Homeದಲಿತ್ ಫೈಲ್ಸ್ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ

ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ

- Advertisement -
- Advertisement -

ಜಾತಿ ದೌರ್ಜನ್ಯ ಮತ್ತು ಹಿಂಸಾಚಾರದ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಸೋಮವಾರ (ಅ.20) ರಾತ್ರಿ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಗ್ವಾಲಿಯರ್‌ನ ದಲಿತ ಚಾಲಕನನ್ನು ಮೂವರು ಪ್ರಬಲ ಜಾತಿಯ ವ್ಯಕ್ತಿಗಳು ಅಪಹರಿಸಿ, ಹಲ್ಲೆ ಮಾಡಿ, ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ.

ಸಂತ್ರಸ್ತ ಆಸ್ಪತ್ರೆ ಸೇರುವಂತೆ ಮಾಡಿರುವ ಈ ಕ್ರೌರ್ಯವು, ಆಳವಾಗಿ ಬೇರೂರಿರುವ ಜಾತಿ ಹಿಂಸಾಚಾರ ಮತ್ತು ದಲಿತ ಕಾರ್ಮಿಕರ ಘನತೆ ಹಾಗೂ ರಕ್ಷಣೆಯನ್ನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಎತ್ತಿ ತೋರಿಸುತ್ತದೆ.

ಆರೋಪಿಗಳು ಸಂತ್ರಸ್ತನನ್ನು ಗ್ವಾಲಿಯರ್‌ನ ದೀನದಯಾಳ್ ನಗರದಿಂದ ಅಪಹರಿಸಿ ಭಿಂಡ್‌ನ ಸುರಪುರ ಗ್ರಾಮಕ್ಕೆ ಕರೆದೊಯ್ದಿದ್ದರು. ಅಲ್ಲಿ ಹಿಗ್ಗಾಮುಗ್ಗಾ ಥಳಿಸಿ, ಬಲವಂತವಾಗಿ ಮದ್ಯ ಕುಡಿಸಿ, ಮೂತ್ರ ವಿಸರ್ಜನೆ ಮಾಡಿದ್ದಾರೆ. ನಂತರ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಬದಿಯಲ್ಲಿ ಎಸೆದು ಹೋಗಿದ್ದಾರೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಸಂಬಂಧಿಕರಿಗೆ ಕರೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದರು. ಅವರು ಆತನನ್ನು ಭಿಂಡ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನು ಬರುವಾ (22), ಅಲೋಕ್ ಪಾಠಕ್ (40) ಮತ್ತು ಛೋಟು ಓಜಾ (27) ಆರೋಪಿಗಳು. ಎಲ್ಲರೂ ಭಿಂಡ್ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿಯೇ ಮೂವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಠಕ್ ಅವರ ಮಾಹಿತಿ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ಹೇಳಿದೆ.

ಪೊಲೀಸರು ಆರೋಪಿಗಳ ಬಂಧನದ ಬಗ್ಗೆ ದೃಢಪಡಿಸಿದ್ದಾರೆ. ಆದರೆ, ಸಂತ್ರಸ್ತಗೆ ಮೂತ್ರ ಕುಡಿಸಲಾಗಿದೆ ಎಂಬುದನ್ನೂ ಒಳಗೊಂಡಂತೆ ಕೆಲವು ಆರೋಪಗಳು ಪರಿಶೀಲನೆಯಲ್ಲಿವೆ ಎಂದು ತಿಳಿಸಿದ್ದಾರೆ.

ಸಂತ್ರಸ್ತ ಆರೋಪಿಯ ವಾಹನವನ್ನು ಓಡಿಸಲು ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಎಸ್ಪಿ ಪಾಠಕ್ ಹೇಳಿದ್ದಾರೆ. ವರದಿಗಳ ಪ್ರಕಾರ, ಆರೋಪಿಗಳಲ್ಲಿ ಒಬ್ಬನ ವಾಹನ ಚಾಲಕನಾಗಿ ದುಡಿಯುತ್ತಿದ್ದ ಸಂತ್ರಸ್ತ, ಇತ್ತೀಚೆಗೆ ಕೆಲಸ ತೊರೆದಿದ್ದರು.

ಹಲ್ಲೆ ಮತ್ತು ಅಪಹರಣಕ್ಕಾಗಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಧ್ಯಪ್ರದೇಶ: ಕೊಟ್ಟ ಹಣ ವಾಪಸ್ ಕೇಳಿದ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...