Homeಕರ್ನಾಟಕಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

ಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

- Advertisement -
- Advertisement -

ಡಿಸೆಂಬರ್‌ 6ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’, ‘ದಲಿತ ಸಂಘಟನೆಗಳ ಬೃಹತ್‌ ಐಕ್ಯತಾ ಸಮಾವೇಶ’ದ ಭಾಗವಾಗಿ ಇಂದು ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ.

#DalitResistance (ದಲಿತ ಪ್ರತಿರೋಧ), #DSS (ದಸಂಸ) ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ನೂರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಮ್ಮಿಕೊಂಡಿರುವ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ಆನಂದ್‌ ತೇಲ್ತುಂಬ್ಡೆಯವರು ಉದ್ಘಾಟಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗಕರ್ಮಿ ಸಿ.ಬಸವಲಿಂಗಯ್ಯ ಚಾಲನೆ ನೀಡಲಿದ್ದಾರೆ. 12 ಗಂಟೆಗೆ ಸಮಾವೇಶ ಉದ್ಘಾಟನೆಯಾಗಲಿದ್ದು, ಹಿರಿಯ ದಲಿತ ಹೋರಾಟಗಾರರಾದ ಎನ್‌.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ಕರ್ನಾಟಕ ಸರ್ಕಾರದ ಮಾಜಿ ಅಡ್ವೊಕೇಟ್ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್‌, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಡಾ.ಡಿ.ಜಿ.ಸಾಗರ್‌, ಲಕ್ಷ್ಮಿನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್.ಮುನಿಸ್ವಾಮಿ, ಎಂ.ಸೋಮಶೇಖರ್‌, ಜಗಣಿ ಶಂಕರ್‌, ಎಸ್.ಆರ್‌.ಕೊಲ್ಲೂರು ಪಾಲ್ಗೊಳ್ಳದ್ದಾರೆ.

ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್‌, ರುದ್ರಪ್ಪ ಹನಗವಾಡಿ, ಎಚ್.ಎಂ.ರುದ್ರಸ್ವಾಮಿ, ಲಕ್ಷ್ಮಿಪತಿ ಕೋಲಾರ, ಮಂಗ್ಳೂರು ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್‌, ಎಚ್.ಜನಾರ್ದನ್‌ (ಜನ್ನಿ), ಪಿಚ್ಚಳ್ಳಿ ಶ್ರೀನಿವಾಸ್, ಗೊಲ್ಲಹಳ್ಳಿ ಶಿವಪ್ರಸಾದ್, ಸಿ.ಜಿ.ಶ್ರೀನಿವಾಸನ್, ಬಸವರಾಜ ನಾಯಕ, ಎಚ್.ಎನ್.ಅಣ್ಣಯ್ಯ, ಕುಪ್ಪೆ ನಾಗರಾಜ್, ಅನಂತ ನಾಯಕ್, ಎಂ.ಆರ್‌.ಬೇರಿ, ರಮೇಶ್ ಡಾಕುಳಿಕಿ, ಆದರ್ಶ್ ಯಲ್ಲಪ್ಪ, ಭಾರತಿ ರಾಜಣ್ಣ, ಇಂದಿರಾ ಕೃಷ್ಣಪ್ಪ, ಪುರುಷೋತ್ತಮ ದಾಸ್‌ ಸೇರಿದಂತೆ ಹಲವು ದಲಿತ ಹೋರಾಟಗಾರರು ಹಾಜರಿರಲಿದ್ದಾರೆ.

ದಲಿತ ಪ್ರತಿರೋಧ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಲವಾರು ಜನರು ಟ್ವೀಟರ್‌ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಬರೆದಿದ್ದಾರೆ. “ಸ್ವಾತಂತ್ರ್ಯ ನಮ್ಮ ಹಕ್ಕು, ಸಮಾನತೆ ನಮ್ಮ ಅಗತ್ಯ, ಭ್ರಾತೃತ್ವ ನಮ್ಮ ಕನಸು” ಎಂದು ಲೇಖಾ ಅಡವಿ ಟ್ವೀಟ್ ಮಾಡಿದ್ದಾರೆ.

