Homeಮುಖಪುಟದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ, ಅಪ್ರಾಪ್ತ ದಲಿತ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಗು ಎಂದು ಪ್ರತಿಭಟನೆ ಆರಂಭಿಸಿದ್ದಾರೆ.

- Advertisement -
- Advertisement -

ದೆಹಲಿಯ ಪೂಜಾರಿಯೊಬ್ಬ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ನಂತರ ಬಲವಂತವಾಗಿ ಶವಸಂಸ್ಕಾರ ಮಾಡಿದ ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ, ಅಪ್ರಾಪ್ತ ದಲಿತ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಗು ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಮಾನುಷ ಘಟನೆ ಕುರಿತು ವಿಷಾಧ ವ್ಯಕ್ತಪಡಿಸಿದ್ದು ನಾಳೆ ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿ ನ್ಯಾಯಕ್ಕಾಗಿನ ಎಲ್ಲಾ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ.

ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ಎಡ ಮಣಿಕಟ್ಟು ಮತ್ತು ಮೊಣಕೈ ನಡುವೆ ಸುಟ್ಟ ಗುರುತುಗಳಿದ್ದು, ಆಕೆಯ ತುಟಿಗಳು ಸಹ ನೀಲಿ ಬಣ್ಣದಲ್ಲಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಈ ವಿಷಯ ತಿಳಿದು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ನೆರೆಹೊರೆಯ ಜನರು ಪೂಜಾರಿಯನ್ನು ಥಳಿಸಿದಾಗ ಆತ ಅತ್ಯಾಚಾಸವೆಸಗಿ ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೋಷಕರು ಮೂಕನಾಯಕ ಚಾನೆಲ್‌ಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ.


ಇದನ್ನೂ ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...