Homeಕರ್ನಾಟಕಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

ಡಿ.6ಕ್ಕೆ ದಲಿತ ಸಾಂಸ್ಕೃತಿಕ ಪ್ರತಿರೋಧ: ಟ್ವಿಟರ್‌ನಲ್ಲಿ ಗಮನ ಸೆಳೆದ ಅಭಿಯಾನ

- Advertisement -
- Advertisement -

ಡಿಸೆಂಬರ್‌ 6ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ‘ದಲಿತರ ಸಾಂಸ್ಕೃತಿಕ ಪ್ರತಿರೋಧ’, ‘ದಲಿತ ಸಂಘಟನೆಗಳ ಬೃಹತ್‌ ಐಕ್ಯತಾ ಸಮಾವೇಶ’ದ ಭಾಗವಾಗಿ ಇಂದು ಟ್ವಿಟರ್‌ನಲ್ಲಿ ಅಭಿಯಾನ ನಡೆದಿದೆ.

#DalitResistance (ದಲಿತ ಪ್ರತಿರೋಧ), #DSS (ದಸಂಸ) ಎಂಬ ಹ್ಯಾಷ್‌ಟ್ಯಾಗ್‌ಗಳಲ್ಲಿ ನೂರಾರು ಟ್ವೀಟ್‌ಗಳನ್ನು ಮಾಡಲಾಗಿದೆ.

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಹಮ್ಮಿಕೊಂಡಿರುವ ಸಮಾವೇಶವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗಳಾದ ರಮಾಬಾಯಿ ಆನಂದ್‌ ತೇಲ್ತುಂಬ್ಡೆಯವರು ಉದ್ಘಾಟಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗಕರ್ಮಿ ಸಿ.ಬಸವಲಿಂಗಯ್ಯ ಚಾಲನೆ ನೀಡಲಿದ್ದಾರೆ. 12 ಗಂಟೆಗೆ ಸಮಾವೇಶ ಉದ್ಘಾಟನೆಯಾಗಲಿದ್ದು, ಹಿರಿಯ ದಲಿತ ಹೋರಾಟಗಾರರಾದ ಎನ್‌.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರಾದ ಇಂದೂಧರ ಹೊನ್ನಾಪುರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್, ಕರ್ನಾಟಕ ಸರ್ಕಾರದ ಮಾಜಿ ಅಡ್ವೊಕೇಟ್ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ಪ್ರಧಾನ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್‌, ಗುರುಪ್ರಸಾದ್ ಕೆರೆಗೋಡು, ವಿ.ನಾಗರಾಜ್, ಡಾ.ಡಿ.ಜಿ.ಸಾಗರ್‌, ಲಕ್ಷ್ಮಿನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ ಭದ್ರೆ, ಎನ್.ಮುನಿಸ್ವಾಮಿ, ಎಂ.ಸೋಮಶೇಖರ್‌, ಜಗಣಿ ಶಂಕರ್‌, ಎಸ್.ಆರ್‌.ಕೊಲ್ಲೂರು ಪಾಲ್ಗೊಳ್ಳದ್ದಾರೆ.

ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ, ರಾಮದೇವ ರಾಕೆ, ಕೆ.ರಾಮಯ್ಯ, ಶಿವಾಜಿ ಗಣೇಶನ್‌, ರುದ್ರಪ್ಪ ಹನಗವಾಡಿ, ಎಚ್.ಎಂ.ರುದ್ರಸ್ವಾಮಿ, ಲಕ್ಷ್ಮಿಪತಿ ಕೋಲಾರ, ಮಂಗ್ಳೂರು ವಿಜಯ, ಹುಲ್ಕೆರೆ ಮಹಾದೇವ, ಬಾಬು ಬಂಡಾರಿಗಲ್‌, ಎಚ್.ಜನಾರ್ದನ್‌ (ಜನ್ನಿ), ಪಿಚ್ಚಳ್ಳಿ ಶ್ರೀನಿವಾಸ್, ಗೊಲ್ಲಹಳ್ಳಿ ಶಿವಪ್ರಸಾದ್, ಸಿ.ಜಿ.ಶ್ರೀನಿವಾಸನ್, ಬಸವರಾಜ ನಾಯಕ, ಎಚ್.ಎನ್.ಅಣ್ಣಯ್ಯ, ಕುಪ್ಪೆ ನಾಗರಾಜ್, ಅನಂತ ನಾಯಕ್, ಎಂ.ಆರ್‌.ಬೇರಿ, ರಮೇಶ್ ಡಾಕುಳಿಕಿ, ಆದರ್ಶ್ ಯಲ್ಲಪ್ಪ, ಭಾರತಿ ರಾಜಣ್ಣ, ಇಂದಿರಾ ಕೃಷ್ಣಪ್ಪ, ಪುರುಷೋತ್ತಮ ದಾಸ್‌ ಸೇರಿದಂತೆ ಹಲವು ದಲಿತ ಹೋರಾಟಗಾರರು ಹಾಜರಿರಲಿದ್ದಾರೆ.

