Homeಮುಖಪುಟದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ, ಅಪ್ರಾಪ್ತ ದಲಿತ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಗು ಎಂದು ಪ್ರತಿಭಟನೆ ಆರಂಭಿಸಿದ್ದಾರೆ.

- Advertisement -
- Advertisement -

ದೆಹಲಿಯ ಪೂಜಾರಿಯೊಬ್ಬ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ನಂತರ ಬಲವಂತವಾಗಿ ಶವಸಂಸ್ಕಾರ ಮಾಡಿದ ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ, ಅಪ್ರಾಪ್ತ ದಲಿತ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಗು ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಮಾನುಷ ಘಟನೆ ಕುರಿತು ವಿಷಾಧ ವ್ಯಕ್ತಪಡಿಸಿದ್ದು ನಾಳೆ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ನ್ಯಾಯಕ್ಕಾಗಿನ ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.

ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ಎಡ ಮಣಿಕಟ್ಟು ಮತ್ತು ಮೊಣಕೈ ನಡುವೆ ಸುಟ್ಟ ಗುರುತುಗಳಿದ್ದು, ಆಕೆಯ ತುಟಿಗಳು ಸಹ ನೀಲಿ ಬಣ್ಣದಲ್ಲಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಈ ವಿಷಯ ತಿಳಿದು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ನೆರೆಹೊರೆಯ ಜನರು ಪೂಜಾರಿಯನ್ನು ಥಳಿಸಿದಾಗ ಆತ ಅತ್ಯಾಚಾಸವೆಸಗಿ ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೋಷಕರು ಮೂಕನಾಯಕ ಚಾನೆಲ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ.


ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...