“ಜಾತಿ ಎಲ್ಲಿದೆ ಎನ್ನುತ್ತಲೇ ಅಸಮಾನತೆ ತೋರುವ ಫ್ಯೂಡಲ್‌‌ಗಳಿಂದ ಮತ್ತು ಜಾತಿ ಶ್ರೇಷ್ಠತೆಯ ಕಾಯಿಲೆಯಿಂದ ನರಳುತ್ತಿರುವವರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಅನಿವಾರ್ಯ. ಅದಕ್ಕಾಗಿಯೇ ಈ ಐಕ್ಯತೆ” ಎಂದು ಮುರುಳಿ ಮಾಲೂರು ಟ್ವೀಟ್ ಮಾಡಿದ್ದಾರೆ.

“ಸಿಂಹದಂತೆ ಸಿಡಿದು ಬನ್ನಿ ಹುಲಿಯಂತೆ ನೆಗೆದು ಬನ್ನಿ ಹೋರಾಟದ ಸಾಗರಕ್ಕೆ ನಾರಿಯರೇ ನಗುತ ಬನ್ನಿ” ಎಂದು ನಿಶಾ ಗೂಳೂರ್‌ ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದಲ್ಲಿ ಶೇ 24 ರಿಂದ 30 ಇರುವ ದಲಿತ ಸಮುದಾಯದಿಂದ ಆದ ಮುಖ್ಯಮಂತ್ರಿಗಳ ಸಂಖ್ಯೆ ಎಷ್ಟು? ಸೊನ್ನೆ! ಇನ್ನು ಮುಂದಾದರೂ ದಲಿತರು ರಾಜಕೀಯವಾಗಿ ಎಚ್ಚರಗೊಳ್ಳಲಿ” ಎಂದು ಶ್ಯಾಮ್ ಎಂಬವರು ಮನವಿ ಮಾಡಿದ್ದಾರೆ.

“ತಳದಲ್ಲಿದ್ದವರು ನಾವು, ಬೂದಿಯಲೆದ್ದವರು, ಕತ್ತಲೆ ಚರಿತ್ರೆಯ ಬೆತ್ತಲೆ ಮಾಡುವ ಕನಸನು ಹೊತ್ತವರು ನಾವು, ಕನಸನು ಹೊತ್ತವರು” ಎಂದು ಗುಲಾಬ್ ಪಾಷಾ ಬರೆದಿದ್ದಾರೆ.

ಸಮಾವೇಶಕ್ಕೆ ಸಂಬಂಧಿಸಿದ ಹತ್ತಾರು ಪೋಸ್ಟರ್‌ಗಳು ಟ್ವಿಟರ್‌ನಲ್ಲಿ ಹರಿದಾಡಿವೆ. ಹೋರಾಟದ ಹಾಡುಗಳ ಸಾಲುಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

“ಒಡೆದು ಹೋದ ದಲಿತ ಸಂಘಟನೆಗಳು ಕೋಮುವಾದಿಗಳಿಗೆ ಸುಲಭ ತುತ್ತುಗಳು. ಐಕ್ಯತೆ ಎಂಬುದು ಅಭಿಯಾನದ ಹೆಸರಲ್ಲ, ಅದು ಹೋರಾಟದ ನಂಬಿಕೆಯ ಮಾರ್ಗ” ಎಂದು ಬಹುತ್ವ ಕರ್ನಾಟಕ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವು ಮುಂದೆ ಮತ ಚಲಾಯಿಸುವುದರ ಮೂಲಕ ಕೋಮುವಾದದ ನಶೆಯಲ್ಲಿರುವ ಸರಕಾರವನ್ನು ಕಿತ್ತೊಗೆದು ಜಾತ್ಯಾತೀತ ಸರಕಾರದ ಭವ್ಯ ಭಾರತವನ್ನ ನಿರ್ಮಾಣ ಮಾಡೋಣ. ಎಲ್ಲರೂ ಭಾರತೀಯರಾಗೋಣ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...