ದಲಿತ ಪ್ರತಿರೋಧ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಲವಾರು ಜನರು ಟ್ವೀಟರ್‌ ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಬರೆದಿದ್ದಾರೆ. “ಸ್ವಾತಂತ್ರ್ಯ ನಮ್ಮ ಹಕ್ಕು, ಸಮಾನತೆ ನಮ್ಮ ಅಗತ್ಯ, ಭ್ರಾತೃತ್ವ ನಮ್ಮ ಕನಸು” ಎಂದು ಲೇಖಾ ಅಡವಿ ಟ್ವೀಟ್ ಮಾಡಿದ್ದಾರೆ.

“ಜಾತಿ ಎಲ್ಲಿದೆ ಎನ್ನುತ್ತಲೇ ಅಸಮಾನತೆ ತೋರುವ ಫ್ಯೂಡಲ್‌‌ಗಳಿಂದ ಮತ್ತು ಜಾತಿ ಶ್ರೇಷ್ಠತೆಯ ಕಾಯಿಲೆಯಿಂದ ನರಳುತ್ತಿರುವವರಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಹೋರಾಟ ಅನಿವಾರ್ಯ. ಅದಕ್ಕಾಗಿಯೇ ಈ ಐಕ್ಯತೆ” ಎಂದು ಮುರುಳಿ ಮಾಲೂರು ಟ್ವೀಟ್ ಮಾಡಿದ್ದಾರೆ.

“ಸಿಂಹದಂತೆ ಸಿಡಿದು ಬನ್ನಿ ಹುಲಿಯಂತೆ ನೆಗೆದು ಬನ್ನಿ ಹೋರಾಟದ ಸಾಗರಕ್ಕೆ ನಾರಿಯರೇ ನಗುತ ಬನ್ನಿ” ಎಂದು ನಿಶಾ ಗೂಳೂರ್‌ ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದಲ್ಲಿ ಶೇ 24 ರಿಂದ 30 ಇರುವ ದಲಿತ ಸಮುದಾಯದಿಂದ ಆದ ಮುಖ್ಯಮಂತ್ರಿಗಳ ಸಂಖ್ಯೆ ಎಷ್ಟು? ಸೊನ್ನೆ! ಇನ್ನು ಮುಂದಾದರೂ ದಲಿತರು ರಾಜಕೀಯವಾಗಿ ಎಚ್ಚರಗೊಳ್ಳಲಿ” ಎಂದು ಶ್ಯಾಮ್ ಎಂಬವರು ಮನವಿ ಮಾಡಿದ್ದಾರೆ.

“ತಳದಲ್ಲಿದ್ದವರು ನಾವು, ಬೂದಿಯಲೆದ್ದವರು, ಕತ್ತಲೆ ಚರಿತ್ರೆಯ ಬೆತ್ತಲೆ ಮಾಡುವ ಕನಸನು ಹೊತ್ತವರು ನಾವು, ಕನಸನು ಹೊತ್ತವರು” ಎಂದು ಗುಲಾಬ್ ಪಾಷಾ ಬರೆದಿದ್ದಾರೆ.

ಸಮಾವೇಶಕ್ಕೆ ಸಂಬಂಧಿಸಿದ ಹತ್ತಾರು ಪೋಸ್ಟರ್‌ಗಳು ಟ್ವಿಟರ್‌ನಲ್ಲಿ ಹರಿದಾಡಿವೆ. ಹೋರಾಟದ ಹಾಡುಗಳ ಸಾಲುಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

“ಒಡೆದು ಹೋದ ದಲಿತ ಸಂಘಟನೆಗಳು ಕೋಮುವಾದಿಗಳಿಗೆ ಸುಲಭ ತುತ್ತುಗಳು. ಐಕ್ಯತೆ ಎಂಬುದು ಅಭಿಯಾನದ ಹೆಸರಲ್ಲ, ಅದು ಹೋರಾಟದ ನಂಬಿಕೆಯ ಮಾರ್ಗ” ಎಂದು ಬಹುತ್ವ ಕರ್ನಾಟಕ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾವು ಮುಂದೆ ಮತ ಚಲಾಯಿಸುವುದರ ಮೂಲಕ ಕೋಮುವಾದದ ನಶೆಯಲ್ಲಿರುವ ಸರಕಾರವನ್ನು ಕಿತ್ತೊಗೆದು ಜಾತ್ಯಾತೀತ ಸರಕಾರದ ಭವ್ಯ ಭಾರತವನ್ನ ನಿರ್ಮಾಣ ಮಾಡೋಣ. ಎಲ್ಲರೂ ಭಾರತೀಯರಾಗೋಣ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...