Homeಮುಖಪುಟಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

ಸವರ್ಣಿಯ ಶಾಸಕನಿಂದ ಹಲ್ಲೆಗೊಳಗಾಗಿ 17 ತಿಂಗಳು ಆಸ್ಪತ್ರೆ ಪಾಲಾದ ದಲಿತ ಎಂಜಿನಿಯರ್

- Advertisement -
- Advertisement -

ರಾಜಸ್ಥಾನದ ಧೋಲ್‌ಪುರದಲ್ಲಿ ಇಂಜಿನಿಯರ್ ಆಗಿದ್ದ ದಲಿತ ಸಮುದಾಯದ ಹರ್ಷಾಧಿಪತಿ ಅವರ ಮೇಲೆ  ಕಾಂಗ್ರೆಸ್ ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಮತ್ತು ತಂಡ  ಹಲ್ಲೆ ನಡೆಸಿದ್ದರು. ಕಳೆದ ವರ್ಷ ಮಾರ್ಚ್ 28 ರಂದು ಘಟನೆ ನಡೆದಿದ್ದು ಆರೋಪಪಟ್ಟಿ ಇನ್ನು ಕೂಡ ಸಲ್ಲಿಕೆಯಾಗಿಲ್ಲ ಎನ್ನಲಾಗಿದೆ.

ಹರ್ಷಾಧಿಪತಿ ಸರಕಾರದ ವಿದ್ಯುತ್ ಬಿಲ್ ವಸೂಲಾತಿಗಾಗಿ ಗ್ರಾಮಗಳಿಗೆ ತೆರಳಿದ್ದರು. ಹಲವು ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದವರಲ್ಲಿ ಬಿಲ್ ಕಟ್ಟುವಂತೆ ಆಗ್ರಹಿಸಿದ್ದರು. ಈ ವೇಳೆ ಜನರು  ನನ್ನ ಜಾತಿಯನ್ನು ಕೇಳಿದರು ಮತ್ತು ನನ್ನನ್ನು ಸುತ್ತುವರೆದರು. ನಾನು ಠಾಕೂರ್ ಗ್ರಾಮವನ್ನು ಪ್ರವೇಶಿಸಲು ಹೇಗೆ ಧೈರ್ಯ ಮಾಡಿದ್ದೇನೆ ಎಂದು ಕೇಳಿದರು. ವ್ಯಕ್ತಿಯೊಬ್ಬರು ನನ್ನನ್ನು ಶಾಸಕ ಮಾಲಿಂಗ ಎಂದು ಹೇಳಿದ ವ್ಯಕ್ತಿಯೊಂದಿಗೆ ಫೋನ್‌ನಲ್ಲಿ ಮಾತನಾಡುವಂತೆ ಹೇಳಿದರು. ಅವರು ನನ್ನನ್ನು ನಿಂದಿಸಿದರು ಮತ್ತು ಬೆದರಿಕೆ ಹಾಕಿದರು ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ.

ಮಾರ್ಚ್ 28 ರಂದು ರಜಪೂತ ಸಮುದಾಯದ, ಮೂರು ಬಾರಿ ಶಾಸಕರಾಗಿದ್ದ ಮಾಲಿಂಗ ಅವರು ತಮ್ಮ ಸಹಚರರೊಂದಿಗೆ ತಮ್ಮ ಕಚೇರಿಗೆ ನುಗ್ಗಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹರ್ಷಾಧಿಪತಿ ಆರೋಪಿಸಿದ್ದಾರೆ. ಅವರನ್ನು ಮೊದಲು ಆಗ್ರಾದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು ಎಂದು ಹೇಳಿದ್ದಾರೆ.

ಆ ವೇಳೆ ಮಾಲಿಂಗ ಅವರು ಆರೋಪಗಳನ್ನು ಸುಳ್ಳು ಮತ್ತು ಆಧಾರರಹಿತ ಎಂದು ಕರೆದಿದ್ದರು ಮತ್ತು ಕೆಲವು ಬಿಜೆಪಿ ನಾಯಕರ ಆಜ್ಞೆಯ ಮೇರೆಗೆ ಎಫ್‌ಐಆರ್‌ನಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಹೇಳಿದ್ದರು.

ಮಾಲಿಂಗ ಸೇರಿ ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ, ರಾಜಸ್ಥಾನ ಪೊಲೀಸರು ಇತರ ಆರೋಪಿಗಳನ್ನು ಬಂಧಿಸಿದ್ದು, ಶಾಸಕ ಮಾಲಿಂಗ ಅವರನ್ನು ಬಂಧಿಸಿಲ್ಲ.

ಮೇ 11, 2022 ರಂದು ಅವರು ಗೆಹ್ಲೋಟ್ ಅವರನ್ನು ಭೇಟಿಯಾದ ನಂತರ ಅವರು ಪೊಲಿಸರಿಗೆ ಶರಣಾದರು. ಧೋಲ್‌ಪುರದ ಸ್ಥಳೀಯ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ಇದರ ಮರುದಿನ ಕೋವಿಡ್‌ ಇದೆ ಎಂದು  ಆಸ್ಪತ್ರೆಗೆ ಸೇರಿದ್ದರು. ಒಂದು ವಾರದಲ್ಲಿ ಮಾಲಿಂಗ ಅವರಿಗೆ ಹೈಕೋರ್ಟ್ ಜಾಮೀನು ನೀಡಿತ್ತು.

28 ವರ್ಷ ವಯಸ್ಸಿನ ಹರ್ಷಾಧಿಪತಿ ಘಟನೆ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿ ನಡೆದಾಡಲು 17 ತಿಂಗಳುಗಳು ಬೇಕಾಗಿದೆ. ಹರ್ಷಾಧಿಪತಿ ದಿನವಿಡಿ ಹಾಸಿಗೆಯ ಮೇಲೆ ಮಲಗಿರುತ್ತಿದ್ದರು. ಹರ್ಷಾಧಿಪತಿ ಅವರಿಗೆ ಮೂಳೆ ಮುರಿತ ಸೇರಿದಂತೆ ಅನೇಕ ಭಾಗಗಳಲ್ಲಿ ಮುರಿತ ಉಂಟಾಗಿತ್ತು  ಎಂದು ಸರ್ಕಾರಿ ವೈದ್ಯರೊಬ್ಬರು ತಿಳಿಸಿದ್ದಾರೆ.

ನನ್ನ ದೈಹಿಕ ಗಾಯಗಳು  ಗುಣವಾಗಿದ್ದರೂ, ನಾನು ಪ್ರತಿದಿನ ಅನ್ಯಾಯದ ಭಾವನೆ ಅನುಭವಿಸುತ್ತಿದ್ದೇನೆ. ಶಾಸಕ ಗಿರರಾಜ್ ಸಿಂಗ್ ಮಾಲಿಂಗ ಅವರು ನನ್ನ ಮೇಲೆ ಕುರ್ಚಿ ಎಸೆದು, ಜಾತಿ ನಿಂದನೆಗಳನ್ನು ಮಾಡಿದರು. ಒಂದೂವರೆ ವರ್ಷ ಕಳೆದರೂ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ. ಆರೋಪಿಯನ್ನು ರಕ್ಷಿಸಲಾಗುತ್ತಿದೆ ಎಂದು ಸಂತ್ರಸ್ತ ಹರ್ಷಾಧಿಪತಿ ಹೇಳಿದ್ದಾರೆ.

ಇದನ್ನು ಓದಿ: ಆದಿವಾಸಿ ಯುವಕನ ಎನ್‌ಕೌಂಟರ್: ಮರುತನಿಖೆಗೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...