನಶೆಯಲ್ಲಿರುವ ಸರಕಾರವನ್ನು ಕಿತ್ತೊಗೆದು ಜಾತ್ಯಾತೀತ ಸರಕಾರದ ಭವ್ಯ ಭಾರತವನ್ನ ನಿರ್ಮಾಣ ಮಾಡೋಣ. ಎಲ್ಲರೂ ಭಾರತೀಯರಾಗೋಣ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...